ಶಿರಹಟ್ಟಿ ತಾಪಂ ಕೆಡಿಪಿ ಸಭೆಯಲ್ಲಿ ಮಹಾಮಾರಿ ಕೋವಿಡ್ ನದ್ದೇ ಮಾತು
Team Udayavani, Sep 8, 2020, 5:17 PM IST
ಶಿರಹಟ್ಟಿ: ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ತಾಪಂ ಅಧ್ಯಕ್ಷ ಈಶ್ವರಪ್ಪ ಲಮಾಣಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಹಲವು ವಿಷಯಗಳ ಚರ್ಚೆಯಾಗಿ ಬರೀ ಕೊರೊನಾ ಮಾತುಗಳೇ ಹೆಚ್ಚಾಗಿ ಕೇಳಿಬಂದವು.
ಈ ವೇಳೆ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಜೋಗಿ ಮಾತನಾಡಿ, ತಾಲೂಕಿನ ಪರಸಾಪುರ ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟು 5 ದಿನ ಕಳೆದರೂ ಆರೋಗ್ಯ ಇಲಾಖೆ ಅಧಿ ಕಾರಿಗಳು ಸೋಂಕಿತ ವ್ಯಕ್ತಿಯನ್ನು ಕ್ವಾರಂಟೈನ್ ಮಾಡಿಲ್ಲ.ಅವರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಇಲಾಖೆ ವೈದ್ಯಾಧಿ ಕಾರಿಗಳು ನಿರ್ಲಕ್ಷ್ಯತೋರುತ್ತಿದ್ದಾ ರೆ. ಇದರಿಂದಾಗಿ ಸೋಂಕಿತ ವ್ಯಕ್ತಿ ನಿರ್ಭಯವಾಗಿ ಗ್ರಾಮದಲ್ಲಿ ಓಡಾಡುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ ಎಂದು ಸಭೆಗೆ ದೂರಿದರು.
ಈ ಪ್ರಕರಣವನ್ನು ತಾಲೂಕು ವೈದ್ಯಾಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸೋಂಕಿತ ವ್ಯಕ್ತಿಯನ್ನು ಕ್ವಾರಂಟೈನ್ಗೆ ಒಳಪಡಿಸಿ, ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಿಗೆ ಪೂರೈಸಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ. ಲಾಕ್ಡೌನ್ ಸಂದರ್ಭದಲ್ಲಿ(ಏಪ್ರಿಲ್ ನಿಂದ ಜುಲೈವರೆಗೆ) ಮಕ್ಕಳಿಗೆ ಆಹಾರ ಧಾನ್ಯ ವಿತರಿಸದಿದ್ದರೂ, ಬಿಲ್ ಪಾವತಿಸಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪರಿಶೀಲಿಸುವಂತೆ ತಾಪಂ ಅಧ್ಯಕ್ಷ ಈಶ್ವರಪ್ಪ ಲಮಾಣಿ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪ್ರಗತಿ ಕಾಲೋನಿ ಅಭಿವೃದ್ಧಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಅಳವಡಿಸಿರುವ ಹೈಮಾಸ್ಟ್ ವಿದ್ಯುತ್ ದೀಪಗಳು ಒಂದೇ ವರ್ಷದಲ್ಲಿ ಹಾಳಾಗಿವೆ. ಪರಿಣಾಮ ಸರ್ಕಾರದ ಲಕ್ಷಾಂತರ ರೂ. ಅನುದಾನ ಪೋಲಾಗಿದೆ. ಕಾಮಗಾರಿ ಗುತ್ತಿಗೆ ಸಂಸ್ಥೆ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ತಾಪಂ ಸದಸ್ಯ ತಿಪ್ಪಣ್ಣ ಕೊಂಚಿಗೇರಿ ಮನವಿ ಮಾಡಿದರು.
ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಪವಿತ್ರಾ ಎಸ್., ತಾಪಂ ಇಒ ನಿಂಗಪ್ಪ ಓಲೇಕಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ