ವೀರ ಸಾವರ್ಕರ್ ಮೇಲ್ಸೇತುವೆ ಲೋಕಾರ್ಪಣೆ
ಸಾವರ್ಕರ್ ಹೆಸರು ಸೂಕ್ತ ಎಂದ ಸಿಎಂ ಯಡಿಯೂರಪ್ಪ
Team Udayavani, Sep 9, 2020, 9:52 AM IST
ಯಲಹಂಕ: ಯಲಹಂಕದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿರುವ ಮೇಲ್ಸೇತುವೆಗೆ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಹೆಸರಿಟ್ಟಿರುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ. ಬಿ.ಎಸ್.ಯಡಿಯೂರಪ್ಪ ಹೇಳಿದರು.
ನವನಗರೋತ್ಥಾನ ಯೋಜನೆಯಡಿ 34ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಿ, ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿ, ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಬಿಬಿಎಂಪಿಗೆ 7,300 ಕೋಟಿ ಅನುದಾನ ಒದಗಿಸಲಾಗಿದ್ದು, ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿದೆ. ನವ ನಗರೋತ್ಥಾನ, ಸಾಗರೋತ್ಥಾನ ಯೋಜನೆಯಡಿ ಬೆಂಗಳೂರು ಸೇರಿದಂತೆ ರಾಜ್ಯದ ನಗರಗಳ ಅಭಿ ವೃದ್ಧಿಗೆ ಸರ್ಕಾರ ಆದ್ಯತೆ ನೀಡಲಾಗುತ್ತಿದೆ ಎಂದರು.
ಈ ಅನುದಾನದಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣ, ಕೆರೆ ಅಭಿವೃದ್ಧಿ , ರಸ್ತೆ ಹಾಗೂ ಪಾದಚಾರಿ ರಸ್ತೆ, ನೀರುಕಾಲುವೆ, ಬಿಬಿಎಂಪಿಗೆ ಸೇರಿದ ಹೊಸ ಗ್ರಾಮಗಳ ಅಭಿವೃದ್ಧಿ, ಉದ್ಯಾನವನ, ಸ್ಟೇಡಿಯಂ ನಿರ್ಮಾಣ ಇತರ ಕಾಮಗಾರಿ ನಡೆಯಲಿದೆ ಎಂದರು. ಶುಭ್ರ
ಬೆಂಗಳೂರು ಯೋಜನೆಗೆ 999 ಕೋಟಿ: ಶುಭ್ರ ಬೆಂಗಳೂರು ಯೋಜನೆಯಡಿ 999 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಕೇಂದ್ರ ಮತ್ತು ರಾಜ್ಯಸರ್ಕಾರ ಸ್ಮಾರ್ಟ್ಸಿಟಿ ಯೋಜನೆಯಡಿ 30ಕಿ.ಮೀ. ಉದ್ದದ ಪ್ರಮುಖ 36 ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳ ಅಡಿಯಲ್ಲಿ 455 ಕೋಟಿ ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾಗುವುದು ಎಂದರು.
ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಸಾವರ್ಕರ್ ಆತ್ಮಾಹುತಿ ಪುಸ್ತಕವನ್ನು ಓದಬೇಕು ಅದಕ್ಕಾಗಿ ಉದ್ಘಾಟನೆ ದಿನದಂದೆ 5ಸಾವಿರ ಜನರಿಗೆ ಹಂಚಲಾಗಿದೆ ಎಂದರು.
ಎರಡು ಭಾರಿ ಮುಂದೂಡಿಕೆ: ಮೇಲ್ಸೇತುವೆಗೆ ಮೇ.28ರಂದೇ ಸಾವರ್ಕರ್ ಹೆಸರಿಡಲು ದಿನ ನಿಗದಿಪಡಿಸಲಾಗಿತ್ತು. ಇದಕ್ಕೆ ಪ್ರತಿಪಕ್ಷಗಳು, ಸಂಘಟನೆಗಳು ಅಡ್ಡಿಯುಂಟು ಮಾಡಿದ್ದವು. ಜತೆಗೆ ಗೆಜೆಟ್ ನೋಟಿಫಿಕೇಷನ್ ಘೋಷಿಸದ ಕಾರಣ ಸರ್ಕಾರ ಕಾರ್ಯಕ್ರಮ ರದ್ದುಮಾಡಿತ್ತು. ನಿಯಮದಂತೆ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಂಡ ಮೇಲೆ ಹೆಸರಿಡಲು ದಾರಿ ಸುಗಮವಾಯಿತು. ಬಳಿಕ ಸೆ. 1ಕ್ಕೆ ಮಾಜಿ ರಾಷ್ಟ್ರಪತಿಪ್ರಣಬ್ ಮುಖರ್ಜಿ ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮತ್ತೂಮ್ಮೆ ಮುಂದೂಡಲಾಗಿತ್ತು. ವಿವಿಧ ರಸ್ತೆಗಳಿಗೆ ಮಾರ್ಗ: 800 ಮೀ. ಉದ್ದದ ನಾಲ್ಕು ಪಥದ ಮೇಲ್ಸೆತುವೆ ರಸ್ತೆ ಮೂರು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು, ಯಶವಂತಪುರ, ಜಾಲಹಳ್ಳಿ ವಿದ್ಯಾರಣ್ಯಪುರ ಕಡೆಯಿಂದ ದೊಡ್ಡಬಳ್ಳಾಪುರ ಹಾಗೂ ಏರ್ಪೋರ್ಟ್ ಕಡೆಯ ಮಾರ್ಗಕ್ಕೆ ಸಂಪರ್ಕ ಕಲ್ಪಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ