ಮುಂಬೈ ಮಹಾನಗರ ಪಾಲಿಕೆಗೆ ಮುಖಭಂಗ; ಕಂಗನಾ ಕಟ್ಟಡ ಧ್ವಂಸ ಕಾರ್ಯಕ್ಕೆ ಹೈಕೋರ್ಟ್ ತಡೆ
ಕಂಗನಾ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿತ್ತು.
Team Udayavani, Sep 9, 2020, 2:14 PM IST
ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್ ಗೆ ಸೇರಿದ್ದ ಮುಂಬೈ ಕಚೇರಿ ಕಟ್ಟಡವನ್ನು ಧ್ವಂಸಗೊಳಿಸದಂತೆ ಬಾಂಬೆ ಹೈಕೋರ್ಟ್ ಬುಧವಾರ(ಸೆ.09, 2020) ತಡೆಯಾಜ್ಞೆ ನೀಡಿದ್ದು, ಈ ಮೂಲಕ ಬೃಹನ್ಮುಂಬಯಿ ಮಹಾನಗರ ಪಾಲಿಕೆ ಅಧಿಕಾರಿಗಳ ಕಾರ್ಯಾಚರಣೆ ವಿರುದ್ಧ ತಡೆ ನೀಡಿದಂತಾಗಿದೆ.
ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದಿಂದ ಮುಂಬೈಗೆ ಆಗಮಿಸುವ ಮುನ್ನವೇ ಕಟ್ಟಡ ಧ್ವಂಸದ ಬಗ್ಗೆ ಬಿಎಂಸಿ ನೋಟಿಸ್ ಜಾರಿಗೊಳಿಸಿತ್ತು. ಬುಧವಾರ ಬೆಳಗ್ಗೆ ಕಂಗನಾ ಪರ ವಕೀಲ ಬಾಂಬೆ ಹೈಕೋರ್ಟ್ ಗೆ ಬಿಎಂಸಿ ಕಾರ್ಯಾಚರಣೆ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು, ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಎಂಸಿ ಕಾರ್ಯಾಚರಣೆಗೆ ತಡೆ ನೀಡಿದ್ದು, ನಾಳೆ ಮಧ್ಯಾಹ್ನ 3ಗಂಟೆಗೆ ವಿಚಾರಣೆ ಮುಂದೂಡಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಕಂಗನಾ ರನೌತ್ ವಿರುದ್ಧ ವಿವಾದ : ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಬೆದರಿಕೆ ಕರೆ
ವಾಣಿಜ್ಯ ನಗರಿ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಆಡಳಿತಾರೂಢ ಶಿವಸೇನೆ ಕೆಂಗಣ್ಣಿಗೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಮುಂಬೈಗೆ ಆಗಮಿಸಿದ್ದು, ಕಂಗನಾ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿತ್ತು. ಬುಧವಾರ ಬೆಳಗ್ಗೆ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ಅಧಿಕಾರಿಗಳು ಅಕ್ರಮವಾಗಿ ಕಚೇರಿ ಕಟ್ಟಿರುವುದಾಗಿ ಆರೋಪಿಸಿದ್ದು, ಕಟ್ಟಡವನ್ನು ನೆಲಸಮಗೊಳಿಸಲು ಆರಂಭಿಸಿದ್ದರು.
ಮುಂಬೈನ ಪ್ರತಿಷ್ಠಿತ ಪಾಲಿ ಹಿಲ್ ಪ್ರದೇಶದಲ್ಲಿರುವ ನಟಿ ಕಂಗನಾ ರನೌತ್ ಮಣಿಕರ್ಣಿಕಾ ಫಿಲ್ಮ್ ಕಚೇರಿಯನ್ನು ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ ಅಧಿಕಾರಿಗಳು ಒಡೆಯುತ್ತಿರುವುದಾಗಿ ಕಂಗನಾ ಟ್ವೀಟ್ ನಲ್ಲಿ ತಿಳಿಸಿದ್ದರು.
ಇದನ್ನೂ ಓದಿ: ಈ ದೇಶದ ಹೆಣ್ಣು ಮಕ್ಕಳು ನಿಮ್ಮನ್ನೆಂದೂ ಕ್ಷಮಿಸಲ್ಲ: ಸಂಜಯ್ ಗೆ ತಿರುಗೇಟು ನೀಡಿದ ಕಂಗನಾ !
ಪೊಲೀಸರ ಭದ್ರತೆಯೊಂದಿಗೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕಂಗನಾ ಕಚೇರಿಯನ್ನು ಧ್ವಂಸಗೊಳಿಸುತ್ತಿರುವ ವಿಡಿಯೋ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದು, ಮುಂಬೈ ಯಾರ ಆಸ್ತಿ ಎಂದು ಕಂಗನಾ ಮತ್ತೊಮ್ಮೆ ಕಿಡಿಕಾರಿದ್ದರು.
“ತನ್ನ ಕಚೇರಿಯನ್ನು ರಾಮಮಂದಿರಕ್ಕೆ ಹೋಲಿಸಿರುವ ಕಂಗನಾ ರನೌತ್, ಬಾಬರ್ ಇದನ್ನು ಒಡೆದು ಹಾಕುತ್ತಿರುವುದಾಗಿ ಪ್ರತಿಕ್ರಿಯೆ ನೀಡುವ ಮೂಲಕ ಶಿವಸೇನಾ ನೇತೃತ್ವದ ಸರ್ಕಾರಕ್ಕೆ” ತಿರುಗೇಟು ನೀಡಿದ್ದರು.
ಇದನ್ನೂ ಓದಿ: ಥ್ಯಾಂಕ್ಸ್ ಅಮಿತ್ ಶಾಜೀ: ಬಾಲಿವುಡ್ ನಟಿ ಕಂಗನಾಗೆ “ವೈ” ಕೆಟಗರಿ ಭದ್ರತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!