ಹೆಸರು-ಉದ್ದು ಖರೀದಿ ಕೇಂದ್ರ ಆರಂಭಿಸಲು ಆಗ್ರಹ
Team Udayavani, Sep 9, 2020, 4:01 PM IST
ಚಿಂಚೋಳಿ: ತಾಲೂಕಿನಲ್ಲಿ ಹೆಸರು, ಉದ್ದು ಖರೀದಿ ಕೇಂದ್ರ ಪ್ರಾರಂಭಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಸುಲೇಪೇಟ ಗ್ರಾಮದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರಸ್ತೆಗೆ ಹೆಸರು ಕಾಳು ಚೆಲ್ಲಿ ಎತ್ತುಗಳೊಂದಿಗೆ ಪ್ರತಿಭಟನೆ ನಡೆಸಿದರು.
ಈ ವೇಳೆ ರೈತ ಮುಖಂಡ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ತಾಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಹೆಸರು, ಉದ್ದು, ತೊಗರಿ ಬೆಳೆಗಳು ಸಂಪೂರ್ಣ ಹಾನಿಗೊಂಡಿವೆ. ಇದರಿಂದಾಗಿ ರೈತರ ಜೀವನ ದಿವಾಳಿಯಾಗುತ್ತಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರವನ್ನು ಮುಖ್ಯಮಂತ್ರಿಗಳು ಘೋಷಣೆ ಮೂಲಕ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿದರು.
ಮುಂಗಾರು ಬಿತ್ತನೆಗೋಸ್ಕರವಾಗಿ ಬ್ಯಾಂಕಿನಿಂದ ಬೆಳೆ ಸಾಲ ಪಡೆದುಕೊಂಡಿರುವ ರೈತರ ಸಾಲಮನ್ನಾ ಮಾಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ರೈತರಿಗೆ ಅತಿವೃಷ್ಟಿಯಿಂದ ಉಂಟಾದ ಹಾನಿಯ ಕುರಿತು ವಿಶೇಷ ಪ್ಯಾಕೇಜ್ನಲ್ಲಿ ಪರಿಹಾರ ಘೋಷಣೆ ಮಾಡಬೇಕು. ಮುಲ್ಲಾಮಾರಿ ಜಲಾಶಯದಿಂದ ಏಕಕಾಲಕ್ಕೆ ಹಠಾತ್ತನೆ 25 ಸಾವಿರ ಕ್ಯೂಸೆಕ್ ನೀರನ್ನು ರಾತೋರಾತ್ರಿ ಹರಿದು ಬಿಟ್ಟಿದ್ದರಿಂದ ವಿವಿಧ ಬೆಳೆಗಳು ಮತ್ತು ಪಂಪ್ಸೆಟ್ ಗಳು ಕೊಚ್ಚಿಕೊಂಡು ಹೋಗಿವೆ. ಸರಕಾರ ಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಇನ್ನುವರೆಗೆ ನೀಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಹಣಮಂತ ಪೂಜಾರಿ, ಮೋಹಿನ ಮೋಮಿನ ಸುಲೇಪೇಟ, ಪ್ರದೀಪ ತಿರಲಾಪುರ, ಪರಮೇಶ್ವರ ಕಾಂತಾ, ತುಳಜಪ್ಪ ಮೋಘಾ, ಮಹಮ್ಮದ ಶಬ್ಬೀರ ತೇಗಲತಿಪ್ಪಿ, ದೌಲಪ್ಪ ಕೊಡಂಪಳ್ಳಿ ಇದ್ದರು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸುಲೇಪೇಟ ನಾಡ ಕಚೇರಿ ಉಪತಹಶೀಲ್ದಾರ್ ರಘುನಾಥ ಅವರಿಗೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್