9.46 ಲಕ್ಷ ಬಿಪಿಎಲ್‌ ಕಾರ್ಡ್‌ ಮಹಿಳೆಯರಿಗೆ ಸಾಲ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿಕೆ

Team Udayavani, Sep 11, 2020, 1:58 PM IST

9.46 ಲಕ್ಷ ಬಿಪಿಎಲ್‌ ಕಾರ್ಡ್‌ ಮಹಿಳೆಯರಿಗೆ ಸಾಲ

ಕೋಲಾರ: ಅವಿಭಜಿತ ಜಿಲ್ಲೆಯ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳ ಬಿಪಿಎಲ್‌ ಕಾರ್ಡ್‌ ಹೊಂದಿರುವ ಪ್ರತಿ ಕುಟುಂಬದ ಮಹಿಳೆಯರಿಗೂ ಆರ್ಥಿಕ ಶಕ್ತಿ ತುಂಬಲು ಡಿಸಿಸಿ ಬ್ಯಾಂಕ್‌ನಿಂದ ಸಾಲ ಸೌಲಭ್ಯ ತಲುಪಿಸುವ ಸಂಕಲ್ಪ ಮಾಡಿರುವುದಾಗಿ ಬ್ಯಾಂಕ್‌ನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ನಗರದ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಗುರುವಾರ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ ಆಯೋಜಿಸಿದ್ದ ಸಾಲ ವಿತರಣಾಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಸಾಲದ ಚೆಕ್‌ ವಿತರಿಸಿ ಅವರು ಮಾತನಾಡಿದರು. 4.16 ಲಕ್ಷ ಕುಟುಂಬಗಳಿಗೆ ಸಾಲ: ಎರಡೂಜಿಲ್ಲೆಗಳಲ್ಲಿ 9.46 ಲಕ್ಷ ಬಿಪಿಎಲ್‌ ಕುಟುಂಬಗಳಿವೆ. ಈಗಾಗಲೇ 4.16 ಲಕ್ಷ ಕುಟುಂಬಗಳಿಗೆ ಸಾಲ ನೀಡಿದ್ದು, ಉಳಿದ 5.25 ಲಕ್ಷ ಕುಟುಂಬದ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಬಡ್ಡಿರಹಿತ ಸಾಲ: ಮಹಿಳಾ ಸ್ವಸಹಾಯ ಸಂಘಗಳಿಗೆ ಈಗಾಗಲೇ 5 ಲಕ್ಷ ವಿತರಿಸುತ್ತಿರುವುದನ್ನು ಮುಂದಿನ ದಿನಗಳಲ್ಲಿ 10 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು. ಪ್ರತಿಯೊಬ್ಬ ಮಹಿಳೆಗೆ ಒಂದು ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡುವ ಮೂಲಕ ಸ್ವಾವಲಂಬಿಗಳಾಗಿಸಿ ಡಿಸಿಸಿ ಬ್ಯಾಂಕ್‌ ಮೂಲಕ ಸಮಾಜದ ಮುಖ್ಯ ವಾಹಿನಿಗೆ  ತರುವ ಆಶಯ ಇದೆ ಎಂದು ತಿಳಿಸಿದರು.ಕಸಬಾ ಸೊಸೈಟಿಗೆ 9 ಕೋಟಿ ಸಾಲ: ಬ್ಯಾಂಕ್‌ನ ನಿರ್ದೇಶಕ ನಾಗನಾಳ ಸೋಮಣ್ಣ, ಕೋವಿಡ್‌-19 ಸೋಂಕಿನಿಂದಾಗಿ ಬೃಹತ್‌ ಸಮಾರಂಭ ಮಾಡಲು ಅಡಚಣೆ ಇರುವುದರಿಂದ ಹಂತ ಹಂತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಸಬಾ ಸೊಸೈಟಿಗೆ 9 ಕೋಟಿ ರೂ. ಸಾಲವನ್ನು 450ಮಹಿಳಾ ಸ್ವಸಹಾಯ ಸಂಘಗಳಿಗೆ ಮಂಜೂರು ಮಾಡಲಾಗಿದ್ದು, ಇದು ಮೂರನೇ ಹಂತದ ಸಾಲ ವಿತರಣೆ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.

ಬ್ಯಾಂಕ್‌ನ ನಿರ್ದೇಶಕ ಕೆ.ವಿ.ದಯಾನಂದ್‌ ಮಾತನಾಡಿ, ಡಿಸಿಸಿ ಬ್ಯಾಂಕ್‌ ಇಂದು ಮಹಿಳೆಯರ ಹಾಗೂ ರೈತರ ಪಾಲಿನ ಕಲ್ಪವೃಕ್ಷವಾಗಿದೆ. ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರು ವೈಯಕ್ತಿಕ ವಾಗಿ ಬ್ಯಾಂಕ್‌ನಲ್ಲಿ ಖಾತೆಗಳನ್ನು ತೆರೆದು ನಿಮ್ಮ ಉಳಿತಾಯ, ಠೇವಣಿ ಸೇರಿದಂತೆ ಎಲ್ಲಾ ವಹಿವಾಟುಗಳನ್ನು ಇದೇ ಬ್ಯಾಂಕ್‌ನಲ್ಲಿ ಮಾಡುವಂತಾಗ ಬೇಕು ಎಂದು ಮನವಿ ಮಾಡಿದರು. ಕಸಬಾ ಸೊಸೈಟಿ ಅಧ್ಯಕ್ಷ ಚೋಳಘಟ್ಟ ಶ್ರೀನಿವಾಸ್‌, ನಿರ್ದೇಶಕರಾದ ಶ್ರೀರಾಮರೆಡ್ಡಿ, ಅಮ್ಮೇರಹಳ್ಳಿ ಶ್ರೀನಿವಾಸ್‌, ಬೆಗ್ಲಿ ಪ್ರಕಾಶ್‌, ಕಾರ್ಯದರ್ಶಿ ವೆಂಕಟೇಶ್‌, ಬ್ಯಾಂಕ್‌ ವ್ಯವಸ್ಥಾಪಕ ಅಂಬರೀಶ್‌ ಹಾಜರಿದ್ದರು.

ಮಹಿಳೆಯರು, ರೈತರಿಗೆ 1500 ಕೋಟಿ ರೂ. ಸಾಲ :  ಬ್ಯಾಂಕ್‌ ನಿರ್ದೇಶಕ ಎಂ.ಎಲ್‌.ಅನಿಲ್‌ ಕುಮಾರ್‌ ಮಾತನಾಡಿ, ಡಿಸಿಸಿ ಬ್ಯಾಂಕ್‌ನಿಂದ ರೈತರಿಗೆ ಮತ್ತು ಮಹಿಳಾ ಸ್ವಸಹಾಯ ಸಂಘಗಳಿಗೆ ಗೋವಿಂದಗೌಡರು ಅಧ್ಯಕ್ಷರಾದ ಮೇಲೆ 1500 ಕೋಟಿ ರೂ. ಸಾಲಸೌಲಭ್ಯ ಬಡ್ಡಿ ರಹಿತವಾಗಿ ಕಲ್ಪಿಸಿದೆ. ಈವರೆಗೆ 320 ಕೋಟಿ ರೂ.ಬಡ್ಡಿಯನ್ನು ಸರ್ಕಾರ ಪಾವತಿಸುತ್ತಿದೆ ಎಂದರು. ಡಿಸಿಸಿ ಬ್ಯಾಂಕಿನಲ್ಲಿ 320 ಕೋಟಿ ರೂ. ಠೇವಣಿ ಇರುವುದರಿಂದ 1500 ಕೋಟಿ ರೂ. ಸಾಲ ನೀಡುವ ಶಕ್ತಿ ಹೊಂದಿದೆ. ಅದೇ ರೀತಿ 600 ಕೋಟಿ ಠೇವಣಿ ಹೊಂದಿದಲ್ಲಿ 3000 ಸಾವಿರ ಕೋಟಿ ಸಾಲ ಸೌಲಭ್ಯ ಕಲ್ಪಿಸಲು ಬ್ಯಾಂಕ್‌ ಶಕ್ತವಾಗುತ್ತದೆ ಎಂದರು.

ಪ್ರತಿ ಬಿಪಿಎಲ್‌ ಕುಟುಂಬದ ಮಹಿಳೆಗೂಸಾಲ ತಲುಪಿಸುವ ನಮ್ಮ ಸಂಕಲ್ಪ ಕೈಗೂಡಿ ದರೆ, “ಜಾತಿ, ಧರ್ಮ, ಪಕ್ಷಾಧಾರಿತ ಸಾಲ ವಿತರಣೆ’ ಎಂಬ ಸಂಕುಚಿತ ಮನಸ್ಸುಗಳ ಆರೋಪಗಳಿಗೆ ಶಾಶ್ವತವಾಗಿ ಕಡಿವಾಣ ಬೀಳಲಿದೆ. ಬ್ಯಾಲಹಳ್ಳಿ ಗೋವಿಂದಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

ಟಾಪ್ ನ್ಯೂಸ್

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

MOdi (3)

BJP successor; ದೇಶದ ಜನರೇ ನನ್ನ ಉತ್ತರಾಧಿಕಾರಿ: ಪ್ರಧಾನಿ ನರೇಂದ್ರ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.