ಕೋಟಿ ರೂ. ವ್ಯಯಿಸಿದರೂ ರಸ್ತೆಯಾಗದೆ ಸಂಕಷ್ಟ

 ಸಾಣೂರು-ಪಡ್ಡಯಿಗುಡ್ಡೆ- ನಿಟ್ಟೆ ಕಲ್ಕಾರ್‌ ರಸ್ತೆ ಸಂಪರ್ಕಕ್ಕೆ ಆಗ್ರಹ

Team Udayavani, Sep 13, 2020, 4:04 AM IST

karkala

ಕಲ್ಕಾರ್‌ ಬಳಿ ಕೋ.ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಡ್ಯಾಂ ಸಹಿತ ಮೇಲ್ಸೇತುವೆ.

ಕಾರ್ಕಳ: ನಿಟ್ಟೆ ಮತ್ತು ಸಾಣೂರು ಗ್ರಾ.ಪಂ ವ್ಯಾಪ್ತಿಯ ಪ್ರದೇಶಗಳಿಗೆ ಸಂಚಾರಕ್ಕೆ ಅನುಕೂಲವಾಗುವಂತೆ ಕಲ್ಕಾರ್‌ ಬಳಿ ಕೋಟಿ ರೂ. ವೆಚ್ಚದಲ್ಲಿ ಡ್ಯಾಂ ಸಹಿತ ಸೇತುವೆ ನಿರ್ಮಾಣವಾಗಿದೆ. ಆದರೇ ಇದಕ್ಕೆ ರಸ್ತೆ ಸಂಪರ್ಕ ಇಲ್ಲದಿರುವುದರಿಂದ ವಾಹನ ಓಡಾಟ ಸಾಧ್ಯವಾಗಿಲ್ಲ.
ನಿಟ್ಟೆ ಗ್ರಾ.ಪಂ. ವ್ಯಾಪ್ತಿಯ ಕಲ್ಕಾರ್‌ನಲ್ಲಿ ಶಾಂಭವಿ ನದಿಗೆ ವೆಂಟೆಡ್‌ ಡ್ಯಾಮ್‌ ಸಹಿತ ಸೇತುವೆ 1 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿತ್ತು. ಸಣ್ಣ ನೀರಾವರಿ ಇಲಾಖೆ ಇದಕ್ಕೆ ಅನುದಾನ ನೀಡಿತ್ತು. ಈ ಸೇತುವೆ-ಡ್ಯಾಂನಿಂದ ನಿಟ್ಟೆ ಹಾಗೂ ಸಾಣೂರು ಗ್ರಾ.ಪಂ. ಜನರಿಗೆ ಪ್ರಯೋಜನವಿದೆ. 6 ವರ್ಷಗಳ ಹಿಂದೆ ಸೇತುವೆ ನಿರ್ಮಾಣವಾದಾಗ ಜನ ಓಡಾಟದ ಸಮಸ್ಯೆ ನಿವಾರಣೆಯಾಯಿತು ಎಂದು ಸಂಭ್ರಮಪಟ್ಟಿದ್ದರು. ಆದರೆ ಸಂಪರ್ಕ ರಸ್ತೆಯಾಗದೇ ಇರುವುದು ಅವರ ಆಸೆಗೆ ತಣ್ಣೀರೆರೆಚಿದೆ.

ಸಂಪರ್ಕ ಕೊಂಡಿ
ನಿಟ್ಟೆ ಕಲ್ಕಾರ್‌ ಅರ್ಬಿ ಪ್ರದೇಶ ಸ್ವಾತಂತ್ರ್ಯ ಪೂರ್ವದಿಂದಲೂ ಸಾಣೂರು, ಅತ್ತೂರು, ನಿಟ್ಟೆ, ಪರಪಾಡಿ ಪ್ರದೇಶಗಳಿಗೆ ಸಂಪರ್ಕ ಕೊಂಡಿಯಾಗಿದ್ದು ಜನರು ನದಿ ದಾಟಬೇಕಿತ್ತು. ಮಳೆಗಾಲದಲ್ಲಿ ಸಂಪರ್ಕ ಕಡಿತಗೊಂಡು ಸುತ್ತು ಬಳಸಿ ಹೋಗಬೇಕಿತ್ತು. ಕಲ್ಕಾರ್‌ ಸೇತುವೆ ನಿರ್ಮಾಣದಿಂದ ಸರ್ವಋತು ಸಂಪರ್ಕ ಸಾಧ್ಯವಾಗಿದೆ. ಆದರೆ ಇಲ್ಲಿ ವಾಹನ ಸಂಚಾರ ಸಾಧ್ಯವಾಗದೇ ಇರುವುದು ಸಮಸ್ಯೆಯಾಗಿದೆ. ಸಂಪರ್ಕ ರಸ್ತೆಯಾಗಿಸುವ ಕುರಿತು ಹಲವು ಭಾರಿ ಪ್ರಯತ್ನ ನಡೆಸಲಾಗಿತ್ತು. ಒಂದಷ್ಟು ತೊಡಕುಗಳಿರುವುದರಿಂದ ಸಮಸ್ಯೆಯಾಗಿತ್ತು ಎಂದು ಸಾಣೂರು ಗ್ರಾ.ಪಂ. ಅಧ್ಯಕ್ಷರಾದ ನರಸಿಂಹ ಕಾಮತ್‌ ಹೇಳುತ್ತಾರೆ.

ಈಗ ಸುತ್ತು ಬಳಸುವ ದಾರಿ
ಈಗ ಸೇತುವೆ ಸಂಪರ್ಕಕ್ಕೆ ಬೇಕಾಗಿರು ವುದು ಕೇವಲ 500 ಮೀ. ರಸ್ತೆ. ಇಷ್ಟು ಸಂಪರ್ಕವಾದರೆ ಸಾಣೂರು ಪಡ್ಡಾಯಿಗುಡ್ಡೆ ಲಿಂಕ್‌ ದೊರೆತು ನಿಟ್ಟೆ, ಅತ್ತೂರು,ಪರಪ್ಪಾಡಿ, ಸಾಣೂರು, ಚಾರಡಿ ಈ ಭಾಗದ ಹಲವು ಕುಟುಂಬಗಳಿಗೆ ಅನುಕೂಲವಾಗಲಿದೆ. ಸಂಪರ್ಕ ರಸ್ತೆ ಆಗದೇ ಇರುವುದರಿಂದ ಜನರು ಸಾಣೂರು ನಿಟ್ಟೆಗೆ ಕಾರ್ಕಳ ಬೈಪಾಸ್‌ ಅಥವಾ ಕುಂಟಲ್ಪಾಡಿ ರಸ್ತೆ ಮೂಲಕ ಸುತ್ತು ಬಳಸಿ ಹೋಗುತ್ತಿದ್ದಾರೆ.

ಅರ್ಬಿಗೆ ಹತ್ತಿರ
ಸಾಣೂರು ಪಡ್ಡಯಿಗುಡ್ಡೆ ರಸ್ತೆ ಅಭಿವೃದ್ಧಿಯಾಗಿ ಸಂಪರ್ಕ ರಸ್ತೆಯಾದರೆ ನೇರ ಸಂಪರ್ಕ ಸಾಧ್ಯವಾಗುತ್ತದೆ. ಇದು ಅರ್ಬಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರಿಗೂ ಉಪಯುಕ್ತ ವಾಗಲಿದೆ. ಇತ್ತೀಚಿನ ದಿನಗಳಲ್ಲಿ ಅರ್ಬಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ.

ಸ್ಥಳದ ಸ್ಪಷ್ಟತೆ ಇಲ್ಲ
ಸ್ಥಳದ ಬಗ್ಗೆ ಸ್ಪಷ್ಟವಾಗಿ ಗೊತ್ತಾಗುತಿಲ್ಲ. ಖಾಸಗಿ ಜಾಗದ ಸಮಸ್ಯೆ ಇದ್ದಲ್ಲಿ ರಸ್ತೆ ಆಗದೇ ಇರಲೂ ಬಹುದು ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯಿಸುವೆ.
-ಶೇಖರ್‌, ಪಿಡಿಒ ನಿಟ್ಟೆ ಗ್ರಾ.ಪಂ.

ಬೇರೆ ವ್ಯಾಪ್ತಿ
ರಸ್ತೆ ಬೇಡಿಕೆ ಬಗ್ಗೆ ಇರುವ ಪ್ರದೇಶವು ಸಾಣೂರು ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಸಾಧ್ಯತೆ ಕಡಿಮೆ. ಈ ಬಗ್ಗೆ ಪರಿಶೀಲಿಸುವೆ.
-ಮಧು, ಪಿಡಿಒ ಸಾಣೂರು, ಗ್ರಾ.ಪಂ.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.