ಕೊಂಬೆಟ್ಟು ಕ್ರೀಡಾಂಗಣ ಬಾಡಿಗೆ ಹೆಚ್ಚಳಕ್ಕೆ ನಿರ್ಧಾರ

ಪುತ್ತೂರು ತಾಲೂಕು ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸಭೆ

Team Udayavani, Sep 13, 2020, 2:26 AM IST

ಕೊಂಬೆಟ್ಟು ಕ್ರೀಡಾಂಗಣ ಬಾಡಿಗೆ ಹೆಚ್ಚಳಕ್ಕೆ ನಿರ್ಧಾರ

ಪುತ್ತೂರು ತಾ.ಪಂ. ಸಭಾಂಗಣದಲ್ಲಿ ತಾಲೂಕು ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸಭೆ ನಡೆಯಿತು.

ಪುತ್ತೂರು: ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದ ಸ್ಥಳ ಬಾಡಿಗೆ ಹಾಗೂ ಕಬಡ್ಡಿ ಮ್ಯಾಟ್‌ ಬಾಡಿಗೆ ದರವನ್ನು 2021ರ ಜ. 1ಕ್ಕೆ ಅನ್ವಯ ಆಗುವಂತೆ ಹೆಚ್ಚಳಗೊಳಿಸಲು ತಾಲೂಕು ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ತಾ.ಪಂ. ಸಭಾಂಗಣದಲ್ಲಿ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಸೆ. 12ರಂದು ತಾಲೂಕು ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾಧಿಕಾರಿ ಎ. ಜಯರಾಮ ಗೌಡ ಅವರು ಕ್ರೀಡಾಂಗಣ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಬಾಡಿಗೆ ಶುಲ್ಕದಲ್ಲೇ ತಾಲೂಕು ಕ್ರೀಡಾಂಗಣಕ್ಕೆ ಸಂಬಂಧಿಸಿದ ಖರ್ಚು-ವೆಚ್ಚ ಭರಿಸುತ್ತಿರುವ ಹಿನ್ನೆಲೆಯಲ್ಲಿ ಆದಾಯ ಸಂಗ್ರಹಕ್ಕಾಗಿ ದಿನವೊಂದಕ್ಕೆ ಮೈದಾನದ ಬಾಡಿಗೆ ದರವನ್ನು 3,000 ರೂ.ನಿಂದ 5,000 ರೂ.ಗೆ, ಸ್ವತ್ಛತೆ ಶುಲ್ಕ 500 ರೂ. ವಿಧಿಸಲು ಹಾಗೂ ಕಬಡ್ಡಿ ಮ್ಯಾಟ್‌ ಅನ್ನು ಬಾಡಿಗೆಗೆ ಪಡೆದುಕೊಳ್ಳುವವರಿಗೆ ದಿನವೊಂದಕ್ಕೆ 5,000 ರೂ. ಇದ್ದ ಶುಲ್ಕವನ್ನು 7,500 ರೂ.ಗೆ ಏರಿಸಲು ತೀರ್ಮಾನಿಸಲಾಯಿತು.

ಸರಕಾರಿ ಜಿಮ್‌ ಕೇಂದ್ರ:  ವಿದ್ಯಾರ್ಥಿಗಳಿಗೆ ಶುಲ್ಕ ಕಡಿತ
ತಾಲೂಕು ಕ್ರೀಡಾಂಗಣದಲ್ಲಿರುವ ಸರಕಾರಿ ಜಿಮ್‌ಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅಭ್ಯಾಸಕ್ಕಾಗಿ ಬರುತ್ತಿದ್ದು, ಶುಲ್ಕ ವಿಧಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯಾರ್ಥಿಗಳಿಗೆ ಮಾಸಿಕ 100 ರೂ. ಶುಲ್ಕ ವಿಧಿಸಿದರೆ ಸಾಕು ಎಂದು ಶಾಸಕ ಮಠಂದೂರು ಸೂಚಿಸಿದರು. ಸಾರ್ವಜನಿಕರಿಗೆ ಮಾಸಿಕ 300 ರೂ. ಶುಲ್ಕ ವಿಧಿಸಲು ನಿರ್ಧರಿಸಲಾಯಿತು.

ನಗರಸಭೆ ಗಮನಕ್ಕೆ ತರಲು ನಿರ್ಧಾರ
ಕ್ರೀಡಾಂಗಣದ ಪಶ್ಚಿಮ ಭಾಗದಲ್ಲಿ ಖಾಸಗಿ ವ್ಯಕ್ತಿಗೆ ಸೇರಿರುವ ಜಾಗದ ಮರದ ಕೊಂಬೆ ಮೈದಾನಕ್ಕೆ ಚಾಚಿದ್ದು, ತೆರವು ಮಾಡಲು ವಿನಂತಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಕ್ರೀಡಾಧಿಕಾರಿ ಶಾಸಕರ ಗಮನಕ್ಕೆ ತಂದರು. ಈ ಬಗ್ಗೆ ಇನ್ನೊಮ್ಮೆ ಗಮನಕ್ಕೆ ತನ್ನಿ. ಪರಿಹಾರ ಕಾಣದಿದ್ದರೆ ನಗರಸಭೆಗೆ ದೂರು ನೀಡಿ ತೆರವು ಮಾಡಿಸಿ ಎಂದು ಶಾಸಕರು ತಿಳಿಸಿದರು. ಮೈದಾನಕ್ಕೆ ದಿನಂಪ್ರತಿ ವಾಕಿಂಗ್‌, ಅಭ್ಯಾಸಕ್ಕಾಗಿ ಜನರು ಬರುತ್ತಿದ್ದು, ಹುಲ್ಲು ತೆರವು ಮಾಡಬೇಕಿದೆ. ಅದಕ್ಕೆ ಅಗತ್ಯವಾಗಿರುವ ಅನುದಾನದ ಕೊರತೆ ಇರುವ ಬಗ್ಗೆ ಶಾಸಕರ ಗಮನಕ್ಕೆ ತರಲಾಯಿತು. ಮೈದಾನದ ವಿವಿಧ ಅಭಿವೃದ್ಧಿ ಕಾಮಗಾರಿ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.
ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌, ಸದಸ್ಯೆ ಮೀನಾಕ್ಷಿ ಮಂಜುನಾಥ, ನಗರಸಭೆ ಸದಸ್ಯೆ ಜಗನ್ನಿವಾಸ ರಾವ್‌, ಅಭಿವೃದ್ಧಿ ಸಮಿತಿಯ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಕುಮಾರ್‌, ನಿವೃತ್ತ ದೈ.ಶಿ. ಶಿಕ್ಷಕ ಜಗನ್ನಾಥ ರೈ ಮೊದಲಾದವರಿದ್ದರು. ತಾ| ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ವಂದಿಸಿದರು.

ತೆಂಕಿಲದಲ್ಲಿ ಜಾಗ ವೀಕ್ಷಣೆ
ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕಾಗಿ ಪ್ರತ್ಯೇಕ ಸ್ಥಳ ಗುರುತು ಪ್ರಕ್ರಿಯೆ ಬಗ್ಗೆ ಶಾಸಕರು ಮಾಹಿತಿ ಕೇಳಿದರು. ಉತ್ತರಿಸಿದ ಅಧಿಕಾರಿ, ಕಂದಾಯ ಇಲಾಖೆ ಸೂಚಿಸಿದ ಮೂರು ಕಡೆ ಸ್ಥಳ ವೀಕ್ಷಿಸಿದ್ದು, ತೆಂಕಿಲದಲ್ಲಿ 24 ಎಕ್ರೆ ಜಾಗ ಇದೆ. ಅದು ಸೂಕ್ತವಾಗಿದೆ. ಈಗಿನ ಯೋಜನೆ ಪ್ರಕಾರ 10ರಿಂದ 12 ಎಕ್ರೆ ಜಾಗದ ಆವಶ್ಯಕತೆ ಇದೆ ಎಂದರು. ಶಾಸಕರು ಪ್ರತಿಕ್ರಿಯಿಸಿ, ಕ್ರೀಡಾಂಗಣಕ್ಕೆ 8 ಎಕ್ರೆ ಜಾಗ ನೀಡುವ ಪ್ರಸ್ತಾವನೆ ಇದ್ದು, ಉಳಿದ ಜಾಗ ಬೇರೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿದೆ. ಈ ಬಗ್ಗೆ ಚರ್ಚಿಸೋಣ ಎಂದರು. ಕ್ರೀಡಾ ಗ್ರಾಮ ಎಂಬ ಕಲ್ಪನೆಯಡಿ ತಾ| ಕ್ರೀಡಾಂಗಣ ರೂಪಿಸುವುದು ಒಳಿತು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಸೇಸಪ್ಪ ಗೌಡ, ಯುವಜನ ಇಲಾಖೆಯ ಮಾಜಿ ಕ್ರೀಡಾಧಿಕಾರಿ ಬಿ.ಕೆ. ಮಾಧವ ಮೊದಲಾದವರು ಸಲಹೆ ನೀಡಿದರು.

ಟಾಪ್ ನ್ಯೂಸ್

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.