ದಕ್ಷಿಣ ಕನ್ನಡದಲ್ಲಿ ಡ್ರೋಣ್‌ ಸರ್ವೆ ಕಾರ್ಯ ಆರಂಭ

ಮೊದಲ ಹಂತದಲ್ಲಿ 58 ಗ್ರಾಮ ಪಂಚಾಯತ್‌ ಆಯ್ಕೆ ;  "ಸ್ವಾಮಿತ್ವ' ಯೋಜನೆ

Team Udayavani, Sep 13, 2020, 4:31 AM IST

ದಕ್ಷಿಣ ಕನ್ನಡದಲ್ಲಿ ಡ್ರೋಣ್‌ ಸರ್ವೆ ಕಾರ್ಯ ಆರಂಭ

ಮಹಾನಗರ: ರಾಜ್ಯ ಸರಕಾರ ಡ್ರೋಣ್‌ ಬಳಸಿ ಆಸ್ತಿಗಳ ಅಳತೆ ನಡೆಸಿ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವ “ಸ್ವಾಮಿತ್ವ’ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಏಳು ತಾಲೂಕುಗಳಲ್ಲಿ 58 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಿದ್ದು, ಗುರುತು (ಮಾರ್ಕಿಂಗ್‌) ಪ್ರಕ್ರಿಯೆ ಆರಂಭಗೊಂಡಿದೆ.

ರಾಜ್ಯದಲ್ಲಿ ಆರಂಭಿಕ ಹಂತದಲ್ಲಿ ದಕ್ಷಿಣ ಕನ್ನಡ ಸಹಿತ ಒಟ್ಟು 16 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ. “ಸ್ವಾಮಿತ್ವ’ ಯೋಜನೆಯಡಿ ಕಂದಾಯ ಇಲಾಖೆಯ ಭೂಮಾಪಕರು ಮತ್ತು ಗ್ರಾಮ ಪಂಚಾಯತ್‌ ಅಧಿಕಾರಿಗಳು ಜಂಟಿಯಾಗಿ ಆಯ್ಕೆಯಾಗಿರುವ ಗ್ರಾಮಗಳ ಜನ ವಸತಿ ಪ್ರದೇಶದ ಪ್ರತೀ ಆಸ್ತಿಯನ್ನು ಭೂಮಾಲಕರ ಸಮ್ಮುಖದಲ್ಲಿ ಪರಿಶೀಲಿಸಿ ಗುರುತಿಸುತ್ತಾರೆ. ಬಳಿಕ ಡ್ರೋಣ್‌ ಆಧಾರಿತ ಸರ್ವೆ ನಡೆಸಿ ಆಸ್ತಿಗಳ ಫೋಟೋ ಸೆರೆ ಹಿಡಿಯಲಾಗುತ್ತದೆ. ಬಳಿಕ ಚಿತ್ರಗಳನ್ನು ಸಂಸ್ಕರಿಸಿ ಗುರುತಿಸಲಾದ ಆಸ್ತಿಗಳ ನಕಾಶೆ ತಯಾರಿಸಲಾಗುತ್ತದೆ. ಗ್ರಾ.ಪಂ.ಗಳಲ್ಲಿ ನಮೂದಾಗಿರುವ ದಾಖಲಾತಿಗಳ ಜತೆ ಹೊಂದಾಣಿಕೆ ಮಾಡಿ ಪರಿಶೀಲಿಸಲಾಗುತ್ತದೆ. ಬಳಿಕ ಗ್ರಾಮಸ್ಥರ ಜತೆ ಸಭೆ ನಡೆಸಿ ತಕರಾರುಗಳಿದ್ದರೆ ಇತ್ಯರ್ಥ ಪಡಿಸಲಾಗುತ್ತದೆ. ಎಲ್ಲವೂ ಸರಿಯಾದ ಬಳಿಕ ಸರಕಾರದ ದಾಖಲಾತಿಗೆ ರವಾನಿಸಲಾಗುತ್ತದೆ. ಆಗ ಹೆಸರು, ಇನ್ನಿತರ ತಿದ್ದುಪಡಿಗೂ ಅವಕಾಶವಿರುತ್ತದೆ. ಅಂತಿಮವಾಗಿ ಪ್ರಾಪರ್ಟಿ ಕಾರ್ಡ್‌ ನೀಡಲಾಗುತ್ತದೆ.

ಸರ್ವೆ ನಡೆಯುವ ಗ್ರಾಮಗಳು
ಮಂಗಳೂರು ತಾಲೂಕಿನ 10 ಗ್ರಾ.ಪಂ.ಗಳ ಕರ್ನಿರೆ, ಬಳುಜೆ, ಕೊಲ್ಲೂರು, ಕವತ್ತಾರು, ಅತ್ತೂರು, ಕೈಕುಡೆ, ಕೆಮ್ರಾಲ್‌, ಪಂಜ, ಹಳೆಯಂಗಡಿ, ಪಾವಂಜೆ, ಸಸಿಹಿತ್ಲು, ಬೆಳ್ಳಾಯರು, 10ನೇ ತೋಕೂರು, ಪಡುಪಣಂಬೂರು, ಕಿಲ್ಪಾಡಿ, ಅತಿಕಾರಿಬೆಟ್ಟು, ಶಿಮಂತೂರು, ಐಕಳ, ಏಳಿಂಜೆ, ಉಳಿಪಾಡಿ, ಮಲ್ಲೂರು, ಉಳಾಯಿಬೆಟ್ಟು, ಮುಚ್ಚಾರು, ಕೊಂಪದವು ಸೇರಿ 24 ಗ್ರಾಮಗಳು, ಬಂಟ್ವಾಳ ತಾಲೂಕಿನ ಬರಿಮಾರು, ಸಜೀಪ ನಡು, ಬಾಳ್ತಿಲ, ಕುರ್ನಾಡು ಪೆರಾಜೆ, ಕೇಪು, ಪಿಲಾತಬೆಟ್ಟು, ಕಾವಳಮೂಡರು ಗ್ರಾ.ಪಂ.ಗಳಲ್ಲಿ, ಬೆಳ್ತಂಗಡಿಯ 8 ಗ್ರಾ.ಪಂ.ಗಳ ಸೋಣಂದೂರು, ಮಾಲಾಡಿ, ಮುಂಡಾಜೆ, ಗರ್ಡಾಡಿ, ಪಡಂಗಡಿ, ಕುಕ್ಕೇಡಿ, ನಿಟ್ಟಡೆ, ಕಾಶಿಪಟ್ಣ, ಕುಕ್ಕಳ, ಪಾರಂಕಿ, ಬೆಳಾಲು, ಉರುವಾಲು, ಪುತ್ತೂರಿನ ಬಲಾ°ಡು, ಕೆದಂಬಾಡಿ, ನಿಡ³ಳ್ಳಿ, ಪಾಣಾಜೆ, ಬಜತ್ತೂರು, ಕುಡು³ಪಾಡಿ, 34ನೇ ನೆಕ್ಕಿಲಾಡಿ, ಹಿರೇ ಬಂಡಾಡಿ, ಸುಳ್ಯದ ಕನಕಮಜಲು, ಬಾಳಿಲ, ಮುಪ್ಪೇರಿಯಾ,ಕಳಂಜ, ಉಬರಡ್ಕ ಮಿತ್ತೂರು, ಅರಂತೋಡು, ತೋಡಿಕಾನ, ಐರ್ವನಾಡು, ಪೆರುವಾಜೆ, ಕಲ್ಮಡ್ಕ,ಪಂಬೆತ್ತಾಡಿ, ಮೂಡುಬಿದಿರೆಯ ಶಿರ್ತಾಡಿ, ಪಡುಕೋಣಾಜೆ, ಮೂಡುಕೋಣಾಜೆ, ಮೂಡು ಮಾರ್ನಾಡು, ಪಡು ಮಾರ್ನಾಡು, ದರೆಗುಡ್ಡೆ, ಪಣಪಿಲ, ಕೆಲ್ಲಪುತ್ತಿಗೆ, ವಾಲ್ಪಾಡಿ, ಪಾಲಡ್ಕ, ಕಡಂದಲೆ, ತೆಂಕಮಿಜಾರು, ಬಡಗಮಿಜಾರು, ಇರುವೈಲು, ತೋಡಾರು, ಹೊಸಬೆಟ್ಟು, ಪುಚ್ಚಮೊಗರು, ಕಡಬ ತಾಲೂಕಿನ ಕೊçಲ, ಐತೂರು, ನೆಕ್ಕಿಲಾಡಿ, ಬಂಟ್ರ, ಬಿಳಿನೆಲೆ, ಕೌಕ್ರಾಡಿ, ಇಚ್ಲಂಪಾಡಿ, ನೆಲ್ಯಾಡಿ, ಶಿರಾಡಿ, ಕೊಣಾಜೆ ಗ್ರಾಮಗಳಲ್ಲಿ ಡ್ರೋಣ್‌ ಬಳಸಿ ಅಳತೆ ಕಾರ್ಯಕ್ಕೆ ಜಿಲ್ಲಾ ಭೂದಾಖಲೆಗಳ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಮಾರ್ಗಸೂಚಿ ಅಗತ್ಯ
ರಾಜ್ಯದಲ್ಲಿ ಈ ಹಿಂದೆ ಮದ್ರಾಸ್‌ ಪ್ರಾಂತಕ್ಕೆ ಒಳಪಟ್ಟಿದ್ದ ಕರಾವಳಿ ಜಿಲ್ಲೆಗಳಲ್ಲಿ ಭೂದಾಖಲೆಗಳು ಸರ್ವೆ ನಂಬರ್‌ ಸ್ವರೂಪದಲ್ಲಿದೆ. ಉಳಿದ ಜಿಲ್ಲೆಗಳಲ್ಲಿ ಗ್ರಾಮಠಾಣಾ ಸ್ವರೂಪ ದಲ್ಲಿದೆ. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆಯಡಿ ಭೂದಾಖಲೆಗಳು° ಯಾವ ರೀತಿ ಸಿದ್ಧ ಪಡಿಸಬಹುದು ಎಂಬ ಬಗ್ಗೆ ಸರಕಾರದಿಂದ ಮಾರ್ಗಸೂಚಿ ಬರಬೇಕಾಗಿದೆ.

ಯೋಜನೆಯಿಂದ ಆಸ್ತಿ ಸ್ವಾಮಿತ್ವದ ಬಗ್ಗೆ ಇರುವ ಸಮಸ್ಯೆಗಳು ಬಗೆಹರಿಯಲಿವೆ. ಆಸ್ತಿದಾರರು ಸರಿಯಾದ ನಕ್ಷೆಯೊಂದಿಗೆ ಶಾಸನಬದ್ಧ ಆಸ್ತಿ ದಾಖಲೆಗಳನ್ನು ಪಡೆದುಕೊಳ್ಳಬಹುದು. ಹಕ್ಕು ದಾಖಲೆ ಸಿದ್ಧಪಡಿಸುವಿಕೆ, ಸುಗಮವಾದ ಆಸ್ತಿ ವರ್ಗಾವಣೆಗೆ ಅವಕಾಶ ಕಲ್ಪಿಸುತ್ತದೆ. ಸರ್ವೆ ಹೆಚ್ಚು ನಿಖರವಾಗಿರುತ್ತದೆ. ಆಸ್ತಿ ತೆರಿಗೆಯನ್ನು ಕರಾರುವಕ್ಕಾಗಿ ನಿರ್ಧರಿಸಲು ಸಹಾಯವಾಗುತ್ತದೆ. ನಿಖರ ದಾಖಲೆಗಳು ಲಭ್ಯವಾಗುತ್ತದೆ ಎಂಬುದಾಗಿ ಇಲಾಖೆ ಹೇಳಿದೆ.

ಮಾರ್ಕಿಂಗ್‌ ಕಾರ್ಯ ಆರಂಭ
ದ.ಕ. ಜಿಲ್ಲೆಯಲ್ಲಿ ಡ್ರೋಣ್‌ ಬಳಸಿ ಆಸ್ತಿಗಳ ಅಳತೆನಡೆಸಿ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವ ಯೋಜನೆ ಕಾರ್ಯಾರಂಭ ಮಾಡಿದ್ದು ಬಳುಜೆ, ಕಿಲ್ಪಾಡಿ ಗ್ರಾಮಗಳಲ್ಲಿ ಈಗಾಗಲೇ ಮಾರ್ಕಿಂಗ್‌ ಕಾರ್ಯ ಆರಂಭಗೊಂಡಿದೆ. ಯೋಜನೆಗೆ ಆಯ್ಕೆಯಾದ ಗ್ರಾಮಗಳ ನಾಗರಿಕರು ಅಳತೆ ಸಮಯದಲ್ಲಿ ಅಗತ್ಯ ಸಹಕಾರ ನೀಡಿ ಯೋಜನೆಯನ್ನು ಯಶಸ್ವಿಗೊಳಿಸಬೇಕು.
-ಪ್ರಸಾದಿನಿ, ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕರು

ಕೇಶವ ಕುಂದರ್‌

ಟಾಪ್ ನ್ಯೂಸ್

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.