ಜಮೀರ್ ಅಹಮದ್ ಆರೋಪಗಳಿಗೆ ಉತ್ತರ ಕೊಡಬೇಕಾಗಿಲ್ಲ: ಎಚ್ ಡಿ ಕುಮಾರಸ್ವಾಮಿ
Team Udayavani, Sep 13, 2020, 3:52 PM IST
ಬೆಂಗಳೂರು: ತಾನೂ ಕೊಲಂಬೋಗೆ ಹೋಗಿದ್ದಾಗಿ ಶಾಸಕ ಜಮೀರ್ ಅಹಮದ್ ಖಾನ್ ಮಾಡಿರುವ ಆರೋಪಗಳಿಗೆ ಉತ್ತರ ಕೊಡಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಶಾಸಕರು ಮತ್ತು ಮುಖಂಡರು ಶ್ರೀಲಂಕಾಕ್ಕೆ ಹೋಗಿದ್ದು ನಿಜ. ಪಕ್ಷದ ವಿಚಾರವಾಗಿ ಚರ್ಚಿಸಲು ಹೋಗಿದ್ದೆವು. ಅದಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದರು.
ಹಳೇ ಸ್ನೇಹಿತರು ಏಕೆ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೋ ಗೊತ್ತಿಲ್ಲ. ಗೋವಾ ಮೊದಲಾದ ಕಡೆ ಹೋದರೆ ಖರ್ಚು ಜಾಸ್ತಿಯಾಗಲಿದೆ ಎಂಬ ಕಾರಣಕ್ಕೆ ಕೊಲಂಬೋಗೆ ಹೋಗಿದ್ದೆವು. ಆ ವಿಚಾರವನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಶಿವಸೇನೆ ಗೂಂಡಾಗಳು ನನ್ನ ಅತ್ಯಾಚಾರ ಮತ್ತು ಹತ್ಯೆ ಮಾಡಲು BJP ಬಿಡಬೇಕೆ?: ಸಂಜಯ್ ಗೆ ಕಂಗನಾ
ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ನಿಲ್ಲಿಸಬೇಕೆಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ. ಆದರೆ, ತನಿಖೆ ಹಂತದಲ್ಲಿ ವಿಷಯಾಂತರವಾಗಬಾರದು ಮತ್ತು ದಾರಿ ತಪ್ಪಬಾರದು ಎಂದು ಹೇಳಿದರು.
ಕ್ಯಾಸಿನೋ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಕ್ಯಾಸಿನೋ ವಿಚಾರವೇ ಬೇರೆ. ಆದರೆ, ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವಂತಹ ದಂಧೆ ನಡೆಯುವುದು ನೈಟ್ ಬಾರ್ ಗಳಲ್ಲಿ. ಬೆಂಗಳೂರು ನಗರದಲ್ಲಿ ಮಧ್ಯರಾತ್ರಿ 12 ಗಂಟೆಯಲ್ಲಿ ಅಂತಹ ಕಡೆಗಳಲ್ಲಿ ಹೋದರೆ ನಾವು ಭಾರತದಲ್ಲಿದ್ದೇವೆಯೇ ಎಂಬ ಅನುಮಾನ ಬರುತ್ತದೆ ಎಂದು ಎಚ್ ಡಿಕೆ ಹೇಳಿದರು.
ಇದನ್ನೂ ಓದಿ: ಅಪ್ಪಾಜಿ ಗೌಡರಿಗೆ ಆಗದವರು ಸಾವಿಗೆ ಕಾರಣವಾಗಿರಬಹುದು: ಅನುಮಾನ ವ್ಯಕ್ತಪಡಿಸಿದ ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ