ಶಿಕ್ಷಕರಿಗೆ ಸಂಶೋಧನಾ ಪ್ರವೃತ್ತಿ ಮುಖ್ಯ
Team Udayavani, Sep 13, 2020, 6:11 PM IST
ದಾವಣಗೆರೆ: ಮಕ್ಕಳಿಗೆ ಕಲಿಸುವ ಮತ್ತು ಸ್ವತಃ ಕಲಿಯುವ ವಿಚಾರದಲ್ಲಿ ಶಿಕ್ಷಕರಿಗೆ ಪ್ರೀತಿ, ವ್ಯಾಮೋಹ, ಉತ್ಸಾಹ ಇದ್ದಾಗ ಮಾತ್ರ ಸೇವೆಯಲ್ಲಿ ಸಂತೃಪ್ತಿ ಸಿಗಲು ಸಾಧ್ಯ. ಅಂತಹ ವ್ಯಾಮೋಹವನ್ನು ಪ್ರತಿಯೊಬ್ಬ ಶಿಕ್ಷಕರೂ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಡಾ| ಎಚ್.ವಿ. ವಾಮದೇವಪ್ಪ ಹೇಳಿದರು.
ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳಕಿಗೆ ತರುವ ಗುಣ ಬೇಕು. ಆಳವಾದ ಕಳಕಳಿ, ಅತ್ಯುತ್ತಮ ಕಲಿಸುವಿಕೆ ಜೊತೆಗೆ ಸಂಶೋಧನಾರ್ಥಿಯಾಗಿಯೂ ಇರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಮಾತನಾಡಿ, ಮಕ್ಕಳಲ್ಲಿ ಸೃಜನಶೀಲ ಶಿಕ್ಷಣ, ಸಾಮಾಜಿಕ ಬದ್ಧತೆ, ಮಾನವೀಯ ಮೌಲ್ಯ, ಸಮುದಾಯ ಸಂಬಂಧಗಳ ಮೂಲಕ ಉನ್ನತ ಬದುಕನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಪಾಠ ಕಲಿಸಬೇಕು ಎಂದು ತಿಳಿಸಿದರು.
ಕುಲಸಚಿವ ಪ್ರೊ| ಬಸವರಾಜ ಬಣಕಾರ, ಪರೀಕ್ಷಾಂಗ ಕುಲಸಚಿವೆ ಪ್ರೊ| ಎಚ್.ಎಸ್. ಅನಿತಾ, ಹಣಕಾಸು ಅಧಿಕಾರಿ ಪ್ರೊ| ಗೋಪಾಲ ಎಂ. ಅಡವಿರಾವ್, ಕಲಾ ನಿಕಾಯದ ಡೀನ್ ಪ್ರೊ| ಕೆ.ಬಿ. ರಂಗಪ್ಪ, ವಿಜ್ಞಾನ ನಿಕಾಯದ ಡೀನ್ ಪ್ರೊ| ವಿ. ಕುಮಾರ್, ಐಕ್ಯೂಎಸಿ ನಿರ್ದೇಶಕಿ ಪ್ರೊ|ಗಾಯತ್ರಿ ದೇವರಾಜ್, ಡಾ| ಭೀಮಾಶಂಕರ ಜೋಶಿ ಮಾತನಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ಘಟಕದ ಸಂಯೋಜನಾಧಿಕಾರಿ ಕುಮಾರ್ ಸಿದ್ಧಮಲ್ಲಪ್ಪ ಸ್ವಾಗತಿಸಿದರು. ಡಾ| ರಮೇಶ್ ಚಂದ್ರಹಾಸ್ ವಂದಿಸಿದರು. ಡಾ| ಶಶಿಕಲಾನಿರೂಪಿಸಿದರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಸಂಶೋಧನಾ ಪ್ರಬಂಧ ಮಂಡಿಸಿದ ಪ್ರಾಧ್ಯಾಪಕರಿಗೆ ಐಕ್ಯೂಎಸಿ ವತಿಯಿಂದ ಅಭಿನಂದನಾ ಪ್ರಮಾಣಪತ್ರ ವಿತರಿಸಲಾಯಿತು.
ಮಕ್ಕಳಲ್ಲಿ ಸೃಜನಶೀಲ ಶಿಕ್ಷಣ, ಸಾಮಾಜಿಕ ಬದ್ಧತೆ, ಮಾನವೀಯ ಮೌಲ್ಯ, ಸಮುದಾಯ ಸಂಬಂಧಗಳ ಮೂಲಕ ಉನ್ನತ ಬದುಕನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಬೋಧನೆ ಮಾಡಬೇಕು. – ಪ್ರೊ| ಶರಣಪ್ಪ ವಿ. ಹಲಸೆ, ದಾವಿವಿ ಕುಲಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!