ರಾಷ್ಟ್ರಮಟ್ಟದಲ್ಲಿ ವಿದ್ಯಾಗಮ? ಮಾದರಿಯಾಗಲಿ ರಾಜ್ಯ


Team Udayavani, Sep 14, 2020, 10:41 AM IST

ರಾಷ್ಟ್ರಮಟ್ಟದಲ್ಲಿ ವಿದ್ಯಾಗಮ? ಮಾದರಿಯಾಗಲಿ ರಾಜ್ಯ

ಕೋವಿಡ್‌ -19 ಸಾಂಕ್ರಾಮಿಕದಿಂದಾಗಿ ದೇಶಾದ್ಯಂತ ಬಹುತೇಕ ಕ್ಷೇತ್ರಗಳಿಗೆ ಭಾರೀ ಹಿನ್ನಡೆಯಾಗಿದ್ದು, ಶಿಕ್ಷಣ ಕ್ಷೇತ್ರಕ್ಕಂತೂ ಅತಂತ್ರ ಪರಿಸ್ಥಿತಿ ಕಾಡಲಾರಂಭಿಸಿದೆ. ದೇಶಾದ್ಯಂತ ಹಠಾತ್ತನೆ ಶಾಲಾ-ಕಾಲೇಜುಗಳು ನಿಂತಿದ್ದರಿಂದ, ಪರೀಕ್ಷೆಗಳು ಮುಂದೂಡಲ್ಪಟ್ಟ ಕಾರಣ ವಿದ್ಯಾರ್ಥಿಗಳ ಭವಿಷ್ಯ ಹೇಗೋ ಎಂಬ ಚಿಂತೆ ಪೋಷಕರಲ್ಲಿ, ಭವಿಷ್ಯದಲ್ಲಿ ಏನಾಗಲಿದೆಯೋ ಎಂಬ ಆತಂಕ ಶಿಕ್ಷಕರಲ್ಲಿ ಮೂಡಿದ್ದು ಸಹಜವೇ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯಬಾರದು ಎಂದರೆ ಆನ್‌ಲೈನ್‌ ಶಿಕ್ಷಣವೊಂದೇ ಪರಿಹಾರ ಎಂದೇ ವಿವಿಧ ರಾಜ್ಯಗಳು ಚರ್ಚಿಸುವ ನಡುವೆಯೇ, ಕರ್ನಾಟಕದ ಶಿಕ್ಷಣ ಇಲಾಖೆ ವಿದ್ಯಾಗಮದಂಥ ಅಭೂತಪೂರ್ವ ಶೈಕ್ಷಣಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿತು. ಸರಕಾರಿ ಶಾಲಾ ಮಕ್ಕಳ ನಿರಂತರ ಕಲಿಕೆಗಾಗಿ ಶಿಕ್ಷಣ ಇಲಾಖೆ ರೂಪಿಸಿರುವ ವಿದ್ಯಾಗಮ ಎಷ್ಟು ಮೆಚ್ಚುಗೆ ಗಳಿಸುತ್ತಿದೆಯೆಂದರೆ, ಈಗ ಅದಕ್ಕೆ ರಾಷ್ಟ್ರದ ಮಾನ್ಯತೆ ಸಿಗುವ ಸಾಧ್ಯತೆಯೂ ಎದುರಾಗಿದೆ. ಕೇಂದ್ರ ಶಿಕ್ಷಣ ಇಲಾಖೆ ರಾಜ್ಯದಿಂದ ಈ ಕುರಿತು ವರದಿ ಪಡೆದಿದ್ದು, ಅದರಲ್ಲಿರುವ ಒಳ್ಳೆಯ ಅಂಶಗಳನ್ನು ದೇಶಾ ದ್ಯಂತ ಅನುಷ್ಠಾನ ಮಾಡ ಬಹುದಾದ ಸಾಧ್ಯತೆಯೂ ಇದೆ ಎನ್ನಲಾಗಿದೆ.

ರಾಜ್ಯದ ಮೂಲೆಮೂಲೆ ಯಲ್ಲೂ ಶಿಕ್ಷಕರು ಮಕ್ಕಳಿದ್ದಲ್ಲಿಗೇ ಹೋಗಿ ದೇಗುಲಗಳ ಆವರಣ, ಮೈದಾನಗಳು, ಮರಗಳಡಿಯಲ್ಲಿ ಪಾಠ ಮಾಡಿ, ಎಲ್ಲ ಸವಾಲುಗಳ ನಡುವೆಯೇ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸುತ್ತಿದ್ದಾರೆ. ಗಮನಾರ್ಹ ಸಂಗತಿಯೆಂದರೆ, ಒಂದೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿನ ದಾರಿ ಹೇಗೋ ಎಂದು ಯೋಚಿಸುತ್ತಿದ್ದಾಗಲೇ, ಸರಕಾರಿ ಶಾಲೆಗಳು ಇಂಥ ವಿನೂತನ ದಾರಿಯನ್ನು ಹುಡುಕಿಕೊಂಡು ಸಕ್ರಿಯವಾಗಿರುವುದು. ವಿದ್ಯಾಗಮದಿಂದ ಪ್ರೇರಿತರಾಗಿ ಕೆಲವೆಡೆ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸುತ್ತಿರುವ ಕುರಿತು ವರದಿಯಾಗುತ್ತಿವೆ.

ಇವೆಲ್ಲದರ ನಡುವೆಯೇ ಗಮನಿಸಬೇಕಾದ ಅಂಶವೆಂದರೆ, ಈಗ ರಾಜ್ಯವು ದೇಶದ ಪ್ರಮುಖ ಹಾಟ್‌ಸ್ಪಾಟ್‌ಗಳಲ್ಲಿ ಒಂದಾಗಿದ್ದು, ಕೊರೊನಾದ ಆತಂಕ ಶಿಕ್ಷಕರಿಗೆ ಕಾಡುತ್ತಿದೆ. ಹೀಗಾಗಿ ಅವರಿಗೆ ಅಗತ್ಯ ಸುರಕ್ಷಾ ಪರಿಕರಗಳನ್ನು ಒದಗಿ ಸುವುದರ ಜತೆಗೆ ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆ ಎದುರಾಗದಂತೆ ನೋಡಿಕೊಳ್ಳುವತ್ತ ಸರಕಾರ ಗಮನಹರಿಸಬೇಕು. ಜತೆಗೆ ವಿದ್ಯಾಗಮ ನಡೆಸಲು ನಗರ ಪ್ರದೇಶಗಳಲ್ಲಿ ಹಲವು ಅಡ್ಡಿಗಳು ಎದುರಾಗುತ್ತಿವೆ ಎನ್ನುವ ದೂರುಗಳೂ ಕೇಳಿಬರುತ್ತಿವೆ. ಗ್ರಾಮೀಣ ಭಾಗಗಳಲ್ಲಾದರೆ ದೇವಾಲಯದ ಆವರಣ, ಅಶ್ವತ್ಥಕಟ್ಟೆ ಮೊದಲಾದ ಸಾರ್ವಜನಿಕ ಪ್ರದೇಶಗಳಲ್ಲಿ ಸಾಕಷ್ಟು ಸ್ಥಳಾವಕಾಶವಿರುತ್ತದೆ. ಆದರೆ ನಗರ ಪ್ರದೇಶಗಳಲ್ಲಿ ಈ ರೀತಿಯ ಸ್ಥಳಾವಕಾಶ ಕಡಿಮೆ. ಇದ್ದರೂ ವಾಹನಗಳ ಸದ್ದು ಮಕ್ಕಳಿಗೆ ಪಾಠದತ್ತ ಗಮನ ಕೇಂದ್ರೀಕರಿಸಲು ತೊಂದರೆಯುಂಟುಮಾಡುತ್ತಿದೆ. ಈ ಕಾರಣಕ್ಕಾಗಿಯೇ ವಿದ್ಯಾಗಮವನ್ನು ಶಾಲೆಗಳ ಆವರಣದಲ್ಲೇ ನಡೆಸಲು ಸರಕಾರ ಯೋಚಿಸಬೇಕು ಎನ್ನುವ ಸಲಹೆಗಳು ಶಿಕ್ಷಣ ತಜ್ಞರಿಂದ ಕೇಳಿಬರುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಂತೂ ತರಗತಿಗಳನ್ನು ಎಂದಿನಂತೆ ಆರಂಭಿಸುವ ಸಾಧ್ಯತೆ ಕಡಿಮೆಯೇ. ಸರಕಾರಿ ಶಾಲೆಗಳ ಆವರಣಗಳು ವಿಶಾಲವಾಗಿರುತ್ತಾವಾದ್ದರಿಂದ ಅಲ್ಲಿಯೇ ವಿದ್ಯಾಗಮ ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸಲಿ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.