ಬೆಳೆ ಸಮೀಕ್ಷೆ ಯಶಸ್ವಿಗೆ ಸಹಕರಿಸಿ
Team Udayavani, Sep 14, 2020, 2:50 PM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ರೈತರಿಗೆ ತಲುಪಿಸುವ ಸಲುವಾಗಿ ಆರಂಭಿಸಿರುವ ಬೆಳೆ ಸಮೀಕ್ಷೆ ಯೋಜನೆಯನ್ನು ಯಶಸ್ವಿಗೊಳಿಸಲು ರೈತರು ಸಹಕರಿಸಬೇಕೆಂದು ತಹಶೀಲ್ದಾರ್ ಕೆ.ಅರುಂಧತಿ ಮನವಿ ಮಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಶೆಟ್ಟಹಳ್ಳಿಹೋಬಳಿಯ ಗಡಿಮಿಂಚೇನಹಳ್ಳಿಹಾಗೂ ಶೆಟ್ಟಿಹಳ್ಳಿ ಗ್ರಾಮದಲ್ಲಿ ರೈತರ ತೋಟದಲ್ಲಿ ಬೆಳೆ ಸಮೀಕ್ಷೆ ನಡೆಸಿ ಮಾತನಾಡಿದ ಅವರು, ರೈತರು ತಮ್ಮ ಮೊಬೈಲ್ ಫೋನ್ ಮೂಲಕ ಕೃಷಿ ಇಲಾಖೆ ಸಿದ್ಧಪಡಿಸಿರುವ ಆ್ಯಪ್ ಬಳಸಿಕೊಂಡು ಬೆಳೆ ನೋಂದಣಿ ಮಾಡಿಸಿಕೊಂಡಲ್ಲಿ ಸರ್ಕಾರಗಳಿಂದ ದೊರೆಯುವ ಸೌಲಭ್ಯ ಪಡೆಯಲು ಅನುಕೂಲ ವಾಗುತ್ತದೆ ಎಂದು ರೈತರಲ್ಲಿ ಅರಿವು ಮೂಡಿಸಿದರು.
ರೈತರ ತೋಟಗಳಿಗೆ ಭೇಟಿ ನೀಡಿ ರೈತರಿಂದಲೇ ಅವರ ಫೋನ್ಗಳ ಮೂಲಕ ಬೆಳೆ ಸಮೀಕ್ಷೆ ನಡೆಸಲು ಕ್ರಮ ಕೈಗೊಂಡಿದ್ದೇವೆ ಎಂದರು. ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಡಾ.ಎಸ್. ವಿ.ಮಂಜುನಾಥ್ ಮಾತ ನಾಡಿ, ಕೃಷಿ ಇಲಾಖೆಯಿಂದ ದೊರೆ ಯುವ ಸೌಲಭ್ಯಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಬೆಳೆ ಸಮೀಕ್ಷೆ ಯೋಜನೆ ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ರೈತರು ಸಹ ಪೂರಕವಾಗಿ ಸ್ಪಂದಿಸುತ್ತಿದ್ದಾರೆ.
ಸಹಕಾರ ನೀಡಿ ಇಲಾಖೆ ನೀಡಿರುವ ಅವಧಿಯೊಳಗೆ ಬೆಳೆ ಸಮೀಕ್ಷೆ ಅಭಿಯಾನ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!