ಬೆಳಗಾವಿ-ಕರಾಡ ರೈಲು ಮಾರ್ಗ ವಿಸ್ತರಣೆ ಎಂದು?

2012ರಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ನೇತೃತ್ವದ ತಂಡ

Team Udayavani, Sep 14, 2020, 6:06 PM IST

ಬೆಳಗಾವಿ-ಕರಾಡ ರೈಲು ಮಾರ್ಗ ವಿಸ್ತರಣೆ ಎಂದು?

ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರದ ಬಹು ಬೇಡಿಕೆಯ ಕರಾಡ-ಧಾರವಾಡ ಹೊಸ ರೈಲು ಮಾರ್ಗದ ಈಗಾಗಲೇ ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗಕ್ಕೆ ಹಸಿರು ನಿಶಾನೆ ಸಿಕ್ಕಿದ್ದು, ಉಳಿದ ಬೆಳಗಾವಿ-ಕರಾಡ ಹೊಸ ರೈಲು ಮಾರ್ಗ ವಿಸ್ತರಣೆ ಮಾಡಬೇಕು ಎಂದು ಗಡಿ ಜನರ ಒತ್ತಾಯವಾಗಿದೆ.

ಗಡಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕರಾಡ-ಧಾರವಾಡ(ಕೊಲ್ಲಾಪುರ, ನಿಪ್ಪಾಣಿ, ಸಂಕೇಶ್ವರ, ಬೆಳಗಾವಿ, ಕಿತ್ತೂರು ಮಾರ್ಗವಾಗಿ) ಹೊಸ ರೈಲು ಮಾರ್ಗ ರಚನೆಯಾಗಬೇಕೆಂದು ಕಳೆದ 2012ರಲ್ಲಿ ರೈಲ್ವೆ ಇಲಾಖೆ ಸರ್ವೇ ಕಾರ್ಯ ಕೈಗೊಂಡಿತ್ತು. ಇದೀಗ ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗಕ್ಕೆ ಸರಕಾರ ಮಂಜೂರಾತಿ ನೀಡಿದೆ. ಉಳಿದ ಬೆಳಗಾವಿಯಿಂದ ಕರಾಡ ಹೊಸ ರೈಲು ಮಾರ್ಗದ ಮಂಜೂರಾತಿ ನನೆಗುದಿಗೆ ಬಿದ್ದಿದೆ. ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ ಅವರು ವಿಶೇಷ ಪ್ರಯತ್ನ ಮಾಡಿ ಗಡಿ ಜನರ ಬೇಡಿಕೆ ಈಡೇರಿಸುತ್ತಾರೆ ಎಂಬ ಆಶಾಭಾವ ಗಡಿ ಜನರಲ್ಲಿದೆ.

ನೆರೆಯ ಮಹಾರಾಷ್ಟ್ರದ ಕರಾಡ-ಧಾರವಾಡ ಹೊಸ ರೈಲು ಮಾರ್ಗ ರಚನೆಯಾಗಬೇಕೆಂದು ಹಿಂದಿನ ನಿಪ್ಪಾಣಿ ಶಾಸಕರಾಗಿದ್ದ ಕಾಕಾಸಾಹೇಬ ಪಾಟೀಲ ಸತತ ಪ್ರಯತ್ನ ಪಟ್ಟಿದ್ದರು. ಯುಪಿಎ ಸರಕಾರದ ಎರಡರಲ್ಲಿ ಪ್ರಭಾವಿ ಸಚಿವರಾಗಿದ್ದ ಶರದ ಪವಾರ ಮೂಲಕ ಅಂದಿನ ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ, ಕೇಂದ್ರ ರೈಲ್ವೆ ರಾಜ್ಯ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ನೇತೃತ್ವದ ತಂಡ ಪ್ರಸ್ತಾವನೆ ಸಲ್ಲಿಸಿ ಸರ್ವೇ ಕಾರ್ಯಕ್ಕೆ ಮನವಿ ಮಾಡಿದ್ದರು.

ಸಲ್ಲಿಕೆಯಾದ ಪ್ರಸ್ತಾವನೆಗೆ ರೈಲ್ವೆ ಇಲಾಖೆಯು ಕಳೆದ 2012ರಲ್ಲಿ ಸರ್ವೇ ಕಾರ್ಯ ಕೈಗೊಂಡು ಪೂರ್ಣಗೊಳಿಸಿತ್ತು. ಹೊಸ ರೈಲ್ವೆ ಮಾರ್ಗಕ್ಕೆ ಈಗ ಅರ್ಧದಷ್ಟು ಮಂಜೂರಾತಿ ದೊರೆತಿದ್ದು, ಇದರಿಂದ ಬೆಳಗಾವಿಯಿಂದ ಕರಾಡ ವರೆಗೆ ಹೊಸ ರೈಲು ಮಾರ್ಗ ರಚನೆಯಾಗುತ್ತದೆ ಎಂಬ ಗಡಿ ಭಾಗದ ಚಿಕ್ಕೋಡಿ, ಸಂಕೇಶ್ವರ, ನಿಪ್ಪಾಣಿ ಹಾಗೂ ಮಹಾರಾಷ್ಟ್ರದ ಗಡಿ ಭಾಗದ ಜನರು ತೀವ್ರ ಕುತೂಹಲದಲ್ಲಿ ಇದ್ದಾರೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹೊಸ ರೈಲು ಮಾರ್ಗ: ಕರ್ನಾಟಕ-ಮಹಾರಾಷ್ಟ್ರದ ಕೊಲ್ಲಾಪುರ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗೆ ನೇರವಾಗಿ ರೈಲು ಸಂಪರ್ಕ ಕಲ್ಪಿಸುವ ಈ ರೈಲ್ವೆ ಯೋಜನೆಯು ಬೆಳಗಾವಿಯಿಂದ ಕರಾಡವರಿಗೆ ಸುಮಾರು 191 ಕಿಮೀ ಅಂತರ ಇದೆ. ಇದರಲ್ಲಿ ಮಹಾರಾಷ್ಟ್ರದ ವ್ಯಾಪ್ತಿಯ 97 ಕಿಮೀ ಹಾಗೂ ಕರ್ನಾಟಕ ವ್ಯಾಪ್ತಿಯ 94 ಕಿಮೀ ಅಂತರ ಹೊಂದಿದೆ. ಜಿಲ್ಲೆಯ ಪರಕನಟ್ಟಿ-ಸಂಕೇಶ್ವರ-ನಿಪ್ಪಾಣಿ- ಗುಡಮುಡಸಿಂಗಿ ಮಾರ್ಗದಿಂದ ಕೊಲ್ಲಾಪುರವರೆಗಿನ 85 ಕಿಮೀ ಮತ್ತು ಬೆಳಗಾವಿ-ಹಂದಿಗನೂರ -ದಡ್ಡಿ- ಹಲಕರ್ಣಿ- ಸಂಕೇಶ್ವರ-ನಿಪ್ಪಾಣಿ-ಕರಾಡವರೆಗೆ 21 ನಿಲ್ದಾಣ ಹೊಂದಿ ಹೊಸ ರೈಲ್ವೆ ಮಾರ್ಗ ರಚನೆಯಾಗಿದೆ.

– ಮಹಾದೇವ ಪೂಜೇರಿ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.