ದ್ವಿಚಕ್ರ ವಾಹನಗಳಲ್ಲಿ ಗಾಂಜಾ ಸಾಗಣಿಕೆ: ಓರ್ವನನ್ನು ಬಂಧಿಸಿದ ಹನೂರು ಪೊಲೀಸರು
Team Udayavani, Sep 15, 2020, 3:43 PM IST
ಹನೂರು (ಚಾಮರಾಜನಗರ): ದ್ವಿಚಕ್ರ ವಾಹನಗಳಲ್ಲಿ ಅಕ್ರಮವಾಗಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಜೀರಿಗೆಗೆದ್ದೆ ಗ್ರಾಮದ ಮಂಟೇಲಿಂಗಯ್ಯ ಅಲಿಯಾಸ್ ಮಂಟೇ (30) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದಿಂದ ಅಕ್ರಮವಾಗಿ ಗಾಂಜಾ ಸಾಗಾನಿಕೆ ಮಾಡುತ್ತಿದ್ದಾನೆ ಎಂಬುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಸಿಪಿಐ ರವಿನಾಯಕ್ ಮತ್ತು ತಂಡ ದಾಳಿ ನಡೆಸಿದ್ದಾರೆ.
ಈ ವೇಳೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಬೈಕಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದುದು ಖಚಿತವಾಗಿದೆ. ಈ ವೇಳೆ ಆತನಿಂದ 400ಗ್ರಾಂ ಒಣಗಾಂಜಾ ಮತ್ತು ಸಾಗಾಣಿಕೆ ಮಾಡುತ್ತಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಸ್ಯಾಂಡಲ್ ವುಡ್ ನಶೆ ನಂಟು: ಸೆಲೆಬ್ರೆಟಿ ದಂಪತಿ ದಿಗಂತ್ – ಐಂದ್ರೀತಾಗೆ ಸಿಸಿಬಿ ನೋಟಿಸ್
ದಾಳಿಯಲ್ಲಿ ಲೊಕ್ಕನಹಳ್ಳಿ ವೈದ್ಯಾಧಿಕಾರಿ ಡಾ||ಪ್ರಕಾಶ್, ಪೊಲೀಸ್ ಸಿಬ್ಬಂದಿಯಾದ ರಾಮದಾಸ್, ರಾಘವೇಂದ್ರ, ರಾಮಶೆಟ್ಟಿ, ಚಂದ್ರು, ಬಿಳಿಗೌಡ, ಜಮೀಲ್, ಪ್ರದೀಪ್, ರಾಜು ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ