ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ
Team Udayavani, Sep 15, 2020, 5:18 PM IST
ಕೊಪ್ಪಳ: ಕೊಪ್ಪಳ ತಾಲೂಕಿನ ಚುಕ್ಕನಕಲ್ ಗ್ರಾಮದ ಮೆಹ್ತಾ ತೋಟದ ಬಳಿ ಮಾರುತಿ ವಾಲ್ಮೀಕಿ ಎಂಬ ವ್ಯಕ್ತಿಯು ಅಕ್ರಮ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಪಡೆದ ಗ್ರಾಮೀಣ ಠಾಣೆಯ ಪೊಲೀಸ್ ತಂಡವು ದಾಳಿ ಮಾಡಿ ಆತನನ್ನು ಬಂಧಿಸಿ, ಬಂಧಿತನಿಂದ 155 ಗ್ರಾಂ ಗಾಂಜಾ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಪಿಐ ರವಿ ಉಕ್ಕುಂದ ನೇತೃತ್ವದ ಪೊಲೀಸ್ ತಂಡವು ದಾಳಿ ಮಾಡಿ ಆರೋಪಿ ಮಾರುತಿ ವಾಲ್ಮೀಕಿಯನ್ನು ಬಂಧಿಸಿ ಆತನನ್ನು ಪರಿಶೀಲನೆ ಮಾಡಿದ ವೇಳೆ ಆತನ ಬಳಿ 155 ಗ್ರಾಂನ 2500 ರೂ. ಬೆಲೆಯಷ್ಟು ಗಾಂಜಾ ಇರುವುದು ಪತ್ತೆಯಾಗಿದೆ.
ಅದನ್ನು ವಶಕ್ಕೆ ಪಡೆದು ಅಲ್ಲದೆ ಆತನ ಬಳಿಯಿದ್ದ 250 ರೂ. ವಶಕ್ಕೆ ಪಡೆದು ಎನ್ಡಿಪಿಎಸ್ ಕಾಯ್ದೆ ಕಲಂ 20(ಬಿ)(ಎ) ನಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಅವ್ಯವಸ್ಥೆ ಮುಖ ಒಂದೊಂದಾಗಿ ಬೆಳಕಿಗೆ! ಚಿಕಿತ್ಸೆಗೆ ವೈದ್ಯಕೀಯ ಸಿಬ್ಬಂದಿ ತಾತ್ಸಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್