ಬೇಡಿಕೆ ಈಡೇರಿಕೆಗೆ ಒಪ್ಪಿಗೆ: ಡಿಸಿಎಂ ಡಾ| ಅಶ್ವತ್ಥನಾರಾಯಣ

ಶುಕ್ರವಾರದವರೆಗೂ ಮುಷ್ಕರ ಮುಂದುವರಿಕೆಗೆ ವೈದ್ಯರ ನಿರ್ಧಾರ

Team Udayavani, Sep 16, 2020, 5:57 AM IST

ಬೇಡಿಕೆ ಈಡೇರಿಕೆಗೆ ಒಪ್ಪಿಗೆ: ಡಿಸಿಎಂ ಡಾ| ಅಶ್ವತ್ಥನಾರಾಯಣ

ಬೆಂಗಳೂರು: ವೇತನ ಪರಿಷ್ಕರಣೆ ಹಾಗೂ ಭಡ್ತಿಗೆ ಸೇವಾವಧಿ ಕಡಿಮೆ ಮಾಡುವಂತೆ ಆಗ್ರಹಿಸಿ ಮುಷ್ಕರ ನಿರತ‌ ಸರಕಾರಿ ವೈದ್ಯರಿಗೆ ಮುಷ್ಕರ ನಿಲ್ಲಿಸಿ ಸೇವೆಗೆ ವಾಪಸಾಗುವಂತೆ ರಾಜ್ಯ ಸರಕಾರ ಮನವಿ ಮಾಡಿದೆ.

ಜತೆಗೆ ವೈದ್ಯರ ಕೆಲವು ಬೇಡಿಕೆಗಳಿಗೆ ಒಪ್ಪಿರುವುದಾಗಿ ಸಚಿವರು ತಿಳಿಸಿದ್ದಾರೆ.

ಆದರೆ ವೈದ್ಯ ಸಂಘಟನೆಯು ಶುಕ್ರವಾರದವರೆಗೆ ಮುಷ್ಕರ ಮುಂದುವರಿಸಲು ನಿರ್ಧರಿಸಿದೆ.

ಆರೋಗ್ಯ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ಹಾಗೂ ಉಪ ಮುಖ್ಯಮಂತ್ರಿ ಡಾ| ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗಿತ್ತು.

ವೈದ್ಯರ ವೇತನ ಪರಿಷ್ಕರಣೆಗೆ ಸರಕಾರ ಸಹಮತ ವ್ಯಕ್ತಪಡಿಸಿ, ಮುಷ್ಕರ ವಾಪಸ್‌ ಪಡೆಯಲು ಕೋರಿತ್ತು. ಆದರೆ, ವೈದ್ಯರ ಸಂಘದ ಅಧ್ಯಕ್ಷರು ಪದಾಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ತಮ್ಮ ತೀರ್ಮಾನ ಪ್ರಕಟಿಸುವುದಾಗಿ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಮಷ್ಕರ ಶುಕ್ರವಾರದವರೆಗೆ ಮುಂದುವರಿಯಲಿದೆ.

ವೈದ್ಯರು ಏಳು ತಿಂಗಳ ಕಾಲ ರಜೆ ಪಡೆಯದೆ ಸೇವೆ ಸಲ್ಲಿಸಿದ್ದಾರೆ. ಸರಕಾರ ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಿದೆ. ವೈದ್ಯರು ಪ್ರತಿಭಟನೆ ಬಿಟ್ಟು ಜನರ ಸೇವೆಗೆ ವಾಪಸಾಗಬೇಕು ಎಂದು ಡಿಸಿಎಂ ಡಾ| ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಭೆ ಫ‌ಲಪ್ರದ: ಡಾ| ಸುಧಾಕರ್‌
ಈ ಮಧ್ಯೆ ವೇತನ ಪರಿಷ್ಕರಣೆ ಸಂಬಂಧ ವೈದ್ಯರೊಂದಿಗೆ ನಡೆಸಿದ ಸಭೆ ಫ‌ಲಪ್ರದವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ಹೇಳಿದ್ದಾರೆ. ವೈದ್ಯರಿಗೆ ನೈತಿಕ ಸ್ಫೂರ್ತಿ ತುಂಬುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ. ಕಳೆದ ಆರು ತಿಂಗಳಲ್ಲಿ ಆರೋಗ್ಯ ಇಲಾಖೆಯ ಎಲ್ಲ ಪ್ರಸ್ತಾವಗಳಿಗೂ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ವೈದ್ಯರ ಬೇಡಿಕೆಗಳು ಈಡೇರಲಿವೆ ಎಂದರು.

ಶುಕ್ರವಾರ ನಿರ್ಧಾರ
ವೇತನ ಹೆಚ್ಚಳ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದ್ದಾರೆ. ಈ ಸಭೆಯ ತೀರ್ಮಾನದ ಕುರಿತು ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಶುಕ್ರವಾರ ಮತ್ತೆ ಸಚಿವರ ಜತೆ ಸಭೆ ನಡೆಸಲಿದ್ದೇವೆ. ಶುಕ್ರವಾರದವರೆಗೂ ನಮ್ಮ ಅಸಹಕಾರ ಪ್ರತಿಭಟನೆ ಮುಂದುವರಿಯಲಿದೆ.
– ಡಾ| ಗೋಳೂರು ಶ್ರೀನಿವಾಸ್‌, ರಾಜ್ಯ ಸರಕಾರಿ ವೈದ್ಯರ ಸಂಘದ ಅಧ್ಯಕ್ಷ.

ಟಾಪ್ ನ್ಯೂಸ್

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.