Explained: ಲೋಕಸಭೆ: ಕೋವಿಡ್ 19- 4 ಗಂಟೆ ಅವಧಿಯಲ್ಲಿ ದಿಢೀರ್ ಅಂತ ಲಾಕ್ ಡೌನ್ ಹೇರಿದ್ದೇಕೆ?

ಲಾಕ್ ಡೌನ್ ನಿಂದಾಗಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ಸಾಧ್ಯವಾಯಿತೇ?

Team Udayavani, Sep 16, 2020, 10:54 AM IST

ಕೋವಿಡ್ 19- 4 ಗಂಟೆ ಅವಧಿಯಲ್ಲಿ ದಿಢೀರ್ ಅಂತ ಲಾಕ್ ಡೌನ್ ಹೇರಿದ್ದೇಕೆ?

ನವದೆಹಲಿ:ವಿಶ್ವಾದ್ಯಂತ ಹಬ್ಬುತ್ತಿದ್ದ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಯ ಮೊದಲು ದಿಢೀರ್ ಎಂದು ಘೋಷಿಸಿದ್ದೇಕೆ ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಕೇಂದ್ರ ಸರ್ಕಾರ ಮಂಗಳವಾರ (ಸೆಪ್ಟೆಂಬರ್ 15, 2020) ಲಿಖಿತವಾಗಿ ಉತ್ತರ ನೀಡಿದೆ.

ಕೇಂದ್ರದ ಉತ್ತರವೇನು?

ಜನರ ಓಡಾಟ, ಸಂಚಾರ ಹೆಚ್ಚಾದರೆ ಮಾರಕ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುವ ಅಪಾಯ ಹೆಚ್ಚಾಗಿದೆ ಎಂಬ ತಜ್ಞರ ವರದಿಯ ಆಧಾರದ ಮೇಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದೆ.

ಮನೀಶ್ ತಿವಾರಿ ಪ್ರಶ್ನೆ:

ಮಾರ್ಚ್ 23ರಂದು ಕೇವಲ ನಾಲ್ಕು ಗಂಟೆ ಅವಧಿಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗುತ್ತದೆ ಎಂದು ಘೋಷಿಸಲು ಕಾರಣವೇನು? ಹೀಗೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರುವ ಅಗತ್ಯವಾದರು ಏನಿತ್ತು? ಲಾಕ್ ಡೌನ್ ನಿಂದಾಗಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ಸಾಧ್ಯವಾಯಿತೇ? ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಪ್ರಶ್ನಿಸಿದ್ದಾರೆ.

ಕೇಂದ್ರದ ಉತ್ತರ

ಈ ಕುರಿತು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ನೀಡಿರುವ ಲಿಖಿತ ಉತ್ತರದಲ್ಲಿ, ಜನವರಿ 7ರಂದು ಕೋವಿಡ್ 19 ಸೋಂಕು ವಿದೇಶದಲ್ಲಿ ಹರಡಲು ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಅಂತಾರಾಷ್ಟ್ರೀಯ ವಿಮಾನ ಸಂಚಾರ ಬಂದ್, ಸಾರ್ವಜನಿಕ ಪ್ರಕಟಣೆ, ಕ್ವಾರಂಟೈನ್ ವ್ಯವಸ್ಥೆ ಕೈಗೊಂಡಿತ್ತು ಎಂದು ತಿಳಿಸಿದ್ದಾರೆ.

ಗುಂಪು, ಗುಂಪಾಗಿ ಜನರು ಓಡಾಡುತ್ತಿದ್ದರೆ ದೇಶದ ಎಲ್ಲಾ ಭಾಗಗಳಲ್ಲಿಯೂ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿತ್ತು. ಈ ಹಿನ್ನೆಲೆಯಲ್ಲಿಯೇ ಮಾರ್ಚ್ 24ರಂದು ದೇಶಾದ್ಯಂತ ಲಾಕ್ ಡೌನ್ ಹೇರಿಕೆ ಬಗ್ಗೆ ಘೋಷಿಸಲಾಗಿತ್ತು. ಕೋವಿಡ್ 19 ಸೋಂಕಿನ ಜಾಗತಿಕವಾಗಿ ಸಂಭವಿಸಿದ ಸಾವು ಮತ್ತು ರೋಗದ ಪರಿಣಾಮವನ್ನು ಅವಲಂಬಿಸಿ ದೇಶದಲ್ಲಿ ಕೋವಿಡ್ 19 ಸೋಂಕು ತಡೆಗಟ್ಟಲು ಕೇಂದ್ರ ಲಾಕ್ ಡೌನ್ ನಿರ್ಧಾರ ತೆಗೆದುಕೊಂಡಿರುವುದಾಗಿ ವಿವರಿಸಿದೆ.

ದೇಶಾದ್ಯಂತ ಲಾಕ್ ಡೌನ್ ಹೇರಿದ್ದರಿಂದ ಕೋವಿಡ್ 19 ಸೋಂಕು ಹರಡುವುದನ್ನು ಭಾರತ ಯಶಸ್ವಿಯಾಗಿ ತಡೆಗಟ್ಟಿದೆ. ಅಷ್ಟೇ ಅಲ್ಲ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಹೆಚ್ಚುವರಿಯಾಗಿ ಆರೋಗ್ಯ ಕ್ಷೇತ್ರದ ಸೌಕರ್ಯವನ್ನು ಅಭಿವೃದ್ದಿಪಡಿಸಲು ನೆರವಾಗಿರುವುದಾಗಿ ತಿಳಿಸಿದೆ.

2020ರ ಮಾರ್ಚ್ ಗೆ ಹೋಲಿಸಿದಲ್ಲಿ ಕೋವಿಡ್ ನಂತರ ಐಸೋಲೇಶನ್ ಬೆಡ್ ಗಳನ್ನು 22 ಪಟ್ಟು ಹೆಚ್ಚಿಸಲಾಗಿದೆ, ಐಸಿಯು ಬೆಡ್ ಗಳನ್ನು 14 ಪಟ್ಟು ಹೆಚ್ಚಳ ಮಾಡಲಾಗಿದೆ. ಅಲ್ಲದೇ ಈ ಸಮಯದಲ್ಲಿ ಪ್ರಯೋಗಾಲಯಗಳ ಸಂಖ್ಯೆಯನ್ನು ದುಪ್ಪಟ್ಟು ಮಾಡಲಾಗಿದೆ. ಒಂದು ವೇಳೆ ಸರ್ಕಾರ ದೇಶಾದ್ಯಂತ ಲಾಕ್ ಡೌನ್ ಹೇರದಿದ್ದರೆ ದೇಶದಲ್ಲಿ ಇನ್ನೂ 14ರಿಂದ 29 ಲಕ್ಷದಷ್ಟು ಕೋವಿಡ್ 19 ಸೋಂಕು ಪತ್ತೆಯಾಗುತ್ತಿತ್ತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.