ಬದಲಾದ SBI ATM ನಿಯಮ; 10 ಸಾವಿರಕ್ಕಿಂತ ಮೇಲ್ಪಟ್ಟ ವ್ಯವಹಾರಕ್ಕೆ ಮೊಬೈಲ್‌ OTP ಕಡ್ಡಾಯ


Team Udayavani, Sep 16, 2020, 3:20 PM IST

ATM SBI

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಲಾಕ್‌ ಡೌನ್‌ ಸಮಯದಲ್ಲಿ ಎಟಿಎಂ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಎಸ್‌ಬಿಐ ಒಟಿಪಿ ಆಧಾರಿತ ಎಟಿಎಂ ನಗದು ಹಿಂಪಡೆಯುವ ಸೌಲಭ್ಯವನ್ನು ಜಾರಿಗೆ ತರಲು ನಿರ್ಧರಿಸಿದೆ. 24X7 ಮಾದರಿಯಲ್ಲಿ ಕರ್ತವ್ಯ ನಿರ್ವಹಿಸಲಿರುವ ಈ ಸೌಲಭ್ಯವು ಸೆಪ್ಟೆಂಬರ್‌ 18ರಿಂದ ದೇಶಾದ್ಯಂತದ ಎಲ್ಲ ಎಸ್‌ಬಿಐ ಎಟಿಎಂಗಳಲ್ಲಿ ಬಳಕೆಗೆ ಬರಲಿದೆ.

ಈ ನೂತನ ನಿಯಮದನ್ವಯ 10,000 ಅಥವಾ ಹೆಚ್ಚಿನ ರೂಪಾಯಿಗಳನ್ನು ಹಿಂಪಡೆಯುವ ಸಂದರ್ಭ ಒಟಿಪಿ ವಿಧಿಸಲಾಗುತ್ತದೆ. ಇದು ಹೊಸ ಕ್ರಮವಾಗಿದೆ. ಈ ಹಿಂದೆ ನೀವು ನೇರವಾಗಿ ಎಟಿಎಂಗೆ ತೆರಳಿ ನಿಮಗೆ ಬೇಕಾಗ ಹಣವನ್ನು ನಮೂದಿಸಿ ಹಿಂಪಡೆಯಬಹುದಾಗಿತ್ತು. ಇದೀಗ ಆ ಪ್ರಕ್ರಿಯೆಗೆ ಒನ್‌ ಟೈಮ್‌ ಪಾಸ್‌ವರ್ಡ್‌ (ಒಟಿಪಿ) ಸೇರ್ಪಡೆಯಾಗಲಿದೆ.

ಎಟಿಎಂನಿಂದ 10 ಸಾವಿರ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನನಗದನ್ನು ಹಿಂತೆಗೆದುಕೊಳ್ಳುವ ಸಂದರ್ಭ ಒಟಿಪಿ ಬೇಕಾಗಿ ಬರುತ್ತದೆ. ಈ ಮೊದಲು ರಾತ್ರಿ ಎಂಟು ಗಂಟೆಯಿಂದ 10 ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಹಿಂತೆಗೆದುಕೊಳ್ಳುವ ಸಂದರ್ಭ ಒಟಿಪಿ ಅಗತ್ಯ ಇತ್ತು. ಜನವರಿ 1ರಿಂದ ಬ್ಯಾಂಕ್‌ ಈ ನಿಯಮವನ್ನು ಜಾರಿಗೆ ತಂದಿತ್ತು. ಇದನ್ನೀಗ 24X7 ಮಾದರಿಗೆ ವಿಸ್ತರಿಸಿದೆ.

ಹೇಗೆ ನಡೆಯಲಿದೆ ಪ್ರಕ್ರಿಯೆ
ಸೆಪ್ಟೆಂಬರ್‌ 18 ಶುಕ್ರವಾರ, ನೀವು 10 ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು ಎಟಿಎಂಗೆ ಹೋದರೆ, ಕಾರ್ಡ್‌ ನಮೂದಿಸಿ ಮತ್ತು ಮೊತ್ತವನ್ನು ಹಾಕಿದ ಬಳಿಕ ಬ್ಯಾಂಕ್‌ಗೆ ನೀಡಲಾದ ಅಥವ ನೋಂದಾಯಿಸಿದ ಮೊಬೈಲ್‌ ನಂಬರ್‌ಗೆ ಒಟಿಪಿ ಇರುತ್ತದೆ. ಈ ಒಟಿಪಿಯನ್ನು ಡೆಬಿಟ್‌ ಕಾರ್ಡ್‌ನ ಪಿನ್‌ನೊಂದಿಗೆ ನಮೂದಿಸಬೇಕಾಗುತ್ತದೆ. ಇವಿಷ್ಟನ್ನು ನೀವು ಮಾಡಲು ಶಕ್ತವಾದರೆ ಮಾತ್ರ ಎಸ್‌ಬಿಐ ಎಟಿಎಂನಿಂದ ಹಣವನ್ನು ಹಿಂಪಡೆಯಲು ಸಾಧ್ಯವಾಗುತ್ತದೆ.

ಒಟಿಪಿಯಿಂದಾಗಿ ಸುರಕ್ಷತೆ ಹೇಗೆ ಹೆಚ್ಚಾಗುತ್ತದೆ?
ತಾಂತ್ರಿಕ ಸುಧಾರಣೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಎಸ್‌ಬಿಐ ಈ ಕ್ರಮಗಳನ್ನು ಕೈಗೊಂಡಿದೆ. ಗ್ರಾಹಕರ ಸುರಕ್ಷತೆಗೆ ಬಹಳ ಮೊದಲಿನಿಂದಲೂ ಎಸ್‌ಬಿಐ ಇಂತಹ ಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದೆ. ಒಟಿಪಿ ಆಧಾರಿತ ನಗದು ಹಿಂತೆಗೆದುಕೊಳ್ಳುವ ಈ ವಿಶೇಷ ಅಂಶ ಭದ್ರತಾ ಮಟ್ಟವನ್ನು ಮತ್ತಷ್ಟು ಬಲಪಡಿಸುತ್ತದೆ. ಎಸ್‌ಬಿಐ ಡೆಬಿಟ್‌ ಕಾರ್ಡ್‌ ಹೊಂದಿರುವವರು ಬ್ಯಾಂಕ್‌ ವಂಚನೆಗಳು, ಅನಧಿಕೃತ ಹಿಂಪಡೆಯುವಿಕೆ, ಕಾರ್ಡ್‌ ಸ್ಕಿಮ್ಮಿಂಗ್‌ ಮೊದಲಾದ ಅಪಾಯಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ದೇಶಾದ್ಯಂತ 22,000ಕ್ಕೂ ಹೆಚ್ಚು ಬ್ಯಾಂಕ್‌ ಶಾಖೆಗಳು
ದೇಶದ ಅತಿದೊಡ್ಡ ಬ್ಯಾಂಕ್‌ ಎಸ್‌ಬಿಐ ದೇಶಾದ್ಯಂತ 22 ಸಾವಿರಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಎಸ್‌ಬಿಐ 30ಕ್ಕೂ ಹೆಚ್ಚು ದೇಶಗಳಲ್ಲಿ ಅಸ್ತಿತ್ವದಲ್ಲಿದೆ. 6.6 ಕೋಟಿಗೂ ಹೆಚ್ಚು ಎಸ್‌ಬಿಐ ಗ್ರಾಹಕರು ಮೊಬೈಲ್‌ ಬ್ಯಾಂಕಿಂಗ್‌ ಮತ್ತು ಎಟಿಎಂ ಸೌಲಭ್ಯಗಳನ್ನು ಬಳಸುತ್ತಾರೆ.

 

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.