ಇ -ಸಂಜೀವಿನಿ ಮೂಲಕ ಉಚಿತ ಆರೋಗ್ಯ ಸೇವೆ


Team Udayavani, Sep 16, 2020, 5:11 PM IST

ಇ ಸಂಜೀವಿನಿ ಮೂಲಕ ಉಚಿತ ಆರೋಗ್ಯ ಸೇವೆ

ತುಮಕೂರು: ಸರ್ಕಾರವು ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಜನ ಸಾಮಾನ್ಯರ ಆರೋಗ್ಯ ಸಮಸ್ಯೆಗಳಿಗೆ ಉಚಿತವಾಗಿ ತುರ್ತು ವೈದ್ಯಕೀಯ ಸೇವೆ ಒದಗಿಸಲು ಜಿಲ್ಲೆಯಲ್ಲಿ ಟೆಲಿಮೆಡಿಸನ್‌ ಸೇವೆಯನ್ನು ಜಾರಿಗೊಳಿಸಿದೆ.

ಕೋವಿಡ್‌ ಸೋಂಕು ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ರೋಗಿಗಳುವೈದ್ಯಕೀಯ ಸಲಹೆಅಥವಾಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಲು ಭಯಭೀತರಾಗಿರುವುದನ್ನು ಮನಗಂಡಸರ್ಕಾರವು ರೋಗಿಗಳಿಗೆ ಈ ಸೇವೆ ಯನ್ನು ಉಚಿತವಾಗಿ ನೀಡಲು ಮುಂದಾಗಿದೆ.

ಏನಿದು ಟೆಲಿ ಮೆಡಿಸನ್‌ ಸೇವೆ: ಜಿಲ್ಲೆ ಯಲ್ಲಿರುವ ಸಾರ್ವಜನಿಕರು, ಹೊರರೋಗಿಗಳ ವಿಭಾಗಕ್ಕೆಬರುವ ಸಾಮಾನ್ಯ ಕಾಯಿಲೆಗಳಿಗೆ ಕೇಂದ್ರ ಸರ್ಕಾರದ ಇ-ಸಂಜೀವಿನಿ ಕಾರ್ಯಕ್ರಮದಡಿ ಮನೆಯ ಲ್ಲಿಯೇ ಕುಳಿತು ತಮ್ಮ ಅಂತರ್ಜಾಲಸಂಪರ್ಕ ಹೊಂದಿರುವ ಮೊಬೈಲ್‌,ಕಂಪ್ಯೂಟರ್‌ ಬಳಸಿ ಜಾಲತಾಣ e-sanjeevaniopd.in ಮೂಲಕ ನೋಂದಾ ಯಿಸಿಕೊಂಡು ತಜ್ಞ ವೈದ್ಯರೊಂದಿಗೆ ಸಮಾಲೋಚಿಸಿ ಉಚಿತವಾಗಿ ವೈದ್ಯಕೀಯ ಸಲಹೆ ಮತ್ತು ಸೇವೆಗಳನ್ನು ಪಡೆಯಬಹುದಾಗಿದೆ.

ವೀಡಿಯೋ ಕಾಲ್‌ ಮೂಲಕ ಸಲಹೆ: ಸಂದರ್ಶನದಲ್ಲಿ ಲಭ್ಯವಿರುವ ತಜ್ಞ ವೈದ್ಯರು ವೀಡಿಯೋ ಕಾಲ್‌ ಮೂಲಕ ರೋಗಿಯ ಆರೋಗ್ಯ ಸಮಸ್ಯೆಗಳನ್ನು ಆಲಿಸಿ ಸೂಕ್ತ ಚಿಕಿತ್ಸೆ ಸೂಚಿಸುವರು.ಅಗತ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಈಸೇವೆಯು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಮಧ್ಯಾಹ್ನ 1-45ರಿಂದ ಸಂಜೆ4-30 ಗಂಟೆ ರವರೆಗೆ ಲಭ್ಯವಿದ್ದು, ಜನಸಾಮಾನ್ಯರು ಈ ಸೇವೆಯನ್ನು ಸದ್ಭಳಕೆ ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್‌, ಮಕ್ಕಳ ರೋಗ ತಜ್ಞರು, ಪ್ರಸೂತಿ ಸ್ರ್ತೀರೋಗ ತಜ್ಞರು ಸೇರಿದಂತೆ ಸುಮಾರು 20 ತಜ್ಞ ವೈದ್ಯರು ಇ- ಸಂಜೀವಿನಿಕಾರ್ಯಕ್ರಮಕ್ಕೆನೋಂದಾಯಿಸಿಕೊಂಡಿದ್ದಾರೆ.

ಉಚಿತ ವೈದ್ಯಕೀಯ ಸಲಹೆ: ಜಿಲ್ಲಾ ಸ್ಪತ್ರೆಯ ಫಿಜಿಷಿಯನ್‌ ಡಾ. ಮಂಜುನಾಥ್‌ ಗುಪ್ತ ಅವರು ಟೆಲಿಮೆಡಿಸನ್‌ ಸೇವೆಯಡಿ ನೋಂದಾಯಿಸಿಕೊಂಡಸುಮಾರು 25 ಮಂದಿ ರೋಗಿಗಳಿಗೆ ಉಚಿತ ವೈದ್ಯಕೀಯ ಸಲಹೆ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.