ಬದಿಯಡ್ಕ ಮಂಡಲ ಕಾಂಗ್ರೆಸ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ
Team Udayavani, Sep 16, 2020, 8:07 PM IST
ಬದಿಯಡ್ಕ: ಸ್ಥಳೀಯಾಡಳಿತ ಸಂಸ್ಥೆಗಳ ಯೋಜನ ನಿಧಿಯನ್ನು ಕಡಿತಗೊಳಿಸಿ ಪಂಚಾಯತ್ನ ಯಾವುದೇ ಅಭಿವೃದ್ಧಿಗೆ ಸಾಕಾಗದೆ ವಂಚಿಸುತ್ತಿರುವ ಕೇರಳದ ಎಡರಂಗ ಸರಕಾರದ ವಿರುದ್ಧ ಬದಿಯಡ್ಕ ಮಂಡಲ ಕಾಂಗ್ರೆಸ್ ನೇತೃತ್ವದಲ್ಲಿ ಬದಿಯಡ್ಕ ಗ್ರಾಮ ಪಂಚಾಯತ್ ಮುಂಭಾಗ ಧರಣಿ ಸತ್ಯಾಗ್ರಹ ನಡೆಯಿತು.
ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಡಿಸಿಸಿ ಪ್ರಧಾನ ಕಾರ್ಯದರ್ಶಿ ಜೇಮ್ಸ್ ಕೇರಳ ಆಳುತ್ತಿರುವ ಎಡರಂಗ ಸರಕಾರ ಜನರನ್ನು ಭಯಭೀತಿಗೊಳಿಸಿದೆ. ಭ್ರಷ್ಟಾಚಾರ, ಡ್ರಗ್ಸ್ ಮಾಫಿಯಾ, ಕಳ್ಳತನ ಇದರಲ್ಲಿ ಭಾಗಿಯಾಗಿದ್ದು, ಆಡಳಿತ ಸಂಪೂರ್ಣ ಕುಸಿದಿದೆ ಎಂದರು.
ಬದಿಯಡ್ಕ ಮಂಡಲ ಕಾಂಗ್ರೆಸ್ ಅಧ್ಯಕ್ಷ ಎಂ. ನಾರಾಯಣ ಮಣಿಯಾಣಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಜಿ. ಚಂದ್ರಹಾಸ ರೈ, ಐಎನ್ಟಿಯುಸಿ ಬದಿಯಡ್ಕ ಮಂಡಲ ಅಧ್ಯಕ್ಷ ರವಿ ಮೆಣಸಿನ ಪಾರೆ, ಕಾಂಗ್ರೆಸ್ ನೇತಾರ ಐತ್ತಪ್ಪ ಚೆನ್ನಗೂಳಿ, ಪಂಚಾಯತ್ ಸದಸ್ಯರಾದ ಜಯಶ್ರೀ, ಪ್ರಸನ್ನ ಶುಭಹಾರೈಸಿದರು.
ಮ್ಯಾಥ್ಯೂಸ್, ಶಾಫಿ ಗೋಳಿಯಡ್ಕ, ಶಾಫಿ, ಶಾಫಿ ಪಯ್ಯಲಡ್ಕ, ಕುಮಾರ ನಾಯರ್, ಶಿಜು, ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸತ್ಯಾಗ್ರಹದ ನೇತೃತ್ವ ವಹಿಸಿದರು. ಬದಿಯಡ್ಕ ಮಂಡಲ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಜಿ. ಜಗನ್ನಾಥ ರೈ ಸ್ವಾಗತಿಸಿದರು. ಬದಿಯಡ್ಕ ಮಂಡಲ ಕೋಶಾಧಿಕಾರಿ ಅಬ್ಟಾಸ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
E.D. ಬಂಧನ ಪ್ರಶ್ನಿಸಿದ್ದ ಸೊರೇನ್ ಅರ್ಜಿ ತಿರಸ್ಕಾರ
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್ವೈ