ಸಿಎಎ ವಿರೋಧಿ ಪ್ರತಿಭಟನೆ, ದಂಗೆ; 15ಮಂದಿ ವಿರುದ್ಧ 17 ಸಾವಿರ ಪುಟ ಚಾರ್ಜ್ಶೀಟ್!
ಗಲಭೆಗೆ ಕುಮ್ಮಕ್ಕು ನೀಡಿದ ಮಾಹಿತಿ, ಮೊಬೈಲ್ ಕರೆಗಳ ಆಧಾರದಲ್ಲಿ ಆರೋಪಪಟ್ಟಿ ಸಿದ್ಧ ಪಡಿಸಲಾಗಿದೆ.
Team Udayavani, Sep 17, 2020, 11:55 AM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ, ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 17,500 ಪುಟಗಳಷ್ಟು ಆರೋಪಪಟ್ಟಿಯನ್ನು ಪೊಲೀಸರು ಕಾರ್ಕದೂಮಾ ಕೋರ್ಟ್ಗೆ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ 2,692 ಪುಟಗಳಷ್ಟು ಆರೋಪ ಪಟ್ಟಿ ಇದೆ. ಉಳಿದ ಪುಟಗಳಲ್ಲಿ ಅದಕ್ಕೆ ಸಂಬಂಧಿಸಿದ ವಿವರಣೆಗಳಿವೆ.
ಅದನ್ನು ಎರಡು ಸ್ಟೀಲ್ನ ಟ್ರಂಕ್ಗಳ ಮೂಲಕ ಕೋರ್ಟ್ಗೆ ತರಲಾಗಿತ್ತು. ಗಲಭೆ, ಅಹಿತಕರ ಘಟನೆಗಳಿಗೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ 15ಮಂದಿಯ ಹೆಸರುಗಳನ್ನು ಅದರಲ್ಲಿ ಉಲ್ಲೇಖಿಸಲಾಗಿದೆ.
ನತಾಶಾ ನರ್ವಾಲ್, ದೇವಾಂಗ ಕಾಲಿತಾ, ಆಸಿಫ್ ಇಕ್ಬಾಲ್ ತನ್ಹಾ, ಇಶ್ರತ್ ಜಹಾನ್, ಮೀರನ್ ಹೈದರ್, ಸಫೂರಾ ಜರ್ಗಾರ್ ಮತ್ತು ಖಾಲಿಫ್ ಸೈಪಿ ಅವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಅವರೆಲ್ಲರ ವಿರುದ್ಧ ಕಠಿಣ ಕಾನೂನು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯನ್ವಯ ಕೇಸು ದಾಖಲಿಸಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿಯವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ; ರಾಹುಲ್, ಕೇಜ್ರಿವಾಲ್ ಶುಭಾಶಯ
ವಾಟ್ಸ್ಆ್ಯಪ್ ಮೂಲಕ ಗಲಭೆಗೆ ಕುಮ್ಮಕ್ಕು ನೀಡಿದ ಮಾಹಿತಿ, ಮೊಬೈಲ್ ಕರೆಗಳ ಆಧಾರದಲ್ಲಿ ಆರೋಪಪಟ್ಟಿ ಸಿದ್ಧ ಪಡಿಸಲಾಗಿದೆ. ಫೆಬ್ರವರಿಯಲ್ಲಿ ನಡೆದಿದ್ದ ಪ್ರಕರಣದಲ್ಲಿ 53 ಮಂದಿ ಅಸುನೀಗಿ, 200ಕ್ಕೂ ಅಧಿಕ ಮಂದಿ ಗಾಯ ಗೊಂಡಿದ್ದರು. ಈಗಾಗಲೇಬಂಧನಕ್ಕೊಳಗಾಗಿರುವ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಹೆಸರು ಚಾರ್ಜ್ ಶೀಟ್ನಲ್ಲಿಲ್ಲ. ದೆಹಲಿ ಪೊಲೀಸರ ಕಾರ್ಯವೈಖರಿ ಬಗ್ಗೆ ಪ್ರಬಲ ಟೀಕೆ ವ್ಯಕ್ತವಾಗಿರುವ ಈ ಗಲಭೆ ಪ್ರಕರಣದಲ್ಲಿ 751ಕೇಸುಗಳನ್ನು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು