ಪ್ರಧಾನ ಮಂತ್ರಿ ಆವಾಸ್‌ ಯೋಜನೆ; ಕಾಮಗಾರಿ ಆರಂಭಿಸಲು ಸೆ.30ರ ಗಡುವು


Team Udayavani, Sep 18, 2020, 6:18 AM IST

ಪ್ರಧಾನ ಮಂತ್ರಿ ಆವಾಸ್‌ ಯೋಜನೆ; ಕಾಮಗಾರಿ ಆರಂಭಿಸಲು ಸೆ.30ರ ಗಡುವು

ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಧಾನ ಮಂತ್ರಿ ಯೋಜನೆ ಅಡಿಯಲ್ಲಿ ಫ‌ಲಾನುಭವಿಗಳು ಮನೆ ಕಟ್ಟಿಕೊಳ್ಳ ದಿದ್ದರೆ ವಾಪಸ್‌ ಪಡೆಯಲು ಸರಕಾರ ನಿರ್ಧರಿಸಿದೆ. ಈ ಕುರಿತು ಎಲ್ಲ ಪಂಚಾಯತ್‌ಗಳಿಗೂ ಮಾಹಿತಿ ನೀಡಿದ್ದು, ಫ‌ಲಾನುಭವಿಗಳು ಮನೆ ನಿರ್ಮಿಸದಿದ್ದರೆ, ಅವರಿಂದ ಲಿಖೀತ ಹೇಳಿಕೆ ಪಡೆದು ಮನೆಗಳನ್ನು ವಾಪಸ್‌ ಪಡೆಯುವಂತೆ ಸೂಚಿಸಲಾಗಿದೆ.

ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್‌ ಯೋಜನೆ ಅಡಿಯಲ್ಲಿ 2016-17ರಿಂದ 2019-20ರ ವರೆಗೆ 1.86 ಲಕ್ಷ ಅರ್ಹ ಫ‌ಲಾನುಭವಿ ಗಳನ್ನು ಆರಿಸಲಾಗಿದ್ದು, ಮೂರು ವರ್ಷಗಳಲ್ಲಿ 92 ಸಾವಿರ ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಬಾಕಿ ಉಳಿದ ಮನೆಗಳ ಕಾಮಗಾರಿ ಆರಂಭಿಸಲು ಸೆಪ್ಟಂಬರ್‌ 30ರ ಗಡುವು ವಿಧಿಸಲಾಗಿದೆ. ಅದು ಸಾಧ್ಯವಾಗದಿದ್ದರೆ ಫ‌ಲಾನುಭವಿ ಗಳಿಂದ ಲಿಖೀತ ಹೇಳಿಕೆ ಪಡೆದು ಮನೆಗಳನ್ನು ವಾಪಸ್‌ ಪಡೆಯುವಂತೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗಳಿಗೆ ಸೂಚಿಸಲಾಗಿದೆ.

ಆಗಿರುವುದೇನು?
ಕೇಂದ್ರ ಸರಕಾರ 2011ರ ಜನಗಣತಿ ಆಧಾರದಲ್ಲಿ ರಾಜ್ಯದಲ್ಲಿ 6,33,990 ವಸತಿ ರಹಿತರ ಪಟ್ಟಿಯನ್ನು ರಾಜ್ಯ ಸರಕಾರಕ್ಕೆ ನೀಡಿದೆ. ಅದರಲ್ಲಿ ರಾಜ್ಯ ಸರಕಾರವು 1,86,445 ಮಂದಿಯನ್ನು ಅರ್ಹರು ಎಂದು ಪರಿಗಣಿಸಿದೆ. ಪ್ರಧಾನ ಮಂತ್ರಿ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ 2016-17ರಲ್ಲಿ 92,394 ಮನೆಗಳು ಬಿಡುಗಡೆ ಯಾಗಿದ್ದು, ಈ ಪೈಕಿ 61,894 ಮನೆಗಳು ಪೂರ್ಣವಾಗಿವೆ. 17,375 ಮನೆಗಳು ನಿರ್ಮಾಣ ಹಂತದಲ್ಲಿದ್ದು, 12,765 ಮನೆಗಳ ಕಾಮಗಾರಿ ಇನ್ನೂ ಆರಂಭವಾಗಿಲ್ಲ.

2017-18ರಲ್ಲಿ ರಾಜ್ಯಕ್ಕೆ 54,629 ಮನೆಗಳು ಮಂಜೂರಾಗಿದ್ದು, 30,306 ಮನೆಗಳ ಕಾರ್ಯ ಪೂರ್ಣ ಗೊಂಡಿವೆ. ಸುಮಾರು 15,378 ಮನೆ ಗಳು ನಿರ್ಮಾಣ ಹಂತದಲ್ಲಿದ್ದು, 8,945 ಮನೆಗಳ ಕಾಮಗಾರಿ ಇನ್ನೂ ಆರಂಭವಾಗಿಲ್ಲ.

2019-20ರಲ್ಲಿ 39,422 ಮನೆಗಳು ಮಂಜೂರಾಗಿದ್ದು, ಕೇವಲ 296 ಮನೆಗಳು ಪೂರ್ತಿಯಾಗಿವೆ. 11,309 ಮನೆಗಳು ನಿರ್ಮಾಣ ಹಂತದಲ್ಲಿದ್ದು, 27,817 ಮನೆಗಳ ಕಾಮಗಾರಿ ಆರಂಭವಾಗಿಲ್ಲ. ಒಟ್ಟು ಮೂರು ವರ್ಷಗಳಲ್ಲಿ 49,527 ಫ‌ಲಾನುಭವಿಗಳು ಮನೆ ನಿರ್ಮಾಣ ಕಾರ್ಯ ಆರಂಭಿಸಿಲ್ಲ.

ಆರ್ಥಿಕ ಸಮಸ್ಯೆ
ಸರಕಾರ ಮನೆ ಮಂಜೂರು ಮಾಡಿದ ಕೂಡಲೇ ಹಣ ಬಿಡುಗಡೆ ಮಾಡದಿರುವುದರಿಂದ ಫ‌ಲಾನುಭವಿ ಗಳು ಸಾಲ ಮಾಡಿ ಮನೆ ನಿರ್ಮಿಸಲು ಹಿಂದೇಟು ಹಾಕುತ್ತಿದ್ದಾರೆ. ಮನೆ ಮಂಜೂರಾದ ಕೂಡಲೇ ಮೊದಲ ಕಂತಿನ ಹಣ ನೀಡಿದರೆ ಕಾಮಗಾರಿ ಆರಂಭಿಸಬಹುದು ಎನ್ನುತ್ತಾರೆ ಫ‌ಲಾನುಭವಿಗಳು.

ತಾಂತ್ರಿಕ ಕಾರಣ
ಯೋಜನೆಯಡಿ ಕೆಲವು ಮನೆಗಳ ನಿರ್ಮಾಣ ಹಂತದಲ್ಲಿದ್ದರೂ ಫ‌ಲಾನು ಭವಿಗಳ ಆಧಾರ್‌ ಕಾರ್ಡ್‌ ಜೋಡಣೆ ಹಾಗೂ ಜಿಪಿಎಸ್‌ ಮಾಡಿಸದೇ ಇರುವುದರಿಂದಲೂ ಮನೆ ನಿರ್ಮಾಣದ ಪ್ರಗತಿಯು ನಿಗಮಕ್ಕೆ ಅಪ್‌ಲೋಡ್‌ ಆಗುತ್ತಿಲ್ಲ. ಅಲ್ಲದೆ, ಫ‌ಲಾನುಭವಿಗಳು ಒಂದು ಹಂತದ ಮನೆ ನಿರ್ಮಿಸಿ ಆರು ತಿಂಗಳು ಕಾದರೂ, ತಾಂತ್ರಿಕ ಕಾರಣದಿಂದ ಹಣ ಬಿಡುಗಡೆ ಯಾಗದಿರುವುದರಿಂದ ನಿರ್ಮಾಣ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.

ಶಂಕರ ಪಾಗೋಜಿ

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.