ಸಂಕಷದಲ್ಲಿ ಕಲಾವಿದರಿಗೆ ನೆರವು ನೀಡಿ


Team Udayavani, Sep 18, 2020, 6:20 PM IST

ಸಂಕಷದಲ್ಲಿ ಕಲಾವಿದರಿಗೆ ನೆರವು ನೀಡಿ

ಬಾಗಲಕೋಟೆ: ಕೋವಿಡ್  ಸಂಕಷ್ಟದ ಸಂದರ್ಭದಲ್ಲಿ ಜಿಲ್ಲೆಯ ಬೀದಿ ನಾಟಕ ಕಲಾವಿದರೂ ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ನೆರವಿಗೆ ಬರಬೇಕುಎಂದು ಜಿಲ್ಲೆಯ ಬೀದಿ ನಾಟಕ ಕಲಾವಿದರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಾದಾಮಿ ತಾಲೂಕುಗೋವಿನಕೊಪ್ಪ ಕಲಾ ತಂಡದ ಮಂಜುನಾಥ ದ್ಯಾವನ್ನವರ ಮಾತನಾಡಿ, ರಾಜ್ಯದಲ್ಲಿ ಸುಮಾರು 4500ಕ್ಕೂ ಹೆಚ್ಚು ಬೀದಿ ನಾಟಕಕಲಾವಿದರಿದ್ದೇವೆ. ಸರ್ಕಾರದ ವಿವಿಧ ಯೋಜನೆಗಳ ಕುರಿತು ಗ್ರಾಮೀಣ ಜನರಲ್ಲಿ ನಾಟಕದ ಮೂಲಕ ಜಾಗೃತಿ ಮೂಡಿಸಿ,ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತ ಬಂದಿದ್ದೇವೆ. ಆದರೆ, ಈಚಿನ ದಿನಗಳಲ್ಲಿ ಬೀದಿ ನಾಟಕಕಲಾವಿದರಿಗೆ ಯಾವುದೇ ಐಇಸಿ ಚಟುವಟಿಕೆ ನೀಡಿಲ್ಲ. ಇದರಿಂದ ಕಲಾವಿದರ ಬದುಕು ದುಸ್ತರವಾಗಿದೆ ಎಂದರು.

ಬೀದಿಯಲ್ಲಿ ಅರಿವು ಮೂಡಿಸುವವರು ನಾವು, ಬೀದಿ ಪಾಲಾಗುವ ಆತಂಕದಲ್ಲಿದ್ದೇವೆ. ಸರ್ಕಾರ ಕೂಡಲೇ ನಮ್ಮ ಸಮಸ್ಯೆಯನ್ನು ಅರಿತು ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಲೋಕಾಪುರದ ದುರ್ಗಾದೇವಿ ಗೀ ಗೀ ಪದ ಕಲಾವಿದರ ಸಂಘ, ಕೆರೂರಿನ ಬನಶಂಕರಿ ಜಾನಪದ ಸಂಪ್ರದಾಯ ಕಲಾ ಸಂಘ, ನರೇನೂರದ ಡಿಡಿ ಮತ್ತು ಆಕಾಶವಾಣಿಕಲಾವಿದರು, ಕೆರೂರಿನ ಶಾಕಾಂಬರಿಜಾನಪದ ಕಲಾವಿದರ ಸಂಘ, ನವನಗರದ ಅಂಬಾಭವಾನಿ ಗೋಂದಳಿ ಕಲಾವಿದರ ಸಂಘ ಸೇರಿದಂತೆ ವಿವಿಧ ಬೀದಿ ನಾಟಕ ಕಲಾ ತಂಡಗಳ ಕಲಾವಿದರು ಪಾಲ್ಗೊಂಡಿದ್ದರು.

……………………………………………………………………………………………………………………………………………………..

ಶಿಕಣ ಇಲಾಖೆ ಅಧಿಕಾರಿಗಳ ಭೇಟಿ : ಶಿರೂರ: ಸ್ಥಳೀಯ ಸಿದ್ದೇಶ್ವರ ಪ್ರೌಢಶಾಲೆಯಿಂದ ವಿದ್ಯಾರ್ಥಿಗಳ ಶಿಕ್ಷಣದ ಉನ್ನತಿಗಾಗಿ ಗ್ರಾಮದ ಎಂಟು ಕಡೆ ನಡೆಯುತ್ತಿರುವ ವಿದ್ಯಾಗಮ ಕಲಿಕಾ  ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಾರ್ಯಾಲಯದ ವಿಷಯ ಪರಿವೀಕ್ಷಕರಾದ ಎಂ.ಎ ಬಾಳಿಕಾಯಿ, ಎನ್‌.ವೈ. ಮಾಡಮಗೇರಿ ಭೇಟಿ ನೀಡಿ ಪರಿಶಿಲಿಸಿದರು.

ನಂತರ ವಿದ್ಯಾರ್ಥಿಗಳನ್ನು ವಿವಿಧ ವಿಷಯಗಳ ಕುರಿತು ಪ್ರಶ್ನಿಸಿ ಅವರಿಂದ ಉತ್ತರಪಡೆದರು. ತಾಲೂಕಿನ ಪ್ರತಿ ಶಾಲೆಗಳಲ್ಲಿ ಮುಖ್ಯ ಗುರುಗಳು ಆಯಾ ಸಹ ಶಿಕ್ಷಕರು, ಈ ವಿದ್ಯಾಗಮದ ಯೋಜನೆಯನ್ನು ಉತ್ತಮರೀತಿಯಲ್ಲಿ ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ಗ್ರಾಮದ ಕಿತ್ತೂರು ಚೆನ್ನಮ್ಮ ಪ್ರೌಢಶಾಲೆಯವತಿಯಿಂದ ಶಿರೂರ, ಬೂದಿನಗಡ, ಗುಂಡನಪಲ್ಲೆ, ಮಲ್ಲಾಪುರ ಗ್ರಾಮಗಳಲ್ಲಿ 4 ಕಲಿಕಾ ತಂಡಗಳು ವಿಷಯವಾರು ಬೋಧನೆ ನಡೆಯುತ್ತಿದೆ. ಸಿದ್ದೇಶ್ವರ ಪ್ರೌಢಶಾಲೆಯಮುಖ್ಯ ಗುರುಮಾತೆ, ಎಲ್‌.ಟಿ. ಪೂಜಾರ ಸೇರಿದಂತೆ 8 ಶಿಕ್ಷಕರು ಕಿತ್ತೂರು ಚನ್ನಮ್ಮ ಪ್ರೌಢಶಾಲೆಯ ಮುಖ್ಯ ಗುರುಮಾತೆ ವಿಜಯಲಕ್ಷ್ಮೀ ಹಿರೇಮಠ ಸೇರಿದಂತೆ ವಿದ್ಯಾಗಮ ಕೇಂದ್ರಗಳಲ್ಲಿ ಸಾಮಾಜಿಕ ಅಂತರದೊಂದಿಗೆ ಪಾಠ ಮಾಡುತ್ತಿದ್ದಾರೆ.

ಗ್ರಾಮ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಹೆಣ್ಣು ಮಕ್ಕಳ ಶಾಲೆ, ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯಗುರುಗಳಾದ ಎಚ್‌.ಕೆ. ಮಗಸಜ್ಜಿ, ಆರ್‌.ಎಚ್‌ ಬೇವಿನಗಿಡದ, ಎಚ್‌.ಎಂಮಾಚಾ, ವೈ.ಎಂ. ಮಲಘಾಣ, ಎಸ್‌. ಎಂ. ನಾಲವತ್ವಾಡ ಸೇರಿದಂತೆ ಸಹಶಿಕ್ಷಕರುನಡೆಸುತ್ತಿರುವ ಗ್ರಾಮದ 50 ಕ್ಕೂ ಹೆಚ್ಚು ಕಲಿಕಾ ತಂಡಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.