ಕೊಳ್ಳುವವರಿಲ್ಲದೇ ರಾಶಿ ರಾಶಿಯಾಗಿ ಬಿದ್ದ ಸೀರೆಗಳು

ಲಾಕ್‌ಡೌನ್‌ ಬರೆಗೆ ನೇಕಾರರ ಬದುಕು ಅತಂತ್ರ

Team Udayavani, Sep 18, 2020, 6:30 PM IST

ಕೊಳ್ಳುವವರಿಲ್ಲದೇ ರಾಶಿ ರಾಶಿಯಾಗಿ ಬಿದ್ದ ಸೀರೆಗಳು

ಸಾಂದರ್ಭಿಕ ಚಿತ್ರ

ಬೆಳಗಾವಿ: ನಿತ್ಯ ಸಾವಿರಾರು ಸೀರೆಗಳನ್ನು ಉತ್ಪಾದಿಸಿ ಉತ್ತರ ಭಾರತದ ಅನೇಕ ರಾಜ್ಯಗಳಿಗೆ ಕಳುಹಿಸುತ್ತಿದ್ದ ನೇಕಾರರು ಚಿಂತಾಕ್ರಾಂತರಾಗಿದ್ದು, ಲಕ್ಷಾಂತರ ಸೀರೆಗಳುಕೊಳ್ಳುವವರಿಲ್ಲದೇ ಸ್ಟಾಕ್‌ ಬಿದ್ದಿವೆ. ಇಂದೋ, ನಾಳೆ ಮಾರಾಟವಾಗಬಹುದೆಂಬ ಆಸೆಗಣ್ಣಿನಿಂದ ಕಾಲ ಕಳೆಯುವಂಥ ಸ್ಥಿತಿ ನಿರ್ಮಾಣವಾಗಿದೆ.

ಬೆಳಗಾವಿ ತಾಲೂಕಿನ ಸುಳೇಭಾವಿ,ಮಾರೀಹಾಳ, ಮೋದಗಾ, ಬೈಲಹೊಂಗಲ ತಾಲೂಕಿನ ದೇಶನೂರ ಸೇರಿದಂತೆ ಕೆಲವು ಹಳ್ಳಿಗಳಲ್ಲಿ ತಲೆತಲಾಂತರದಿಂದ ನೇಕಾರಿಕೆ ಉದ್ಯೋಗ ನಡೆಸಿಕೊಂಡು ಬರಲಾಗುತ್ತಿದೆ. ಈ ವರ್ಷದ ಲಾಕ್‌ಡೌನ್‌ದಿಂದಾಗಿ ಈ ಭಾಗದ ನೇಕಾರರ ಬದುಕಿನ ಮೇಲೆ ಬರೆ ಎಳೆದಂತಾಗಿದ್ದು, ಲಕ್ಷಾಂತರ ಪ್ರಮಾಣದಲ್ಲಿ ಸೀರೆಗಳು ಸಂಗ್ರಹವಾಗಿವೆ.

ಲಾಕ್‌ಡೌನ್‌ಕ್ಕಿಂತ ಮುಂಚೆ ಅಂದುಕೊಂಡಂತೆ ಆಗಿದ್ದರೆ ಇಷ್ಟೊಂದು ಸೀರೆಗಳು ಸಂಗ್ರಹಇರುತ್ತಿರಲಿಲ್ಲ. ಮೂರ್‍ನಾಲ್ಕು ಮಗ್ಗಗಳನ್ನುಇಟ್ಟುಕೊಂಡು ಉದ್ಯೋಗ ನಡೆಸುತ್ತಿರುವ ಪ್ರತಿಯೊಬ್ಬ ನೇಕಾರರ ಮನೆಯಲ್ಲೂ ಉತ್ಪಾದಿತ ಸೀರೆಗಳು ಸ್ಟಾಕ್‌ ಉಳಿದಿವೆ. ಜತೆಗೆ ಸೀರೆ ಖರೀದಿಸುವ ದೊಡ್ಡ ವ್ಯಾಪಾರಸ್ಥರ ಮನೆಯಲ್ಲಂತೂ 20, 30 ಸಾವಿರಗಳಷ್ಟು ಸೀರೆಗಳು ಮೂಲೆ ಹಿಡಿದು ಬಿದ್ದಿವೆ.

ನೇಕಾರರ ಕಷ್ಟ ಕೇಳುವವರು ಯಾರು?:  ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೂ ಲಾಕ್‌ಡೌನ್‌ ಸಡಿಲಿಕೆ ಮಾಡಲಾಗಿದೆ. ಇದರಿಂದ ನೇಕಾರರು ತಮ್ಮ ಬಳಿ ಇದ್ದ ಕಚ್ಚಾ ವಸ್ತುಗಳನ್ನು ಬಳಸಿಕೊಂಡು ಸೀರೆಗಳನ್ನು ಉತ್ಪಾದಿಸಿದ್ದಾರೆ. ಶೇಡಜೀ, ಮಾಲೀಕರಿಂದ ಕಚ್ಚಾ ಮಾಲುಗಳನ್ನು ಖರೀದಿಸಿ ತಂದು ಒಂದೆರಡು ತಿಂಗಳು ಉದ್ಯೋಗ ಮಾಡಿ ಉತ್ಪಾದಿಸಿದ ಸೀರೆಗಳನ್ನು ಖರೀದಿಸುವವರು ಇಲ್ಲದಂತಾಗಿದೆ. ನೇಕಾರಿಕೆ ಉದ್ಯೋಗವನ್ನೇ ನಂಬಿರುವ ನೇಕಾರರು ದಿನಂಪ್ರತಿ ಕಷ್ಟ ಪಡುತ್ತಿದ್ದಾರೆ.

ಅರ್ಧದಷ್ಟು ಕುಸಿದ ಉದ್ಯೋಗ: ಕಚ್ಚಾ ಮಾಲುಗಳನ್ನು ಹೊಂದಿಸಿಕೊಂಡು ಸೀರೆ ನೇಯ್ದಿರುವ ನೇಕಾರರ ಮಾಲುಗಳನ್ನು ಕೇಳುವವರು ಇಲ್ಲದಂತಾಗಿದೆ. ಶಹಾಪುರ,ಖಾಸಬಾಗ, ವಡಗಾಂವನಲ್ಲಿರುವ ಶೇಡಜೀ ಬಳಿ ಹೋಗಿ ಸೀರೆ ಕೊಟ್ಟರೂ ಬೇಡಿಕೆ ಇಲ್ಲದೇ ಅವರೂ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯಕ್ಕೆ ಸೀರೆ ಉತ್ಪಾದನೆ ಶೇ. 50ರಷ್ಟು ಕಡಿಮೆ ಮಾಡುವಂತೆ ಸಲಹೆ ನೀಡಿ ನೇಕಾರರ ಬದುಕಿಗೆ ಆಸರೆಯಾಗಲು ವ್ಯಾಪಾರಸ್ಥರು ಸೀರೆ ಖರೀದಿಸುತ್ತಿದ್ದಾರೆ.

ಕೆಲವು ದೊಡ್ಡ ದೊಡ್ಡ ವ್ಯಾಪಾರಸ್ಥರು ಕಡಿಮೆ ದರದಲ್ಲಿ ಸೀರೆ ಖರೀದಿಸಲು ಮುಂದಾಗಿದ್ದಾರೆ. ಈ ಸೀರೆಗಳ ಬೇಡಿಕೆ ಮುಂದಿನ ದಿನಗಳಲ್ಲಿ ಬಂದರೆ ಅನುಕೂಲವಾಗಲಿದೆ ಎಂಬ ಆಶಾಭಾವನೆ ಇವರಲ್ಲಿದೆ. ಈಗಾಗಲೇ ಬೆಳಗಾವಿಯ ಶಹಾಪುರ, ಖಾಸಬಾಗ, ವಡಗಾಂವ ಸೇರಿದಂತೆ ದೊಡ್ಡ ವ್ಯಾಪಾರಸ್ಥರ ಬಳಿ ಸುಮಾರು 10 ಲಕ್ಷಕ್ಕೂ ಹೆಚ್ಚು ಸೀರೆಗಳು ಸ್ಟಾಕ್‌ ಇವೆ ಎನ್ನಲಾಗುತ್ತಿದೆ.

 ಸಹಜ ಸ್ಥಿತಿಗೆ ಇನ್ನೂ ಬಂದಿಲ್ಲ: ಬಂಡವಾಳ ಹಾಕಿ ಮಗ್ಗಗಳನ್ನು ಆರಂಭಿಸಿದ ಮಗ್ಗಗಳ ಮಾಲೀಕರ ಕೈಯಲ್ಲಿ ಹಣವೇ ಓಡಾಡುತ್ತಿಲ್ಲ. ಮಾರುಕಟ್ಟೆಯಲ್ಲಿ ಸೀರೆಗಳನ್ನು ಖರೀದಿಸಿ ಬೇರೆ ಬೇರೆ ರಾಜ್ಯಗಳಲ್ಲಿ ಬೇಡಿಕೆ ಇಲ್ಲದ್ದಕ್ಕೆ ಕಗ್ಗಂಟಾಗಿದೆ. ಮಹಾರಾಷ್ಟ್ರ, ಬೆಂಗಳೂರು, ತಮಿಳುನಾಡು,

ಆಂಧ್ರ ಪ್ರದೇಶ, ಕೊಲ್ಕತ್ತಾ ಸೇರಿದಂತೆ ಅನೇಕ ಮಹಾನಗರಗಳಿಗೆ ಸೀರೆಗಳು ಹೋಗುತ್ತವೆ. ಆದರೆ ಮದುವೆ, ಸಭೆ-ಸಮಾರಂಭಕ್ಕೆ ಇಲ್ಲದ ಅನುಮತಿ, ಜನರಲ್ಲಿರುವ ಕೊರೊನಾ ಭಯದಿಂದಾಗಿ ಬೇಡಿಕೆ ಸಂಪೂರ್ಣವಾಗಿ ಕುಸಿದಿದೆ.

ಉತ್ಪಾದಿತ ಸೀರೆಗಳಿಗೆ ಮಾರುಕಟ್ಟೆಯೇ ಇಲದಿದ್ದರೆ ಉದ್ಯೋಗ ಮಾಡಿ ಏನು ಮಾಡುವುದು ಎಂಬ ಚಿಂತೆಯಲ್ಲಿ ನೇಕಾರರು ಇದ್ದಾರೆ. ಇನ್ನೊಂದೆಡೆ ಸೀರೆ ನೇಯ್ದ ನೇಕಾರರಿಗೆ ಎಲ್ಲಿಂದ ಕೂಲಿ ಕೊಡುವುದು ಎಂಬ ಚಿಂತೆಯಲ್ಲಿ ಮಾಲೀಕರಿದ್ದಾರೆ. ಹೀಗಾಗಿ ಕೂಲಿ ನೇಕಾರರು ತರಕಾರಿ ಮಾರಾಟ, ಕಟ್ಟಡ ಕಾರ್ಮಿಕರಾಗಿ, ನರೇಗಾ ಕೆಲಸಕ್ಕೆ ಹೋಗುತ್ತಿದ್ದಾರೆ.

ಕೆಲಸ ಇಲ್ಲದೇ ಬದುಕು ಕಷ್ಟಕರ: ಸಹಜ ಸ್ಥಿತಿಗೆ ಮರಳುವವರೆಗೆ ಈ ಸಮಸ್ಯೆ ನಿರಂತರವಾಗಿ ಇರಲಿದೆ. ಅನೇಕ ವರ್ಷಗಳಿಂದ ಈ ಉದ್ಯೋಗ ನಡೆಸಿಕೊಂಡು ಬರಲಾಗುತ್ತಿದೆ. ನಿತ್ಯ ಇದೇ ಉದ್ಯೋಗ ನಂಬಿಕೊಂಡು ಬದಕು ಸಾಗಿಸುತ್ತಿರುವ ನೇಕಾರರ ಬದುಕು ಮೂರಾಬಟ್ಟೆಯಾಗಿದೆ. ವಾರದಲ್ಲಿ 2-3 ದಿನಗಳ ಕಾಲ ದುಡಿದು ಇನ್ನುಳಿದ ದಿನ ಖಾಲಿ ಇರುವಂಥ ಸ್ಥಿತಿ ಇದೆ.

ರಾಜ್ಯ ಸರ್ಕಾರ ನೇಕಾರರಿಂದ ಸೀರೆ ಖರೀದಿಸಿ ಕೋವಿಡ್ ವಾರಿಯರ್ಸ್‌ ಮಹಿಳೆಯರಿಗೆ ನೀಡುವ ಬಗ್ಗೆ ಯೋಚನೆ ನಡೆಸಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅದು ಇನ್ನೂ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಿಲ್ಲ. ಸರ್ಕಾರ ಸೀರೆ ಖರೀದಿಸಿದರೆ ಎಷ್ಟೋ ಜನರ ಬದುಕು ಉಜ್ವಲವಾಗಲಿದೆ.

ಮೆಟ್ರೋಪಾಲಿಟನ್‌ ನಗರಗಳಲ್ಲಿಯೇ ಬೆಳಗಾವಿಯ ಸೀರೆಗಳಿಗೆ ಬೇಡಿಕೆ ಇದೆ. ಈ ಎಲ್ಲ ನಗರಗಳ ಹೋಲ್‌ಸೇಲ್‌ ಖರೀದಿದಾರರು ಸದ್ಯಕ್ಕೆ ಸೀರೆಗಳು ಬೇಡ ಎಂದಿದ್ದಕ್ಕೆ ಲಕ್ಷಾಂತರ ಸೀರೆಗಳು ಸ್ಟಾಕ್‌ ಆಗಿವೆ. ಸದ್ಯ ಸಣ್ಣ ಪ್ರಮಾಣದಲ್ಲಿ ವ್ಯಾಪಾರ ನಡೆದಿದೆ. ದಸರಾ, ದೀಪಾವಳಿ ನಂತರ ಬೇಡಿಕೆ ಸಿಗಬಹುದು ಎಂಬ ಆಶಾಭಾವನೆ ಇದೆ. -ಪವನ್‌ ತಾಪಡಿಯಾ, ಮಾಲೀಕರು, ರಾಧಾ ಸಾರೀಸ್‌, ಶಹಾಪುರ

ಮದುವೆ, ದೊಡ್ಡ ದೊಡ್ಡ ಹಬ್ಬಗಳು, ಜಾತ್ರೆ-ಸಮಾರಂಭಗಳ ಮೇಲೆಯೇ ನೇಕಾರಿಕೆ ಉದ್ಯೋಗ ಅವಲಂಬಿತವಾಗಿದೆ. ಉದ್ಯೋಗ ನಿಲ್ಲಿಸಿದರೆ ನೇಕಾರರ ಬದುಕಿನ ಮೇಲೆ ಹೊಡೆತ ಬೀಳುತ್ತದೆ. ಹೀಗಾಗಿ ಕಡಿಮೆ ಪ್ರಮಾಣದಲ್ಲಿ ಸೀರೆ ಉತ್ಪಾದನೆ ನಡೆಯುತ್ತಿದ್ದು, ಸಹಜ ಸ್ಥಿತಿಗೆ ಬಂದರೆ ಎಲ್ಲರ ಬದುಕು ಹಸನಾಗಲಿದೆ. ದತ್ತಾ ಬಂಡೀಗಣಿ, ಪಾಲಿಸ್ಟರ್‌ ಸೀರೆ ಉತ್ಪಾದಕರು

ಕಳೆದ ಐದಾರು ತಿಂಗಳಿಂದ ಕೆಲಸ ಇಲ್ಲದೇ ಬದುಕು ನಡೆಸುವುದುಕಷ್ಟಕರವಾಗಿದೆ. ಲಾಕ್‌ಡೌನ್‌ ನಮ್ಮ ಬದುಕನ್ನೇ ಕಸಿದುಕೊಂಡಿದೆ. ಪ್ರತಿ ವಾರ ದುಡಿಮೆಗೆ ಸಿಗುತ್ತಿದ್ದ ಪಗಾರ ಅರ್ಧದಷ್ಟು ಕಡಿಮೆಯಾಗಿದೆ. ಅನೇಕ ನೇಕಾರರು ಗೌಂಡಿ, ನರೇಗಾ ಕೆಲಸಕ್ಕೆ ಹೋಗುವಂತಾಗಿದೆ.ಬಸವಣ್ಣಿ ಚೌಗುಲೆ, ನೇಕಾರ

ಮಹಾರಾಷ್ಟ್ರ, ಕೋಲ್ಕತ್ತಾ ಸೇರಿದಂತೆ ಅನೇಕ ಕಡೆ ಗಳಲ್ಲಿ ಸೀರೆ  ಮಾರಾಟವಾಗುತ್ತವೆ. ಲಾಕ್‌ಡೌನ್‌ದಿಂದಾಗಿ ಉದ್ಯೋಗ ಭಾರೀ ಪ್ರಮಾಣ ದಲ್ಲಿ ಕುಸಿದಿದೆ. ನೇಕಾರರಿಂದ ಖರೀದಿಸಿ ಮಾರಾಟ ಮಾಡುವುದಾದರೂ ಎಲ್ಲಿ ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ. ಒಂದೆರಡು ತಿಂಗಳಲ್ಲಿ ಸೀರೆ ಖರೀದಿಗೆ ವೇಗ ಸಿಗುವ ಸಾಧ್ಯತೆ ಇದೆ. ರಾಘವೇಂದ್ರ ತಿಳಗಂಜಿ, ಸೀರೆ ಖರೀದಿದಾರರು

 

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.