6 ತಿಂಗಳ ಬಳಿಕ ಭಕ್ತರಿಗೆ ತೆರೆಯಲಿದೆಯೇ ಶ್ರೀಕೃಷ್ಣಮಠ?

ಸೆ.21ರ ಬಳಿಕ ದರ್ಶನಕ್ಕೆ ಅವಕಾಶ ಸಾಧ್ಯತೆ; ಸೇವೆ, ಅನ್ನದಾನದ ಬಗ್ಗೆ ಇನ್ನಷ್ಟೇ ನಿರ್ಧಾರ

Team Udayavani, Sep 19, 2020, 6:00 AM IST

6 ತಿಂಗಳ ಬಳಿಕ ಭಕ್ತರಿಗೆ ತೆರೆಯಲಿದೆಯೇ ಶ್ರೀಕೃಷ್ಣಮಠ?

ಸಾಂದರ್ಭಿಕ ಚಿತ್ರ

ಉಡುಪಿ: ಶ್ರೀಕೃಷ್ಣಮಠ ಆರು ತಿಂಗಳ ಬಳಿಕ ಭಕ್ತರಿಗೆ ತೆರೆದುಕೊಳ್ಳುವ ಸಾಧ್ಯತೆ ಇದೆ. ಮಾ. 22ರಿಂದ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು. ಜೂ. 8ರಿಂದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕೇವಲ ದರ್ಶನ ಮಾತ್ರವಾಗಿತ್ತು, ಸೇವೆಗಳು ಇರಲಿಲ್ಲ. ಇದೀಗ ಸೆ. 1ರಿಂದ ಸೇವೆಗಳನ್ನು ಸ್ವೀಕರಿಸಲೂ ಇಲಾಖೆ ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಎಲ್ಲ ದೇವಸ್ಥಾನಗಳಲ್ಲಿ ಸೇವೆಗಳು ಆರಂಭಗೊಂಡಿವೆ.

ಕೋವಿಡ್ ಸೋಂಕು ವಿಸ್ತರಣೆಯಾಗುತ್ತಲೇ ಇದ್ದ ಕಾರಣ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕ ಭಕ್ತರ ಪ್ರವೇಶ ನಿರ್ಬಂಧವನ್ನು ಮುಂದುವರಿಸ ಲಾಗಿತ್ತು. ಶ್ರೀಕೃಷ್ಣ ಜಯಂತಿ, ವಿಟ್ಲಪಿಂಡಿ ಹಬ್ಬಗಳನ್ನೂ ಸಾಂಪ್ರದಾಯಿಕವಾಗಿ ಮಾತ್ರ ನೆರವೇರಿಸಲಾಗಿತ್ತು. ಸೆ. 21ರಿಂದ ಕೇಂದ್ರ ಸರಕಾರ ಹೊಸ ಮಾರ್ಗದರ್ಶಿ ಸೂತ್ರ ಹೊರಡಿಸಲಿದೆ. ಅದರಂತೆ ರಾಜ್ಯವೂ ಪಾಲಿಸಲಿದ್ದು, ಇದು ಜಿಲ್ಲೆಗೂ ಅನ್ವಯವಾಗು ವುದರಿಂದ ಶ್ರೀಕೃಷ್ಣಮಠದಲ್ಲಿ ದೇವರ ದರ್ಶನ ಸೆ. 21ರ ಬಳಿಕ ಆರಂಭವಾಗುವ ಸಾಧ್ಯತೆ ಇದೆ.

ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಜ. 18ರಂದು ಪೂಜಾಧಿಕಾರ ವಹಿಸಿಕೊಂಡ ಬಳಿಕ ದೇವರ ದರ್ಶನ ಮಾಡುವ ಮಾರ್ಗ ಬದಲಾಯಿಸಿದ್ದರು. ಇದೀಗ ಕೊರೊನಾ ಅವಧಿಯಲ್ಲಿ ಸಂಪೂರ್ಣ ಬಂದ್‌ ಮಾಡಿದ್ದರಿಂದ ದರ್ಶನ ಮಾಡುವ
ಮಾರ್ಗೋಪಾಯ ವ್ಯವಸ್ಥಿತಗೊಳಿಸಲಾಗಿದೆ. ಶ್ರೀಕೃಷ್ಣಮಠದ ರಾಜಾಂಗಣ ಬಳಿಯಿಂದ ಭೋಜನ ಶಾಲೆ ಉಪ್ಪರಿಗೆ ಮಾರ್ಗದಿಂದ ತೆರಳಿ ಅಲ್ಲಿಂದ ಶ್ರೀಕೃಷ್ಣಮಠದ ಗರ್ಭಗುಡಿ ಹೊರಾವರಣಕ್ಕೆ ಇಳಿದು ಅಲ್ಲಿಂದಲೇ ದೇವರ ದರ್ಶನ ಮಾಡಿ ಹಿಂದಿರುಗುವ ವ್ಯವಸ್ಥೆ ಮಾಡಲಾಗಿದೆ. ಗರ್ಭಗುಡಿ ಹೊರಾವರಣದಲ್ಲಿ ಗರುಡ ದೇವರ ಗುಡಿ ಸಮೀಪ ಭಕ್ತರು ಇಳಿದರೆ, ನಿರ್ಗಮಿಸುವಾಗ ಗರುಡ ದೇವರ ಗುಡಿ ಎದುರಿಗಿರುವ ಮುಖ್ಯಪ್ರಾಣ ದೇವರ ಗುಡಿ ಸಮೀಪ ಮೆಟ್ಟಿಲು ಹತ್ತಿ ನಿರ್ಗಮಿಸಬೇಕು. ಒಳಬರಲು ಒಂದು ದಾರಿಯಾದರೆ ಹೊರ ಹೋಗಲು ಇನ್ನೊಂದು ದಾರಿ ಇದೆ.

ನಿಯಮಾವಳಿಗೆ ಬದ್ಧವಾಗಿ ತೆರೆಯುವ ಸಾಧ್ಯತೆ ಕೋವಿಡ್ ಸೋಂಕು ಇನ್ನಷ್ಟು ವ್ಯಾಪಿಸುತ್ತಿರುವುದರಿಂದ,  ಉಡುಪಿಯಲ್ಲಿ ಬಹುತೇಕ ಎಲ್ಲ ಆಸ್ಪತ್ರೆಗಳಲ್ಲಿ ಬೆಡ್‌ಗಳು ಭರ್ತಿ ಯಾಗಿರುವುದರಿಂದ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವ ಇರಾದೆ ಪರ್ಯಾಯ ಸ್ವಾಮೀಜಿಯವರಿಗೆ ಇದ್ದರೂ ಸರಕಾರದ ನಿಯಮಾವಳಿಗೆ ಬದ್ಧವಾಗಿ ಭಕ್ತರಿಗೆ ತೆರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಡಗುಮಾಳಿಗೆಯಲ್ಲಿ ನೈಸರ್ಗಿಕ ಬಣ್ಣ
ಕೊರೊನಾ ಅವಧಿಯಲ್ಲಿ ಭೋಜನ ಶಾಲೆ ಮುಖ್ಯಪ್ರಾಣ ದೇವರ ಗುಡಿ ಹೊರಗೆ ಹಳೆಯ ಕಾಲದಂತೆ ಹೆಂಚಿನ ಮಾಡನ್ನು ನಿರ್ಮಿಸಲಾಗಿದೆ. ಭೋಜನ ಶಾಲೆ, ಬಡಗುಮಾಳಿಗೆಯಲ್ಲಿ ನೈಸರ್ಗಿಕ ಬಣ್ಣ ವನ್ನು ಕೊಡಲಾಗಿದೆ. ಮಧ್ವಸರೋವರದಲ್ಲಿ ಮುಳಿಹುಲ್ಲಿನ ಮಾಡು ನಿರ್ಮಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳಿಗೆ ಸೆ. 1ರಿಂದ ಸೇವೆ ಆರಂಭಿಸಲು ಸೂಚನೆ ನೀಡುವಾಗ ಭೋಜನ ಪ್ರಸಾದದ ಕುರಿತು ಮೌನವಾಗಿತ್ತು. ಆದರೆ ಕೆಲವು ದೇವಸ್ಥಾನಗಳು ಭೋಜನ ಪ್ರಸಾದವನ್ನು ಆರಂಭಿಸಿವೆ. ಶ್ರೀಕೃಷ್ಣಮಠದಲ್ಲಿ ಈಗ ಚಾತುರ್ಮಾಸ್ಯದ ಅವಧಿಯಾಗಿರುವುದರಿಂದ ಉತ್ಥಾನ ದ್ವಾದಶಿವರೆಗೆ (ನ. 27) ರಥೋತ್ಸವ ನಡೆಯುವುದಿಲ್ಲ. ಈಗ ಏನಿದ್ದರೂ ಸಾಮಾನ್ಯ ಸೇವೆಗಳು ಮಾತ್ರ. ಸೆ. 21ರಿಂದ ದರ್ಶನಾವಕಾಶ ಕಲ್ಪಿಸುವುದಾದರೆ ಇತರ ಸೇವೆಗಳನ್ನು ಸಲ್ಲಿಸಲು ಅವಕಾಶವಿದೆಯೇ? ಭೋಜನ ಪ್ರಸಾದ ಆರಂಭವಾಗುವುದೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.