ಜನರ ಕಷ್ಟಕ್ಕಿಂತ ವರ್ಗಾವಣೆ ಮುಖ್ಯವೇ?
Team Udayavani, Sep 19, 2020, 6:39 PM IST
ಹಾಸನ: ಜಿಲ್ಲೆಯಲ್ಲಿ ರೈತರ ಸಂಕಷ್ಟ ಕೇಳುವವರಿಲ್ಲ.ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಆದರೆ, ಆಡಳಿತ ಪಕ್ಷ ರಾಜಕಾರಣಿಗಳು, ಅಧಿಕಾರಿಗಳ ವರ್ಗಾವಣೆ ದಂಧೆ ಯಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆತಂಕ ವ್ಯಕ್ತ ಪಡಿಸಿದರು.
ಜಿಲ್ಲೆಯಲ್ಲಿ ಇದುವರೆಗೂ 12 ಸಾವಿರ ಜನರಿಗೆ ಕೋವಿಡ್ ಸೋಂಕು ಹರಡಿದೆ. ಸೋಂಕಿಗೆ 250ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅಧಿಕೃತವಾಗಿ 12 ಸಾವಿರ ಜನ ರಿಗೆ ಸೋಂಕು ದೃಢಪಟ್ಟಿದ್ದರೂ ಮುಂದಿನ ದಿನಗಳಲ್ಲಿ ಜಿಲ್ಲೆಯ 10 ಲಕ್ಷ ಜನರಿಗೆ ಸೋಂಕು ಹರಡುವ ಭೀತಿ ಇದೆ. ಚಿಕಿತ್ಸೆ ಸಿಗುವುದಿಲ್ಲವೆಂದು ಜನರು ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ ಸಂಚಾರಿ ಪರೀಕ್ಷಾ ವ್ಯವಸ್ಥೆ ಮಾಡಿ, ಕೋವಿಡ್ ಪರೀಕ್ಷೆ ನಡೆಸಿ ಸೋಂಕು ಹರಡುವುದನ್ನು ನಿಯಂತ್ರಿಸಬೇಕು ಎಂದರು.
ಜಿಲ್ಲೆಯ ಜನರು ಸಂಕಷ್ಟ ಲ್ಲಿದ್ದರೂ ವರ್ಗಾವಣೆ ದಂಧೆಯಲ್ಲಿ ಆಡಳಿತ ಪಕ್ಷದವರು ತಲ್ಲೀನರಾಗಿದ್ದಾರೆ. ಒಬ್ಬ ಪೊಲೀಸ್ ಇನ್ಸೆಕ್ಟರ್ ವರ್ಗವಣೆಗೆ 25 ಲಕ್ಷ ರೂ., ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ವರ್ಗಾವಣೆಗೆ1ಕೋಟಿ ರೂ. ಲಂಚ ಕೊಡಲಾಗಿದೆ ಎಂಬ ದೂರು ಗಳಿವೆ. ಸಿಎಂ ಯಡಿಯೂರಪ ³ ಅವರು ಮೊದಲು ಜನರ ಸಂಕಷ್ಟಕ್ಕೆ ಸ್ಪಂದಿಸಿ ಗೌರವ ಉಳಿಸಿಕೊಳ್ಳಲಿ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ