ವಿಡಿಯೋ ಕಾನ್ಫರೆನ್ಸ್ ಸಭೆ ರದ್ದುಗೊಳಿಸಿ
Team Udayavani, Sep 19, 2020, 6:56 PM IST
ತುಮಕೂರು: ಉಪವಿಭಾಗ ಮಟ್ಟದ ಪ.ಜಾತಿ, ಪರಿಶಿಷ್ಟವರ್ಗದ ದಲಿತ ಹಿತರಕ್ಷಣಾ ಸಮಿತಿ ಸಭೆಯನ್ನು ವಿಡಿ ಯೋ ಕಾನ್ಫರೆನ್ಸ್ ಮೂಲಕ ಕರೆದಿರುವುದನ್ನು ರದ್ದುಪಡಿಸಿ ಪೊಲೀಸ್ ಚಿಲುಮೆ ಅಥವಾ ಬಾಲ ಭವನದಲ್ಲಿ ಕರೆಯುವಂತೆ ನಿರ್ದೇಶನ ನೀಡಬೇಕು ಎಂದುಆಗ್ರಹಿಸಿ ಜಿಲ್ಲಾ ದಲಿತ ಸಂಘಟನೆಗಳ ಮುಖಂಡರ ಒಕ್ಕೂಟ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲು ನಿರ್ಧರಿಸಿರುವ ಸಭೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು. ತುಮಕೂರು ಉಪವಿಭಾಗ ಮಟ್ಟದ ಎಸ್ಸಿ, ಎಸ್ಟಿಹಿತರಕ್ಷಣಾ ಸಮಿತಿ ಸಭೆಯನ್ನು ಸೆ.21 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ 11 ಗಂಟೆಗೆ ವಿಡಿಯೋಕಾನ್ಫರೆನ್ಸ್ ಸಭಾಂಗಣದಲ್ಲಿ ಸಭೆಯನ್ನು ಕರೆಯಲಾಗಿದೆ. ಆದರೆ ಸಾಕಷ್ಟು ದಲಿತ ಮುಖಂಡರಲ್ಲಿ ಸ್ಕ್ರೀನ್ಟಚ್ಮೊಬೈಲ್ ಇರುವುದಿಲ್ಲ. ಕೀ ಪ್ಯಾಯ್ಡ ಮೊಬೈಲ್ಗಳನ್ನು ಬಳಸುತ್ತಿದ್ದಾರೆ. ಜತೆಗೆ ಸಾಕಷ್ಟು ಮುಖಂಡರಿಗೆ ಮೊಬೈಲ್ನಲ್ಲಿ ಮಾತನಾಡುವುದಕ್ಕೂ ಬರುವುದಿಲ್ಲ. ಎಸ್ಸಿ, ಎಸ್ಟಿ ಜನಾಂಗದ ತುರ್ತು ಸಮಸ್ಯೆಗಳು ಸಾಕಷ್ಟಿವೆ. ಆದ್ದರಿಂದಈಹಿಂದೆ ಯಾವ ರೀತಿ ಸಭೆ ಕರೆಯುತ್ತಿದ್ದರೋ ಅದೇ ರೀತಿ ಸಭೆ ನಡೆಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ರಂಗನಾಥ್, ಕೋವಿಡ್ ಇರುವುದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುವುದಾಗಿ ಉಪವಿಭಾಗಾಧಿಕಾರಿಗಳು ಹೇಳುತ್ತಾರೆ. ಆದರೆ ಮುಖಾಮುಖೀ ಸಭೆ ನಡೆಸಿದರೂ ನಮ್ಮ ಸಮಸ್ಯೆಗಳು ಬಗೆಹರಿಯುವುದಿಲ್ಲ. ಇನ್ನು ವಿಡಿಯೋ ಕಾನ್ಫೆರೆನ್ಸ್ಮೂಲಕ ನಡೆಸುವ ಸಭೆಯಲ್ಲಿ ಎಷ್ಟರ ಮಟ್ಟಿಗೆ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಪ್ರಶ್ನಿಸಿದರು.
ದಸಂಸಜಿಲ್ಲಾಧ್ಯಕ್ಷಪಿ.ಎನ್.ರಾಮಯ್ಯಮಾತನಾಡಿ, ತುಮಕೂರು ವಿಭಾಗ ಮಟ್ಟದ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆಯನ್ನು ಸೆ. 21 ಕರೆದಿದ್ದಾರೆ. ವಿಡಿಯೋಕಾನ್ಫರೆನ್ಸ್ ಮೂಲಕಕರೆದಿರುವ ಸಭೆಯಲ್ಲಿ ರದ್ದುಪಡಿಸಿ ಕೋವಿಡ್-19 ನಿಯಮಾವಳಿ ಪ್ರಕಾರವೇ ಅಂತರ ಕಾಯ್ದುಕೊಂಡು ಸಮುದಾಯ ಭವನ ಅಥವಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಸಭೆ ನಡೆಸಬೇಕು. ಈ ಸಂಬಂಧ ಉಪವಿಭಾಗಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಒಕ್ಕೂಟದ ಮುಖಂಡರಾದ ಪೂಜ ಹನುಮಯ್ಯ, ರಾಜೇಶ್, ಜೆಸಿಬಿ ವೆಂಕಟೇಶ್, ಗಂಗಯ್ಯ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್