ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು


Team Udayavani, Sep 19, 2020, 7:19 PM IST

ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು

ದೇವದುರ್ಗ: ತಾಲೂಕಿನಾದ್ಯಂತ ನೂರಾರು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು, ಸರಕಾರಿ ಕಚೇರಿ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮ ಸೆ.19, 20ರಂದು ನಡೆಯಲಿವೆ ಎಂದು ಶಾಸಕ ಕೆ.ಶಿವನಗೌಡ ನಾಯಕ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಬಿಜೆಪಿ ಸರಕಾರದ ಅವಧಿ ಯಲ್ಲಿ ಈಗಾಗಲೇ ನೂರಾರು ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಮಸರಕಲ್‌ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಉದ್ಘಾಟನೆ, ಡಾ| ಬಿ.ಆರ್‌. ಅಂಬೇಡ್ಕರ್‌ ಭವನ, ಪಶು ಚಿಕಿತ್ಸಾಲಯಕ್ಕೆ ಅಡಿಗಲ್ಲು, ಮಸರಕಲ್‌ ಗ್ರಾಮದಿಂದ ಚಿಂತಲಕುಂಟಿವರೆಗೆ ಬಿಟಿ ರಸ್ತೆ, ಚಿಂತಲಕುಂಟಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆ ಉದ್ಘಾಟನೆ ನಡೆಯಲಿದೆ ಎಂದರು.

ಧರ್ಮನಾಯಕ ತಾಂಡಾದಲ್ಲಿ ಸ.ಕಿ.ಪ್ರಾ.ಶಾಲೆಯ ಎರಡು ಕೋಣೆಗಳ ನಿರ್ಮಾಣಕ್ಕೆಅಡಿಗಲ್ಲು, ರಾಮದುರ್ಗ ಕ್ರಾಸ್‌ ಅಪ್ರೋಚ್‌ ಬಿ.ಟಿ. ರಸ್ತೆ ನಿರ್ಮಾಣಕ್ಕೆ ಅಡಿಗಲ್ಲು, ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ಕೆಬಿಜೆಎನ್‌ಎಲ್‌ ಕಚೇರಿಗಳ ಆಂತರಿಕ ರಸ್ತೆ ನಿರ್ಮಾಣಕ್ಕೆ ಚಾಲನೆ, ಕೊಪ್ಪರ ಗ್ರಾಮದ ಶಾಂತಿನಗರದಲ್ಲಿ ಅಂಗನವಾಡಿ ಕೇಂದ್ರಕ್ಕೆ ಅಡಿಗಲ್ಲು, ದೇವರಗುಡ್ಡ ಗ್ರಾಮದಲ್ಲಿ ಅಪ್ರೋಚ್‌ ಬಿಟಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಕೋಣಚಪ್ಪಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಣೆ ನಿರ್ಮಾಣಕ್ಕೆ ಅಡಿಗಲ್ಲು, ಅಡುಗೆ ಕೋಣೆ ಉದ್ಘಾಟನೆ ನಡೆಯಲಿದೆ. ಬೆಣೆಕಲ್‌ ಗ್ರಾಮದಿಂದ ಗುಂಡಗುರ್ತಿವರೆಗೆ ಬಿಟಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಅಡಿಗಲ್ಲು,ಕುರ್ಕಿಹಳ್ಳಿ ಗ್ರಾಮದಲ್ಲಿ ಕುಡಿವ ನೀರಿನ ಯೋಜನೆಗೆ ಕಾಮಗಾರಿಗೆ ಅಡಿಗಲ್ಲು ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ತಿಂಥಿಣಿ ಬ್ರಿಜ್‌, ವೀರಗೋಟ ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ನಿರ್ಮಾಣಕ್ಕೆ ಅಡಿಗಲ್ಲು, ಕಾಂಪೌಂಡ್‌ ಉದ್ಘಾಟನೆ, ಜಾಲಹಳ್ಳಿ ಗ್ರಾಮದ ವಾರ್ಡ್‌ ನಂ.2.5.6ರಲ್ಲಿ ಶುದ್ಧ ಕುಡಿವ ನೀರಿನ ಘಟಕಗಳ ಉದ್ಘಾಟನೆ. ಜಾಲಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ ಎಂದು ವಿವರಿಸಿದರು.

ಅಮರಾಪುರು ಗ್ರಾಮದ ಕೆಬಿಜೆಎನ್‌ಎಲ್‌ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಉಪವಿಭಾಗ 14ರ ನೂತನ ಕಚೇರಿ ಅಡಿಗಲ್ಲು ಮತ್ತು ಕಚೇರಿ ದುರಸ್ತಿ ಹಾಗೂ ಸಿಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಅಡಿಗಲ್ಲು ನಡೆಯಲಿದೆ. ಅಮರಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ಶಾಲಾ ಕೊಠಡಿಗಳ ಉದ್ಘಾಟನೆ ಜರುಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನೂರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.  ಚುನಾವಣೆ ಸಂದರ್ಭ ಗ್ರಾಮೀಣ ಭಾಗದಲ್ಲಿ ಮತದಾರರಿಗೆ ಕೊಟ್ಟ ಮಾತಿನಂತೆ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳು ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಕಾಶ ಪಾಟೀಲ, ಚಂದ್ರಶೇಖರ ಚಲುವಾದಿ, ಜಹೀರಪಾಷಾ ಸೇರಿ ಇತರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.