ಸೆ. 28ರಿಂದ ಶ್ರೀಕೃಷ್ಣ ಮಠ ಭಕ್ತರಿಗೆ ಮುಕ್ತ; ಮೊದಲ ಹಂತದಲ್ಲಿ ಅಪರಾಹ್ನ 2- 5 ಗಂಟೆ ವರೆಗೆ


Team Udayavani, Sep 19, 2020, 11:39 PM IST

ಸೆ. 28ರಿಂದ ಶ್ರೀಕೃಷ್ಣ ಮಠ ಭಕ್ತರಿಗೆ ಮುಕ್ತ; ಮೊದಲ ಹಂತದಲ್ಲಿ ಅಪರಾಹ್ನ 2- 5 ಗಂಟೆ ವರೆಗೆ

ಸಾಂದರ್ಭಿಕ ಚಿತ್ರ

ಉಡುಪಿ: ಸರಕಾರದ ಮಾರ್ಗಸೂಚಿಯಂತೆ ಮತ್ತು ಭಕ್ತರಿಗೆ ಅನುಕೂಲವಾಗುವಂತೆ ಕೆಲವು ಷರತ್ತುಗಳೊಂದಿಗೆ ಸೆ. 28ರಿಂದ ಶ್ರೀಕೃಷ್ಣ ಮಠದಲ್ಲಿ ದರ್ಶನಾವಕಾಶ ಕಲ್ಪಿಸಲಾಗುವುದು.

ಕೋವಿಡ್ ಸೋಂಕಿನ ಕಾರಣದಿಂದ ಮಾ. 22ರಿಂದ ಶ್ರೀಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಸೆ. 21ರಿಂದ ಕೇಂದ್ರ ಸರಕಾರವೂ ಮಾರ್ಗಸೂಚಿಗಳನ್ನು ಸಡಿಲ ಗೊಳಿಸಲಿರುವುದರಿಂದ ಭಕ್ತರ ಅನುಕೂಲಕ್ಕಾಗಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮಾರ್ಗದರ್ಶನದಂತೆ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನಿರ್ಧರಿಸಿದ್ದಾರೆ ಎಂದು ವ್ಯವಸ್ಥಾಪಕ ಗೋವಿಂದರಾಜ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರವಾಸೋದ್ಯಮ, ಸಾರಿಗೆ ಇತ್ಯಾದಿ ಉಡುಪಿಯ ಆರ್ಥಿಕ ಚಟುವಟಿಕೆ ಚುರುಕುಗೊಳ್ಳಬೇಕಾದರೆ ಶ್ರೀಕೃಷ್ಣ ಮಠಕ್ಕೆ ಭಕ್ತರ ಪ್ರವೇಶ ಆಗಬೇಕಾಗುತ್ತದೆ. ಭಕ್ತರು ಸಾಗಿ ಬರುವ ದಾರಿಯಲ್ಲಿ ಬೇಕಾದ ಮಾರ್ಗದರ್ಶನಗಳನ್ನು ಸೇವಾ ಕೌಂಟರ್‌ನಲ್ಲಿ ನೀಡಲಾಗುವುದು. ಪ್ರವೇಶ ಸಮಯದ ವಿಸ್ತರಣೆಯನ್ನು, ಭೋಜನ ಪ್ರಸಾದವನ್ನು ಮುಂದಿನ ಹಂತದಲ್ಲಿ ಮಾಡಲಾಗುವುದು ಎಂದು ಗೋವಿಂದರಾಜ್‌ ತಿಳಿಸಿದರು.

ಶ್ರೀಕೃಷ್ಣ ಸೇವಾ ಬಳಗದ ವೈ.ಎನ್‌. ರಾಮಚಂದ್ರ ರಾವ್‌, ಯಶಪಾಲ್‌ ಸುವರ್ಣ, ದಿನೇಶ ಪುತ್ರನ್‌, ಹೈಟೆಕ್‌ ಪ್ರದೀಪ್‌ ರಾವ್‌, ಸಂತೋಷ ಕುಮಾರ್‌ ಉದ್ಯಾವರ, ಮಾಧವ ಉಪಾಧ್ಯಾಯ, ಶ್ರೀನಿವಾಸ ಪೆಜತ್ತಾಯ, ಕೊಠಾರಿ ಶ್ರೀರಮಣ ಕಲ್ಕೂರ ಉಪಸ್ಥಿತರಿದ್ದರು.

ನಿಬಂಧನೆಗಳು

 ಅಪರಾಹ್ನ 2ರಿಂದ ಸಂಜೆ 5 ಗಂಟೆವರೆಗೆ ಮಾತ್ರ ಪ್ರವೇಶವಿರುತ್ತದೆ. ಎಲ್ಲ ಭಕ್ತರು ರಾಜಾಂಗಣದ ಬಳಿ ಇರುವ ಉತ್ತರ ದ್ವಾರದ ಮೂಲಕ ಪ್ರವೇಶಿಸಬೇಕು. ಅಲ್ಲಿಂದ ಭೋಜನಶಾಲೆ ಮೇಲ್ಗಡೆಯಿಂದ ಸಾಗಿ ಗರುಡದೇವರ ಬಳಿ ಇಳಿದು ದರ್ಶನ ಮಾಡಿ ಮುಖ್ಯಪ್ರಾಣ ದೇವರ ಗುಡಿ ಬಳಿ ಮೆಟ್ಟಿಲು ಏರಿ ಅಲ್ಲಿಂದ ನಿರ್ಗಮಿಸಬೇಕು. 

 ಸ್ಥಳೀಯ ಭಕ್ತರು ಮುಂದಿನ ದಿನಗಳಲ್ಲಿ ರಥಬೀದಿಯಿಂದ ಮಧ್ವಸರೋವರದ ಮೇಲಿರುವ ದಾರಿಯಿಂದ ಪ್ರವೇಶ/ ದರ್ಶನ ಮಾಡಬಹುದು. ಇಂತಹವರು ಅಗತ್ಯದ ದಾಖಲೆ ಪತ್ರ ನೀಡಿ ಶ್ರೀಕೃಷ್ಣ ಮಠದಿಂದ ಪ್ರವೇಶ ಪತ್ರವನ್ನು ಪಡೆಯಬಹುದು. ಇಲ್ಲವಾದರೆ ಉತ್ತರ ದ್ವಾರದ ಮೂಲಕ ದರ್ಶನ ಪಡೆಯಬಹುದು. 

 ಸೇವಾ ಕೌಂಟರ್‌ನಲ್ಲಿ ಪ್ರಸಾದ ವಿತರಣೆ ಇರುತ್ತದೆ.

 ಯಾರೂ ಮಠದ ಆವರಣದೊಳಗೆ ಮಂತ್ರ, ಪಾರಾಯಣ ಮಾಡಬಾರದು. ಮೌನ ವಾಗಿರಬೇಕು.

 ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸ್ಯಾನಿಟೈಸರ್‌ ಬಳಸಿಕೊಳ್ಳಬೇಕು. ಭದ್ರತಾ ಸಿಬಂದಿಯ ಸೂಚನೆಗಳನ್ನು ಪಾಲಿಸಬೇಕು. 

 ಹಿರಿಯ ನಾಗರಿಕರು, ಚಿಕ್ಕ ಮಕ್ಕಳ ಶರೀರ ಸೂಕ್ಷ್ಮವಾಗಿರುವುದರಿಂದ ಅವರು ಮನೆಯಲ್ಲಿದ್ದು ಪ್ರಾರ್ಥನೆ ಮಾಡುವುದು ಉತ್ತಮ. 

 ಮುಂದಿನ ದಿನಗಳನ್ನು ಗಮನಿಸಿ ಭೋಜನ ಪ್ರಸಾದ- ತೀರ್ಥ ಪ್ರಸಾದ ಆರಂಭಿಸಲಾಗುವುದು. 

 ತುಪ್ಪ, ಎಳ್ಳೆಣ್ಣೆ ದೀಪಗಳನ್ನು ಬೆಳಗುವ ಬದಲು ಕೌಂಟರ್‌ನಲ್ಲಿ ಸಿಗುವ ಶುದ್ಧ ಎಳ್ಳನ್ನು ಪಡೆದು ಒಪ್ಪಿಸಬೇಕು. ಇದರಿಂದ ತಯಾರಿಸಿದ ಶುದ್ಧ ಎಳ್ಳೆಣ್ಣೆಯನ್ನು ಬಳಸಲಾಗುವುದು. 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.