ಯೂರಿಯಾ ಕೃತಕ ಅಭಾವ: ಆಕ್ರೋಶ
Team Udayavani, Sep 20, 2020, 4:40 PM IST
ಸಾಂದರ್ಭಿಕ ಚಿತ್ರ
ಯಳಂದೂರು: ರಸಗೊಬ್ಬರ ಅಂಗಡಿಗಳು ಲಾಭಕ್ಕಾಗಿ ಯೂರಿಯಾ ದಾಸ್ತಾನು ಇದ್ದರೂ ಇಲ್ಲವೆಂಬ ನೆಪವೊಡ್ಡಿ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿವೆ. ಈ ಅಂಗಡಿಗಳ ವಿರುದ್ಧ ಕೃಷಿ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಆಗ್ರಹಿಸಿದರು.
ತಾಪಂ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಸ್ಥಾಯಿ ಸಮಿತಿಗಳ ಸಭೆಯಲ್ಲಿ ಮಾತನಾಡಿದ ಅವರು, ಗೊಬ್ಬರದ ಅಂಗಡಿಗಳು ಯೂರಿಯಾ ದಾಸ್ತಾನು, ಬೆಲೆಗಳ ಪಟ್ಟಿಯನ್ನು ಪ್ರದರ್ಶಿಸಬೇಕು ಎಂಬ ನಿಯಮವನ್ನು ಪಾಲಿಸುತ್ತಿಲ್ಲ. ಎಲ್ಲೆಡೆ ಯೂರಿಯಾಕ್ಕೆ ಕೃತಕ ಅಭಾವ ಸೃಷ್ಟಿಯಾಗಿದೆ ಎಂದು ಕಿಡಿಕಾರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಅಧಿಕಾರಿ ಎಸ್. ಕೃಷ್ಣ, ಈ ಬಗ್ಗೆ ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ. ಅಲ್ಲದೇ ಸಹಕಾರ ಸಂಘಗಳ ಮೂಲಕ ರಸಗೊಬ್ಬರ ಮಾರಾಟ ಮಾಡಲು ಕ್ರಮ ವಹಿಸಲಾಗಿದೆ ಎಂದರು. ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿ ವಡಗೆರೆ ಗ್ರಾಮದ ಬಳಿ 9 ಎಕರೆ ಫಾರಂ ನಿರುಪಯುಕ್ತವಾಗಿದೆ. ಇದನ್ನು ಮಾದರಿ ಫಾರಂ ಹೌಸ್ ಮಾಡಲು ಕ್ರಮ ವಹಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.
ಈಬಗ್ಗೆ ಕ್ರಮ ವಹಿಸುವುದಾಗಿ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭರವಸೆ ನೀಡಿದರು. ಸಹಕಾರ ಇಲಾಖೆ ವತಿಯಿಂದ ಮೀನುಗಾರಿಕೆ ಮತ್ತು ಹೈನುಗಾರಿಕೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಸಹಕಾರ ಇಲಾಖೆ ಫಣಿರಾಜ್ಪಂಡಿತ್ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ, ಶಿಕ್ಷಣ, ಪಂಚಾಯತ್ರಾಜ್ ಮತ್ತಿತರ ಇಲಾಖೆಗಳ ಪ್ರಗತಿ ಬಗ್ಗೆ ಚರ್ಚಿಸಲಾಯಿತು. ತಾಪಂ ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷೆ ಭಾಗ್ಯ, ಸದಸ್ಯರಾದ ಪದ್ಮಾವತಿ, ಪಲ್ಲವಿ, ಮಣಿ, ಪುಟ್ಟು ಇಒ ಬಿ.ಎಸ್. ರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್