ಕಸ್ತೂರಿ ಮಹಲ್‌ ನಿಂದ ರಚಿತಾ ಔಟ್‌!

ಇದಕ್ಕಿದ್ದಂತೆ ಮಹಲ್‌ ತೊರೆಯಲು ಕಾರಣವೇನು...?

Team Udayavani, Sep 21, 2020, 1:22 PM IST

ಕಸ್ತೂರಿ ಮಹಲ್‌ ನಿಂದ ರಚಿತಾ ಔಟ್‌!

ಹಿರಿಯ ನಿರ್ದೇಶಕ ದಿನೇಶ್‌ ಬಾಬು ನಿರ್ದೇಶನದ ಹೊಸಚಿತ್ರದಲ್ಲಿ ರಚಿತಾ ರಾಮ್‌ ನಾಯಕಿಯಾಗಿ ಅಭಿನಯಿಸುತ್ತಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ಸಮಾರಂಭಕೂಡ ಅದ್ಧೂರಿಯಾಗಿ ನಡೆದಿತ್ತು. ಆರಂಭದಲ್ಲಿ ಈ ಚಿತ್ರಕ್ಕೆ “ಕಸ್ತೂರಿ ನಿವಾಸ’ ಅಂಥ ಟೈಟಲ್‌ ಇಟ್ಟಿದ್ದ ಚಿತ್ರತಂಡ, ಆನಂತರ ಚಿತ್ರಕ್ಕೆ “ಕಸ್ತೂರಿ ಮಹಲ್‌’ ಅಂಥ ಹೊಸದಾಗಿ ನಾಮಕರಣ ಮಾಡಿತ್ತು.

ಇದಾದ ಕೆಲವೇ ದಿನಗಳಲ್ಲಿ ಚಿತ್ರತಂಡದ ಕಡೆಯಿಂದ ಬಿಗ್‌ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ, “ಕಸ್ತೂರಿ ಮಹಲ್‌’ ಚಿತ್ರದ ನಾಯಕಿಯ ಸ್ಥಾನದಿಂದ ರಚಿತಾ ರಾಮ್‌ ಔಟ್‌ ಆಗಿದ್ದಾರೆ!

ಹೌದು, ಸ್ವತಃ ಚಿತ್ರದ ನಿರ್ದೇಶಕ ದಿನೇಶ್‌ ಬಾಬು ಅವರೇ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಒಂದೆಡೆ “ಕಸ್ತೂರಿ ಮಹಲ್‌’ ಚಿತ್ರದ ಅಂತಿಮ ಹಂತದ ಪ್ರೀ-ಪ್ರೊಡಕ್ಷನ್‌ಕೆಲಸಗಳು ನಡೆಯುತ್ತಿರುವಂತೆಯೇ, ನಟಿ ರಚಿತಾ ರಾಮ್‌ ಚಿತ್ರದ ನಿರ್ಮಾಪಕರಿಗೆ ಈ ಚಿತ್ರದಲ್ಲಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಚಿತ್ರದಿಂದ ತಮ್ಮನ್ನು ಕೈ ಬಿಡುವಂತೆ ಕೇಳಿಕೊಂಡಿದ್ದಾರಂತೆ.ಕೊನೆಗೆ ರಚಿತಾ ರಾಮ್‌ ಕೋರಿಕೆಯಂತೆ ಚಿತ್ರತಂಡ “ಕಸ್ತೂರಿ ಮಹಲ್‌’ನಿಂದ ಅವರನ್ನು ಕೈ ಬಿಡುವ ನಿರ್ಧಾರಕ್ಕೆ ಬಂದಿದೆ.

ಈ ಬಗ್ಗೆ “ಉದಯವಾಣಿ’ ಜೊತೆಗೆ ಮಾತನಾಡಿರುವ ನಿರ್ದೇಶಕ ದಿನೇಶ್‌ ಬಾಬು, “ಆರಂಭದಲ್ಲಿ ರಚಿತಾ ಈ ಸಿನಿಮಾದ ಕಥೆ ಕೇಳಿ ಈ ಕ್ಯಾರೆಕ್ಟರ್‌ ಮಾಡಲು ಖುಷಿಯಿಂದ ಒಪ್ಪಿಕೊಂಡಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ, ಈ ಸಿನಿಮಾದಲ್ಲಿ ನಟಿಸಲು ಆಗುತ್ತಿಲ್ಲ ಅಂಥ ನಿರ್ಮಾಪಕರಿಗೆ ತಿಳಿಸಿದ್ದಾರೆ.

ತಾವು ನಟಿಸಲು ಆಗದಿರುವುದಕ್ಕೆ ಸ್ಪಷ್ಟ ಕಾರಣವನ್ನೂ ನೀಡುತ್ತಿಲ್ಲ. ಒಂದು ಸಿನಿಮಾವನ್ನು ಒಪ್ಪಿ ಅಡ್ವಾನ್ಸ್‌ ಪಡೆದುಕೊಂಡು,ಕಮಿಟ್‌ ಆದ ನಂತರ ಈಗ ಏಕಾಏಕಿ ಸಿನಿಮಾ ಮಾಡಲಾಗುತ್ತಿಲ್ಲ ಅಂದ್ರೆ ಏನು ಅರ್ಥ? ಇದರಿಂದ ನಮಗೆ ಬೇಸರವಾಗಿದೆ’ ಎಂದಿದ್ದಾರೆ. “ಇದೇ ಅ.5ರಿಂದಈಸಿನಿಮಾದ ಶೂಟಿಂಗ್‌ ಮಾಡಲು ಪ್ಲಾನ್‌ ಮಾಡಿಕೊಂಡಿದ್ದೇವೆ. ಈಗ ಕೊನೆ ಹಂತದಲ್ಲಿ ರಚಿತಾ ರಾಮ್‌ ಈ ಸಿನಿಮಾ ಮಾಡಲಾಗುತ್ತಿಲ್ಲ ಎನ್ನುತ್ತಿದ್ದಾರೆ.

ಇದರಿಂದ ಇಡೀ ಚಿತ್ರತಂಡಕ್ಕೆ ತೊಂದರೆಯಾಗುತ್ತಿದೆ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ನಾನು ಮೊದಲಿನಿಂದಲೂ ಸಿನಿಮಾದ ಸ್ಕ್ರಿಪ್ಟ್ ಮೇಲೆ ನಂಬಿಕೆ, ಗೌರವ ಎರಡನ್ನೂ ಇಟ್ಟುಕೊಂಡವನು. ಒಂದು ಸಿನಿಮಾದ ಜೀವಾಳ ಅದರ ಸ್ಕ್ರಿಪ್ಟ್ ಅಂಥ ನನ್ನ ಬಲವಾದ ನಂಬಿಕೆ. ಹಾಗಾಗಿ ನನ್ನ ಸಿನಿಮಾದಲ್ಲಿ ನಟಿಸುವ ಯಾವುದೋ ಹೀರೋ – ಹೀರೋಯಿನ್‌ಗಾಗಿ ಸ್ಕ್ರಿಪ್ಟ್  ನಲ್ಲಿ ಖಂಡಿತ ಬದಲಾವಣೆ ಮಾಡಿಕೊಳ್ಳಲಾರೆ. ರಚಿತಾ ಅವರು ಇರಲಿ, ಇಲ್ಲದಿರಲಿ ಅದೇ ಸ್ಕ್ರಿಪ್ಟ್ ಇಟ್ಟುಕೊಂಡು ಅಂದುಕೊಂಡ ದಿನದಂದು ಶೂಟಿಂಗ್‌ ಶುರು ಮಾಡುತ್ತೇವೆ’ ಎಂದು ಖಡಕ್‌ ಆಗಿ ಉತ್ತರಿಸಿದ್ದಾರೆ ದಿನೇಶ್‌ ಬಾಬು.

ಮತ್ತೂಂದು ಮೂಲಗಳ ಪ್ರಕಾರ ರಚಿತಾ ರಾಮ್‌ ಚಿತ್ರದ ಸ್ಕ್ರಿಪ್ಟ್ ನಲ್ಲಿ ಕೆಲ ಬದಲಾವಣೆಗಳನ್ನು ಬಯಸಿದ್ದರು ಎನ್ನಲಾಗಿದ್ದು, ಈ ಬದಲಾವಣೆಗೆ ಚಿತ್ರದ ನಿರ್ದೇಶಕ ದಿನೇಶ್‌ ಬಾಬು ಒಪ್ಪದಕಾರಣ ರಚಿತಾ “ಕಸ್ತೂರಿ ಮಹಲ್‌’ನಿಂದ ಹೊರನಡೆಯುವ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ. ಒಟ್ಟಿನಲ್ಲಿ ಈ ಬಗ್ಗೆ ಒಂದಷ್ಟು ಅಂತೆ-ಕಂತೆಗಳು ಗಾಂಧಿನಗರದಲ್ಲಿ ಜೋರಾಗಿ ಹರಿದಾಡುತ್ತಿದ್ದು, ನಿಜಕ್ಕೂ ರಚಿತಾ ಈ ಚಿತ್ರದಿಂದ ಔಟ್‌ ಆಗಲುಕಾರಣವೇನು ಅನ್ನೋದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಬಹುದು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.