ನಾನು ಶಾಸನ ಸಭೆಗೆ ಬರದಂತೆ ಬಿಎಸ್ ವೈ ಮಾಡುತ್ತಿದ್ದಾರೆ: ವಾಟಾಳ್ ನಾಗರಾಜ್
Team Udayavani, Sep 21, 2020, 4:29 PM IST
ಬೆಳಗಾವಿ: ಬಿಎಸ್ ಯಡಿಯೂರಪ್ಪ ಸರ್ವಾಧಿಕಾರಿ ಮುಖ್ಯಮಂತ್ರಿ. ನಾನು ಸಾಕಷ್ಟು ಸಿಎಂ ಅವರನ್ನ ನೋಡಿದ್ದೇನೆ. ಆದರೆ ಯಡಿಯೂರಪ್ಪ ಅವರು ಪಕ್ಷಾಂತರದ ಪ್ರಭು, ಭ್ರಷ್ಟಾಚಾರ, ಲೂಟಿ ಮಾಡುತ್ತಿದ್ದಾರೆ. ದ್ವೇಷ ಅಸೂಯೇ ಯಡಿಯೂರಪ್ಪ ಅವರಲ್ಲಿದೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯದ ಯಾವ ಉಪಮುಖ್ಯಮಂತ್ರಿ, ಸಚಿವರು, ಶಾಸಕರಿಗೂ ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ನಾನು ಶಾಸನ ಸಭೆಗೆ ಬರದಂತೆ ಬಿಎಸ್ ವೈ ಮಾಡುತ್ತಿದ್ದಾರೆ. ನಾನು ಶಾಸನಸಭೆಗೆ ಬರದಂತೆ ಹಣ ಇದ್ದವರನ್ನು ಚುನಾವಣೆಗೆ ನಿಲ್ಲಿಸುತ್ತಿದ್ದಾರೆ ಎಂದರು.
ಇದನ್ನೂ ಓದಿ: ಆರು ದಿನಗಳಿಗೆ ವಿಧಾನಮಂಡಲ ಅಧಿವೇಶನ ಮುಕ್ತಾಯ ಮಾಡಲು ನಿರ್ಧಾರ
ರಾಜ್ಯ ಸರ್ಕಾರ ತಕ್ಷಣವೇ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಬೇಕು. 15 ದಿನಗಳ ಕಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿದ ವಾಟಾಳ್, ಉತ್ತರ ಕರ್ನಾಟಕ ಶಾಸಕರು, ಬೆಳಗಾವಿ ಜಿಲ್ಲೆ ಶಾಸಕರು ಏನು ಮಾಡುತ್ತಿದ್ದಾರೆ. ಅಧಿವೇಶನ ನಡೆಸುವ ಮೂಲಕ ಶಿವಸೇನೆ, ಎಂಇಎಸಗೆ ತಕ್ಕ ಪಾಠ ಕಲಿಸಬೇಕು. ಪ್ರವಾಹದಿಂದ ತತ್ತರಿಸಿದ ಜನರಿಗೆ ಸ್ಪಂದಿಸಬೇಕು. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲವಾದರೆ ಬಿಜೆಪಿ ಸರ್ಕಾರವೇ ರಾಜೀನಾಮೆ ಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು