ರೋಗ ನಿರೋಧಕ-ಕರಿಬೇವು


Team Udayavani, Sep 22, 2020, 8:40 PM IST

ರೋಗ ನಿರೋಧಕ-ಕರಿಬೇವು

ಅಡುಗೆಯ ರುಚಿ ಮತ್ತು ಸುವಾಸನೆ ಹೆಚ್ಚಿಸಲು ಬಳಕೆಯಾಗುವ ವಸ್ತುಗಳ ಪೈಕಿ ಕರಿಬೇವಿಗೆ ಪ್ರಮುಖ ಸ್ಥಾನವಿದೆ. ಸಾರು ಹೆಚ್ಚು ರುಚಿಯಾಗಿ ಇರಬೇಕೆಂದರೆ, ಅದಕ್ಕೆ ಕರಿಬೇವಿನ ಒಗ್ಗರಣೆ ಇರಲೇಬೇಕು. ಎಷ್ಟೋ ಜನಊಟಕ್ಕೆಕುಳಿತಾಗ- “ಒಗ್ಗರಣೆಗೆ ಕರಿಬೇವಿನ ಸೊಪ್ಪು ಹಾಕೇ ಇಲ್ಲ, ಹಾಗಾಗಿ ಸಾರು ರುಚಿಯಾಗಿಲ್ಲ’ ಅನ್ನುವುದುಂಟು. ಕರಿಬೇವಿನ ಒಗ್ಗರಣೆಯಿಂದಾಗಿ ಚಟ್ನಿಯ ರುಚಿ ಹೆಚ್ಚಿದೆ ಅನ್ನುವ ಜನರೂ ಉಂಟು. ಕರಿಬೇವಿನ ಮಹತ್ವ ತಿಳಿಯಲು ಇಷ್ಟೇ ಪೀಠಿಕೆ ಸಾಕು.

ಅಡುಗೆಯ ರುಚಿಯನ್ನು ಹೆಚ್ಚಿಸುವುದಕ್ಕೆ ಮಾತ್ರವಲ್ಲ; ರೋಗನಿರೋಧಕವಾಗಿಯೂ ಕರಿಬೇವಿನ ಸೊಪ್ಪು ಬಳಕೆಯಾಗುತ್ತದೆ. ಆಯುರ್ವೇದ ವೈದ್ಯಪದ್ಧತಿಯಲ್ಲಿಕರಿಬೇವು ಸೊಪ್ಪಿನ ಬಳಕೆಗೆ ಪ್ರಾಶಸ್ತ್ಯ ನೀಡಲಾಗಿದೆ.ಕರಿ ಬೇವಿನಲ್ಲಿ ವಿಟಮಿನ್‌ “ಸಿ’ ಮತ್ತು ಬೀಟಾ- ಕ್ಯಾರೋಟಿನ್‌ ಅಂಶಗಳಿರುವ ಕಾರಣ, ಹಲವಾರುಕಾಯಿಲೆಗಳಿಗೆ ಇದನ್ನು ಮನೆಮದ್ದಾಗಿ ಬಳಸಲಾಗುತ್ತದೆ. ಆಹಾರದಲ್ಲಿಕರಿಬೇವನ್ನು ಹೆಚ್ಚಾಗಿ ಬಳಸುವುದರಿಂದ ಸೋಂಕುಗಳು, ಉರಿಯೂತದ ಲಕ್ಷಣಗಳು ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಾಧ್ಯವಿದೆ.

ಕರಿಬೇವಿನಲ್ಲಿ ನಾರಿನ ಅಂಶ ಹೇರಳವಾಗಿದ್ದು, ಆ ಕಾರಣದಿಂದ ಮನುಷ್ಯನ ದೇಹದಲ್ಲಿ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಇನ್ಸುಲಿನ್‌ ಚಟುವಟಿಕೆಯನ್ನು ಉತ್ತೇಜಿಸುತ್ತದೆ. ಯಾವಾಗ ಮನುಷ್ಯನ ದೇಹ ಇನ್ಸುಲಿನ್‌ ಅಂಶವನ್ನು ಸರಿಯಾದ ಪ್ರಮಾಣದಲ್ಲಿ ಉಪಯೋಗಿಸಲು ಮುಂದಾದಾಗ, ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಕಂಟ್ರೋಲ್‌ ಗೆ ಬರುತ್ತದೆ. ದಿನವೂ ಬೆಳಗಿನ ಹೊತ್ತು ಖಾಲಿ ಹೊಟ್ಟೆಯಲ್ಲಿ 8-10 ತಾಜಾಕರಿಬೇವಿನ ಎಲೆಗಳನ್ನು ಜಿಗಿದು ತಿನ್ನುವುದು ಅಥವಾ ಕರಿಬೇವಿನ ಎಲೆಗಳ ಜ್ಯೂಸ್‌

ತಯಾರಿಸಿಕೊಂಡುಕುಡಿಯುವ ಅಭ್ಯಾಸ ಒಳ್ಳೆಯದು. ಇದರಜೊತೆಗೆ ಪಲ್ಯಗಳು, ರೈಸ್‌ ಬಾತ್‌ ಗಳು, ಸಾರು, ಸಾಗು ಮತ್ತು ಸಲಾಡ್‌ ಗಳು, ಹೀಗೆ ದಿನನಿತ್ಯದ ಅಡುಗೆಗಳಲ್ಲಿ ಕರಿಬೇವಿನ ಸೊಪ್ಪನ್ನು ತಪ್ಪದೆ ಬಳಸಿದರೆ, ಅಡುಗೆಯ ರುಚಿಯೂ ಹೆಚ್ಚುತ್ತದೆ. ಆರೋಗ್ಯವೂ ಸುಧಾರಿಸುತ್ತದೆ.­

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.