ನಿವೃತ್ತರನ್ನು ಸರಕಾರಿ ವಾಹನದಲ್ಲೇ ಮನೆಗೆ ಬಿಟ್ಟು ಶುಭ ವಿದಾಯ


Team Udayavani, Sep 23, 2020, 6:18 AM IST

ನಿವೃತ್ತರನ್ನು ಸರಕಾರಿ ವಾಹನದಲ್ಲೇ ಮನೆಗೆ ಬಿಟ್ಟು ಶುಭ ವಿದಾಯ

ನಿವೃತ್ತ ಶಿಕ್ಷಕರನ್ನು ಶಿಕ್ಷಣ ಇಲಾಖೆ ಜೀಪಿನಲ್ಲಿ ಬಿಇಒ ಶಶಿಧರ್‌ ಮನೆಗೆ ಕರೆದೊಯ್ದರು.

ಕಾರ್ಕಳ: ವೃತ್ತಿಗೆ ವಿದಾಯ ಹೇಳುವ ಹೊತ್ತು ಪ್ರತಿಯೊಬ್ಬರ ಬದುಕಿನಲ್ಲೂ ಮಹತ್ವದ್ದು. ಇದನ್ನು ಅತ್ಯಂತ ಸ್ಮರಣೀಯವನ್ನಾಗಿಸುವ ವಿನೂತನ ಪ್ರಯತ್ನವೊಂದು ಕಾರ್ಕಳ ಶಿಕ್ಷಣ ಇಲಾಖೆ ಯಲ್ಲಿ ಆರಂಭಗೊಂಡಿದೆ. ದೀರ್ಘಾವಧಿ ಸೇವೆ ಸಲ್ಲಿಸಿದ ಶಿಕ್ಷಕರು ಮತ್ತು ಬೋಧಕೇತರ ನೌಕರರನ್ನು ನಿವೃತ್ತ ರಾಗುವ ತಿಂಗಳಾಂತ್ಯಕ್ಕೆ ಇಲಾಖೆ ಕಚೇರಿಗೆ ಕರೆಯಿಸಿ, ಗೌರವಿಸಿ ಅವರನ್ನು ಇಲಾಖೆ ವಾಹನದಲ್ಲಿ ಅಧಿಕಾರಿಗಳೇ ಅವರ ಮನೆಗೆ ಬಿಟ್ಟು ಬರುವ “ಗುರುಭ್ಯೋ ನಮ:’ ಕಾರ್ಯ ಕ್ರಮಕ್ಕೆ ಸೆಪ್ಟಂಬರ್‌ನಿಂದ ಚಾಲನೆ ಸಿಕ್ಕಿದೆ.

ಸ್ವರ್ಣ ಕಾರ್ಕಳ ಅಭಿಯಾನದ ಭಾಗ
ಕಾರ್ಕಳ ನೂರನೇ ವರ್ಷದ ಸಂಭ್ರಮ ದಲ್ಲಿದೆ. ಸ್ವರ್ಣ ಕಾರ್ಕಳದಡಿ ಹಲವು ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ. ಶಿಕ್ಷಣ ಇಲಾಖೆಯೂ ಅಮೂಲ್ಯ ಸೇವೆ ಸಲ್ಲಿಸಿದವರನ್ನು ವಿಶಿಷ್ಟವಾಗಿ ಸ್ಮರಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಶಿಕ್ಷಕ ದಿನದಂದು ಈ ಕಾರ್ಯಕ್ರಮದ ಬಗ್ಗೆ ಶಾಸಕರು ಘೋಷಿಸಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುತುವರ್ಜಿ ವಹಿಸಿದ್ದಾರೆ. ಸೆಪ್ಟಂಬರ್‌ನಲ್ಲಿ ಮೂವರು ನಿವೃತ್ತರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಿರಂತರ ನಡೆಯಲಿದೆ.

ಸ್ಮರಣೀಯ ಕಾರ್ಯಕ್ರಮ
ಮಾಸಾಂತ್ಯದ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದವರನ್ನು ಪ್ರಮಾಣ ಪತ್ರದೊಂದಿಗೆ ಗೌರವಿಸಲಾಗುತ್ತದೆ. ಶಾಸಕರೂ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಬಳಿಕ ಮನೆಗೆ ಕರೆದೊಯ್ದು ಬಿಡಲಾಗುತ್ತದೆ. ಹೆಚ್ಚು ಮಂದಿ ನಿವೃತ್ತರಾಗುವವರಿದ್ದರೆ ಅಂತಹ ಸಂದರ್ಭ ಇಲಾಖೆಯ ಅನುಷ್ಠಾನ ಅಧಿಕಾರಿ ಅಥವಾ ಇತರ ಅಧಿಕಾರಿಗಳು ಮನೆಗಳಿಗೆ ಬಿಟ್ಟು ಬರುವ ಕಾರ್ಯವನ್ನು ನಡೆಸುತ್ತಾರೆ. ಇದು ಸೇವೆ ಸಲ್ಲಿಸುತ್ತಿರುವವರಿಗೆ ಮತ್ತು ಸಲ್ಲಿಸಿದವರಿಗೆ ಖುಷಿ ತರುವ ವಿಚಾರ ಎನ್ನುತ್ತಾರೆ ನಿವೃತ್ತ ಶಿಕ್ಷಕರೊಬ್ಬರು.

ಕಾನೂನು ಇಲಾಖೆಯಲ್ಲಿ…
ದೇಶದ ಪ್ರತಿಷ್ಠಿತ ಕಾನೂನು ಇಲಾಖೆಯಲ್ಲೂ ನಿವೃತ್ತರನ್ನು ಮನೆಯವರೆಗೆ ಬಿಟ್ಟು ಗೌರವಯುತವಾಗಿ ಬೀಳ್ಕೊಡುವ ಸಂಪ್ರದಾಯವಿದೆ. ಶಿಕ್ಷಣ ಇಲಾಖೆಯಲ್ಲಿ ಇದೇ ಮೊದಲು.

ಸೀಟು ಬಿಟ್ಟು ಕೊಟ್ಟ ಬಿಇಒ!
ಆ. 31ರಂದು ನಿವೃತ್ತಿ ಹೊಂದಿದ ಶಿಕ್ಷಕ ಸುಬ್ರಹ್ಮಣ್ಯ ಆಚಾರ್ಯ ಅವರನ್ನು ಗೌರವಿಸಿ, ಇಲಾಖೆ ಜೀಪಿನಲ್ಲಿ ಮನೆಗೆ ಕರೆದೊಯ್ದ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಾಹನದ ತನ್ನ ಮುಂದಿನ ಆಸನದ ಸೀಟಿನ ಬಾಗಿಲು ತೆರೆದು, ನಿವೃತ್ತ ಶಿಕ್ಷಕರನ್ನು ತಾನು ಕುಳಿತುಕೊಳ್ಳುವ ಆಸನದಲ್ಲಿ ಕುಳ್ಳಿರಿಸಿ ಅವರನ್ನು ಮನೆಗೆ ಕರೆದೊಯ್ದರು.

ಸೇವೆ ಸ್ಮರಿಸುವುದು ಉದ್ದೇಶ
ಶಿಕ್ಷಣ ಇಲಾಖೆಯಲ್ಲಿ ಆಯಾ ತಿಂಗಳಲ್ಲಿ ನಿವೃತ್ತರಾದವರನ್ನು ಈ ರೀತಿ ವಿನೂತನವಾಗಿ ಸರಳ ರೀತಿಯಲ್ಲಿ ಗೌರವಿಸಲಾಗುತ್ತದೆ. ಸುದೀರ್ಘ‌ ಅವಧಿಯಲ್ಲಿ ಸೇವೆ ಸಲ್ಲಿಸುವವರಿಗೆ ಗೌರವ ಸಲ್ಲಿಸುವುದು ಮತ್ತು ಅವರ ಸೇವೆಯನ್ನು ಸ್ಮರಿಸುವ ವಿಧಾನವಾಗಿದೆ.ಶಾಸಕರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಅನುಷ್ಠಾನವಾಗುತ್ತಿದೆ.
– ಶಶಿಧರ್‌ ಜಿ.ಎಸ್‌., ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಕಳ

ಸಾರ್ಥಕ ಸೇವೆ
ಉದ್ಯೋಗಿಗಳನ್ನು ಗೌರವಿಸಿ ಇಲಾಖೆ ವಾಹನದಲ್ಲೇ ಬಿಟ್ಟು ಬರುವ ಈ ಕೆಲಸದಿಂದ ಮನಸ್ಸು ತುಂಬಿ ಬಂದಿದೆ. ಸಾರ್ಥಕ ಸೇವೆ ಎನಿಸಿದೆ. ಇದಕ್ಕಿಂತ ದೊಡ್ಡ ಗೌರವ ಬೇರೆ ಇಲ್ಲ.
-ಸುಬ್ರಹ್ಮಣ್ಯ ಆಚಾರ್ಯ, ನಿವೃತ್ತ ಶಿಕ್ಷಕ

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.