ಅಡ್ಡಾಡಿಡ್ಡಿ ಪಾರ್ಕಿಂಗ್ನಿಂದ ಇಲಾಖಾ ವಾಹನ ಬರುವುದಕ್ಕೂ ತೊಂದರೆ
ಬಿ.ಸಿ.ರೋಡ್ ಮಿನಿ ವಿಧಾನಸೌಧ ಆವರಣ
Team Udayavani, Sep 24, 2020, 4:00 AM IST
ಬಿ.ಸಿ.ರೋಡ್ ಮಿನಿ ವಿಧಾನಸೌಧದಲ್ಲಿ ಆವರಣದಲ್ಲಿ ಪಾರ್ಕಿಂಗ್ ಮಾಡಲಾದ ವಾಹನಗಳು.
ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಗೆ ಬರುವವರ ಜತೆಗೆ ಬಿ.ಸಿ. ರೋಡ್ನ ಇತರ ಕೆಲಸಕ್ಕೆ ಬರುವವರು ಕೂಡ ಬಿ.ಸಿ. ರೋಡ್ ಮಿನಿ ವಿಧಾನಸೌಧದ ಆವರಣದಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿರುವುದರಿಂದ ಕೆಲವು ಬಾರಿ ತಹಶೀಲ್ದಾರ್ ಅವರ ಇಲಾಖಾ ವಾಹನ ಬರುವುದಕ್ಕೂ ತೊಂದರೆ ಉಂಟಾಗುವ ಸ್ಥಿತಿ ಇದೆ.
ಮಿನಿ ವಿಧಾನಸೌಧದ ಆವರಣ ಪಾರ್ಕಿಂಗ್ಗೆ ಸುರಕ್ಷಿತ ಸ್ಥಳವೆಂದು ಸಾಕಷ್ಟು ಮಂದಿ ಅಲ್ಲೇ ವಾಹನಗಳನ್ನು ನಿಲ್ಲಿಸಿ ತಮ್ಮ ಎಲ್ಲ ಕೆಲಸಗಳು ಮುಗಿದ ಬಳಿಕ ಅಲ್ಲಿಂದ ವಾಹನ ತೆಗೆದುಕೊಂಡು ಹೋಗುತ್ತಾರೆ. ತಾಲೂಕು ಕಚೇರಿಗೆ ಆಗಮಿಸಿದವರು ಮಾತ್ರ ವಾಹನ ತಂದರೆ ಇಂತಹ ತೊಂದರೆ ಎದುರಾಗುವುದಿಲ್ಲ.
ಸೆ. 22ರಂದು ಇದೇ ರೀತಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ಪರಿಣಾಮ ತಹಶೀಲ್ದಾರ್ ಅವರ ಬೊಲೆರೋ ವಾಹನ ಆವರಣದೊಳಕ್ಕೆ ಬರಲು ತೊಂದರೆ ಉಂಟಾಗಿತ್ತು. ಇದರಿಂದ ಆಕ್ರೋಶಿತರಾದ ತಹಶೀಲ್ದಾರ್ ರಶ್ಮಿ ಎಸ್.ಆರ್. ವಾಹನಗಳನ್ನು ತೆರವುಗೊಳಿಸಲು ಪೊಲೀಸರಿಗೆ ತಿಳಿಸಿದರು. ಬಿ.ಸಿ. ರೋಡ್ನಲ್ಲಿ ವಾಹನಗಳ ಪಾರ್ಕಿಂಗ್ ಸವಾಲಾಗುತ್ತಿದ್ದು, ಹೀಗಾಗಿ ಎಲ್ಲಿ ಅವಕಾಶ ಉಂಟೋ ಅಲ್ಲಿ ವಾಹನಗಳನ್ನು ನಿಲ್ಲಿಸಿ ತೆರಳುತ್ತಿದ್ದಾರೆ. ಬಹುತೇಕ ಕಡೆ ರಸ್ತೆಯ ಎರಡೂ ಕಡೆ ವಾಹನಗಳನ್ನು ನಿಲ್ಲಿಸಿದ ಪರಿಣಾಮ ಸಂಚಾರಕ್ಕೂ ತೊಂದರೆಯಾಗುತ್ತಿದೆ.
ಪುತ್ತೂರು: ದಂಡದ ಎಚ್ಚರಿಕೆ
ಪುತ್ತೂರು: ನಗರದಲ್ಲಿ ನೋ ಪಾರ್ಕಿಂಗ್ನಲ್ಲಿ ವಾಹನಗಳ ನಿಲುಗಡೆಯಿಂದ ಸಾರ್ವಜನಿಕರಿಗೆ ತೊಂದರೆ, ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದ್ದು, ಹೀಗಾಗಿ ಪುತ್ತೂರು ಸಂಚಾರ ಪೊಲೀಸ್ ಠಾಣೆ ವತಿಯಿಂದ ಪುತ್ತೂರು ಪೇಟೆಯ ಮುಖ್ಯರಸ್ತೆಯ ನೋ ಪಾರ್ಕಿಂಗ್ನಲ್ಲಿ ವಾಹನ ನಿಲುಗಡೆ ಮಾಡಿದ್ದಲ್ಲಿ ದಂಡ ವಿಧಿಸಲು ಆರಂಭಿಸಿದೆ. ಬೇಕಾಬಿಟ್ಟಿ ವಾಹನ ನಿಲುಗಡೆಯಿಂದ ಸಂಚಾರ ದಟ್ಟಣೆ ಹೆಚ್ಚಲಿದ್ದು, ತುರ್ತು ಸೇವಾ ವಾಹನಗಳ ಓಡಾಟಕ್ಕೂ ತೊಂದರೆ ಉಂಟಾಗುತ್ತಿದೆ. ಹೀಗಾಗಿ ದಂಡ ವಿಧಿಸಲಾಗುತ್ತಿದ್ದು, ದಿನವೊಂದಕ್ಕೆ ಸುಮಾರು 15 ಸಾವಿರ ರೂ.ಗೂ ಹೆಚ್ಚು ದಂಡ ವಸೂಲಾತಿ ಆಗುತ್ತಿದೆ. ದಂಡ ಪ್ರಕ್ರಿಯೆಗೆ ಒಳಾಗಾದ ವಾಹನಗಳು ಪದೇ-ಪದೇ ಕಾನೂನು ಉಲ್ಲಂಘಿಸುವುದು ಕಂಡು ಬಂದಲ್ಲಿ ವಾಹನ ಜಪ್ತಿ ಮಾಡಲಾಗುವುದು ಸಂಚಾರ ಪೊಲೀಸ್ ಠಾಣೆ ಎಸ್.ಐ. ರಾಮ ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ