ವರುಣಾರ್ಭಟ; ಬೆಳೆಗಳಿಗೆ ತೇವಾಂಶ ಭೀತಿ

ಬೆಳೆ ಉಳಿಸಿಕೊಳ್ಳಲು ರೈತರ ಹರಸಾಹಸ

Team Udayavani, Sep 24, 2020, 6:48 PM IST

ವರುಣಾರ್ಭಟ; ಬೆಳೆಗಳಿಗೆ ತೇವಾಂಶ ಭೀತಿ

ದೇವದುರ್ಗ: ಕಳೆದ ವಾರದಿಂದ ನಿರಂತರ ಸುರಿದ ಮಳೆಯಿಂದ ತಾಲೂಕಿನಾದ್ಯಂತ ಬೆಳೆಗಳಿಗೆ ತೇವಾಂಶ ಹೆಚ್ಚಾಗಿದ್ದು ಬೆಳೆಗಳೆಲ್ಲ ಹಳದಿ ವರ್ಣಕ್ಕೆ ತಿರುಗಿವೆ.

ಹೀಗಾಗಿ ರೈತರಿಗೆ ಬೆಳೆನಷ್ಟ ಆತಂಕ ಶುರುವಾಗಿದೆ. ಹತ್ತಿ, ಮೆಣಸಿನಕಾಯಿ, ತೊಗರಿ ಹೆಚ್ಚು ತೇವಾಂಶವಾಗಿ ಕೊಳೆಯುತ್ತಿರುವ ಹಿನ್ನೆಲೆ ಬೆಳೆಗಳ ರಕ್ಷಣೆಗೆ ರೈತರು ಹರ ಸಾಹಸ ಪಡುತ್ತಿದ್ದಾರೆ. ಹತ್ತಿ ಸದ್ಯ ಹೂವು ಹಿಡಿಯುವ ಹಂತದಲ್ಲಿರುವಾಗಲೇ ಕಾಯಿಗಳು ಉದುರುತ್ತಿವೆ. ಗಿಡಗಳು ಕಂದು ಬಣ್ಣಕ್ಕೆ ತಿರುಗುತ್ತಿದ್ದು, ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿರುವ ಬಹುತೇಕ ಬೆಳೆಗಳೆಲ್ಲ ಹಾಳಾಗುವ ಭೀತಿ ರೈತರನ್ನು ಮತ್ತಷ್ಟು ಚಿಂತೆಗೆ ದೂಡಿದೆ.

ನಿರಂತರ ಸುರಿದ ಮಳೆಯಿಂದ ಹೊಲದಲ್ಲಿ ಎಲ್ಲೆಂದರಲ್ಲಿ ಬೆಳೆಗಳ ಸಾಲುಗಳ ನಡುವೆ ನೀರು ನಿಲ್ಲುತ್ತಿದೆ. ಎರಡು ತಿಂಗಳ ಕಾಲ ಬೆಳೆ ಉತ್ತಮವಾಗಿ ಕಾಪಾಡಿಕೊಂಡು ಸಾವಿರಾರೂ ರೂ. ಖರ್ಚು ಮಾಡಿದ್ದರೂ ರೈತರಿಗೆ ಈಗ ತೇವಾಂಶದಿಂದ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ತಾಲೂಕಿನಲ್ಲಿ ಶೇ.80 ನೀರಾವರಿ ಸೌಲಭ್ಯವಿದೆ. ನೀರಾವರಿ ಇಲ್ಲದ ಒಣಪ್ರದೇಶದಲ್ಲಿ ನೂರಾರು ರೈತರು ಮಳೆ ನಂಬಿ ಕೃಷಿ ಚಟುವಟಿಕೆ ಮಾಡಿದ್ದಾರೆ. ಪ್ರತಿ ವರ್ಷ ರೈತರು ನಷ್ಟದತ್ತಲೇ ಸಾಗಿದ್ದು, ಈ ವರ್ಷವೂ ಕೂಡ ಮತ್ತೆ ಆತಂಕ ಶುರುವಾಗಿದೆ.

ಬಿತ್ತನೆ ಎಷ್ಟು?: ಪಟ್ಟಣ ಸೇರಿ ತಾಲೂಕಿನಾದ್ಯಂತ ಹತ್ತಿ, ಮೆಣಸಿನಕಾಯಿ, ತೊಗರಿ ಸೇರಿ ಇತರೆ ಬೆಳೆ ಬೆಳೆದಿದ್ದಾರೆ. ನೀರಾವರಿ 1448 ಹಾಗೂ ಖಷ್ಕಿ 20.296 ಹೆಕ್ಟೇರ್‌ನಲ್ಲಿ ತೊಗರಿ ಬಿತ್ತನೆ ಮಾಡಲಾಗಿದೆ. 182 ಹೆಕ್ಟೇರ್‌ನಲ್ಲಿ ಸೂರ್ಯಕಾಂತಿ, ಹತ್ತಿ (ನೀರಾವರಿ) 34.715, ಖಷ್ಕಿಯಲ್ಲಿ 15.579 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಅಲ್ಲದೇ ಸುಮಾರು 30 ಸಾವಿರ ಹೆಕ್ಟೇರ್‌ನಲ್ಲಿ ಮೆಣಸಿನಕಾಯಿ ನಾಟಿ ಮಾಡಲಾಗಿದೆ. ಜಾಲಹಳ್ಳಿ, ಅರಕೇರಾ, ಗಬ್ಬೂರು, ಗಲಗ ಸೇರಿ ಇತರೆ ಹೋಬಳಿಯಲ್ಲಿ ಬಿತ್ತನೆ ಮಾಡಿದ ಬೆಳೆಗಳು ತೇವಾಂಶ ಹೆಚ್ಚಾಗಿ ಬೆಳೆ ರಕ್ಷಣೆಗೆ ರೈತರು ದುಪ್ಪಟ್ಟು ವೆಚ್ಚದಲ್ಲಿ ಔಷಧ, ಗೊಬ್ಬರ ಹಾಕುವ ಸ್ಥಿತಿ ಬಂದೊದಗಿದೆ.

ಜಾಗೃತಿ ಕೊರತೆ: ರೈತರಿಗೆ ಬೆಳೆಗಳ ಸಂರಕ್ಷಣೆ ಕುರಿತು ಮಾಹಿತಿ ಲಭ್ಯವಿಲ್ಲದೇ ಹೆಚ್ಚಿನ ಪ್ರಮಾಣದಲ್ಲಿ ಔಷಧ ಹಾಕುವ ಹಿನ್ನೆಲೆ ಪ್ರತಿವರ್ಷ ಬೆಳೆ ನಷ್ಟ ಅನುಭವಿಸಬೇಕಾಗಿದೆ. ಮುಂಗಾರು-ಹಿಂಗಾರಿನಲ್ಲಿ ಕೃಷಿ ಚಟುವಟಿಕೆ ಹಾಗೂ ಪದ್ಧತಿಯಲ್ಲಿ ಜಾಗೃತಿ ಮೂಡಿಸಬೇಕಾದ ಅಧಿ ಕಾರಿಗಳು ಹಿಂದೇಟು ಹಾಕುವುದರಿಂದ ಅಂಗಡಿ ಮಾಲೀಕರ ಮಾತಿನಂತೆ ರೈತರು ಬೆಳೆ ಬೆಳೆಯುತ್ತಿದ್ದಾರೆ ಎನ್ನುವ ಮಾತುಗಳೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಸಾಲದ ರೂಪದಲ್ಲಿ ಅಂಗಡಿ ಮಾಲೀಕರು ನೀಡುವ ಗೊಬ್ಬರ, ಕ್ರಿಮಿನಾಶಕಗಳಿಗೆ ರೈತರಿಗೆ ಅಂಗಡಿ ಮಾಲೀಕರೇ ಅಧಿಕಾರಿಗಳಂತೆ ಮಾಹಿತಿ ನೀಡುತ್ತಿದ್ದಾರೆ. ಬಿತ್ತನೆ ಆರಂಭದಲ್ಲೇ ರೈತರ ಸಭೆ ಕರೆದು ಯಾವ ಯಾವ ಬೆಳೆಗೆ ಎಷ್ಟೆಷ್ಟು ರಸಗೊಬ್ಬರ, ಔಷಧ ಹಾಕುವಂತೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಅತಿಯಾದ ಮಳೆಯಾಗುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ಬೆಳೆಗಳಿಗೆ ಹಾನಿಯಾಗಲಿದೆ. ಹತ್ತಿ, ಮೆಣಸಿನಕಾಯಿ,ತೊಗರಿ, ಸೂರ್ಯಕಾಂತಿ ಬೆಳೆದಿದ್ದು ಹಾನಿ ಸಂಭವಿಸುತ್ತಿದೆ. ಅತಿವೃಷ್ಟಿಯಂದು ತಾಲೂಕು ಆಡಳಿತ ಘೋಷಿಸಿದರೆ ಮಾತ್ರ ಸಮೀಕ್ಷೆ ನಡೆಸಿ ಪರಿಹಾರ ನೀಡಬಹುದು. ಇಲ್ಲದಿದ್ರೆ ಪರಿಹಾರ ಬರಲ್ಲ.  ಡಾ| ಎಸ್‌. ಪ್ರಿಯಾಂಕ್‌, ಕೃಷಿ ಸಹಾಯಕ ನಿರ್ದೇಶಕಿ

 ಸತತ ಬೆಳೆಯಿಂದಾಗಿ ರೈತರು ಬೆಳೆನಷ್ಟ ಅನುಭವಿಸಬೇಕಾಗಿದೆ. ಹತ್ತಿ ಕಾಯಿ ಉದುರುತ್ತಿದ್ದು, ತಾಲೂಕಾಡಳಿತ ಮತ್ತು ಕೃಷಿ ಅಧಿಕಾರಿಗಳು ಬೆಳೆಗಳ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು.  ಶಬ್ಬೀರ ಜಾಲಹಳ್ಳಿ, ಕೆಪಿಆರ್‌ಎಸ್‌ ಉಪಾಧ್ಯಕ್ಷ

 

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.