ಪೃಥ್ವಿ ಶಾ ಅರ್ಧ ಶತಕದಾಟ: ಚೆನೈಗೆ ಗೆಲುವಿಗೆ 176 ರನ್ ಗಳ ಗುರಿ! 


Team Udayavani, Sep 25, 2020, 9:32 PM IST

ಪೃಥ್ವಿ ಶಾ ಅರ್ಧ ಶತಕ: ಚೆನೈಗೆ ಗೆಲುವಿಗೆ 176 ರನ್ ಗಳ ಗುರಿ 

ದುಬಾೖ: ಮೊದಲ ಪಂದ್ಯವನ್ನು ಸೂಪರ್‌ ಓವರ್‌ನಲ್ಲಿ ಗೆದ್ದ ಖುಷಿಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ಶುಕ್ರವಾರ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಮುಖಾಮುಖೀಯಲ್ಲಿ 3 ವಿಕೆಟಿಗೆ 175 ರನ್‌ ಪೇರಿಸಿದೆ. ಆರಂಭಕಾರ ಪೃಥ್ವಿ ಶಾ ಅರ್ಧ ಶತಕ ಬಾರಿಸಿ ಮಿಂಚಿದರು.

ಮೊದಲ ಪಂದ್ಯದಲ್ಲಿ ಡೆಲ್ಲಿ ಓಪನಿಂಗ್‌ ಸಂಪೂರ್ಣ ವಿಫ‌ಲವಾಗಿತ್ತು. ಆದರೆ ಇಲ್ಲಿ ಪೃಥ್ವಿ ಶಾ-ಶಿಖರ್‌ ಧವನ್‌ ಎಡವಲಿಲ್ಲ. ಚೆನ್ನೈ ವೇಗಿಗಳನ್ನು ಬಹಳ ಎಚ್ಚರಿಕೆಯಿಂದ ನಿಭಾಯಿಸಿದರು. ವಿಕೆಟ್‌ ಉಳಿಸಿಕೊಂಡರೂ ರನ್‌ ಗತಿ ತುಸು ನಿಧಾನವಾಗಿಯೇ ಇತ್ತು. ಪವರ್‌ ಪ್ಲೇ ಅವಧಿಯಲ್ಲಿ ಬಂದದ್ದು 36 ರನ್‌ ಮಾತ್ರ. ಸ್ಯಾಮ್‌ ಕರನ್‌ ಮತ್ತು ಜೋಶ್‌ ಹ್ಯಾಝಲ್‌ವುಡ್‌ ಅವರ ಮೊದಲ ಸ್ಪೆಲ್‌ ಅತ್ಯಂತ ಪರಿಣಾಮಕಾರಿಯಾಗಿತ್ತು.

ಆದರೆ ರವೀಂದ್ರ ಜಡೇಜ ಅವರ ಸ್ಪಿನ್‌ ಎಸೆತಗಳು ಮತ್ತೆ ಹಳಿ ತಪ್ಪಿದವು. ಡೆಲ್ಲಿ ಆರಂಭಿಕರು ಸೇರಿ ಬಿರುಸಿನ ಆಟಕ್ಕಿಳಿದರು. ಜಡೇಜ ಅವರ 4 ಓವರ್‌ಗಳಿಂದ 44 ರನ್‌ ಸೋರಿ ಹೋಯಿತು.

ಇದನ್ನೂ ಓದಿ :ಡ್ರಗ್ಸ್‌ ಪ್ರಕರಣ : ನಾಳೆಯಾದರೂ ಸಿಸಿಬಿ ಪೋಲೀಸರ ವಿಚಾರಣೆಗೆ ಹಾಜರಾಗಲಿದ್ದಾರೆಯೇ ಅನುಶ್ರೀ?

ಲೆಗ್‌ ಸ್ಪಿನ್ನರ್‌ ಪೀಯೂಷ್‌ ಚಾವ್ಲಾ ಕೂಡ ಆರಂಭದಲ್ಲಿ ಪರಿಣಾಮಕಾರಿ ಆಗಿರಲಿಲ್ಲ. ಅವರ ಮೊದಲೆರಡು ಓವರ್‌ಗಳಲ್ಲಿ 24 ರನ್‌ ಹರಿದು ಹೋಯಿತು. ಆದರೆ 3ನೇ ಓವರಿನಲ್ಲಿ ಶಿಖರ್‌ ಧವನ್‌ ವಿಕೆಟ್‌ ಕೀಳುವ ಮೂಲಕ ಚೆನ್ನೈಗೆ ಮೊದಲ ಯಶಸ್ಸು ತಂದಿತ್ತರು. 27 ಎಸೆತಗಳಿಂದ 35 ರನ್‌ ಮಾಡಿದ್ದ ಧವನ್‌ (3 ಬೌಂಡರಿ, 1 ಸಿಕ್ಸರ್‌) ಅವರನ್ನು ಚಾವ್ಲಾ ಲೆಗ್‌ ಬಿಫೋರ್‌ ಬಲೆಗೆ ಬೀಳಿಸಿದರು. ಮೊದಲ ವಿಕೆಟಿಗೆ 10.4 ಓವರ್‌ಗಳಿಂದ 94 ರನ್‌ ಒಟ್ಟುಗೂಡಿತು. ಇದು 2016ರ ಬಳಿಕ ಡೆಲ್ಲಿಯ ಆರಂಭಿಕ ವಿಕೆಟಿಗೆ ಒಟ್ಟುಗೂಡಿದ ಅತ್ಯಧಿಕ ಮೊತ್ತವಾಗಿದೆ.

ಇದನ್ನೂ ಓದಿ :ಎಚ್ಚರ…ನಿಮ್ಮ Insta ಅಕೌಂಟ್ ಹ್ಯಾಕ್ ಆಗಬಹುದು ! ಹೇಗಂತೀರಾ ? ಇದನ್ನು ಓದಿ

ಇನ್ನೊಂದೆಡೆ ಧವನ್‌ಗಿಂತ ಬಿರುಸಿನ ಆಟವಾಡುತ್ತಿದ್ದ ಪೃಥ್ವಿ ಶಾ ಆಗಲೇ ಅರ್ಧ ಶತಕದ ಗಡಿ ದಾಟಿ ಮುನ್ನುಗ್ಗಿದ್ದರು. ಶಾ ಗಳಿಕೆ 43 ಎಸೆತಗಳಿಂದ 64 ರನ್‌. ಸಿಡಿಸಿದ್ದು 9 ಬೌಂಡರಿ ಹಾಗೂ ಒಂದು ಸಿಕ್ಸರ್‌. ಚಾವ್ಲಾ ಎಸೆತವನ್ನು ಮುನ್ನುಗ್ಗಿ ಬಾರಿಸುವ ಪ್ರಯತ್ನದಲ್ಲಿ ಎಡವಿದ ಶಾ ಅವರನ್ನು ಧೋನಿ ಸ್ಟಂಪ್ಡ್ ಮಾಡಿದರು. ಹೀಗೆ 9 ರನ್‌ ಅಂತರದಲ್ಲಿ ಆರಂಭಿಕರಿಬ್ಬರ ಆಟ ಮುಗಿಯಿತು.

3ನೇ ವಿಕೆಟಿಗೆ ಜತೆಗೂಡಿದ ರಿಷಭ್‌ ಪಂತ್‌ ಮತ್ತು ನಾಯಕ ಶ್ರೇಯಸ್‌ ಅಯ್ಯರ್‌ ಉತ್ತಮ ಜತೆಯಾಟವೊಂದನ್ನು ನಿಭಾಯಿಸಿದರು. 40 ಎಸೆತಗಳಿಂದ 58 ರನ್‌ ಒಟ್ಟುಗೂಡಿಸಿದರು. ಅಯ್ಯರ್‌ 22 ಎಸೆತಗಳಿಂದ 26 ರನ್‌ ಮಾಡಿದರೆ (1 ಬೌಂಡರಿ), ಪಂತ್‌ 25 ಎಸೆತಗಳಿಂದ 37 ರನ್‌ ಮಾಡಿ ಅಜೇಯರಾಗಿ ಉಳಿದರು (6 ಬೌಂಡರಿ). ಉರುಳಿದ 3 ವಿಕೆಟ್‌ಗಳಲ್ಲಿ 2 ಚಾವ್ಲಾ ಪಾಲಾಯಿತು.

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.