ಭೂ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ
Team Udayavani, Sep 26, 2020, 3:27 PM IST
ಬಂಗಾರಪೇಟೆ: ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಿರುವ ರೈತವಿರೋಧಿ ಎಪಿಎಂಸಿ ಭೂ ಸುಧಾರಣಾ ಹಾಗೂ ವಿದ್ಯುತ್ ಕಾಯ್ದೆಗಳ ತಿದ್ದುಪಡಿ ಸುಗ್ರೀವಾಜ್ಞೆಯನ್ನು ರೈತರ ಹಿತದೃಷ್ಟಿಯಿಂದ ಹಿಂಪಡೆಯಬೇಕೆಂದು ರೈತ ಸಂಘದಿಂದ ತಾಲೂಕುಕಚೇರಿಯ ಮುಂದೆ ಹೋರಾಟ ಮಾಡಿ ರಾಷ್ಟ್ರಪತಿಗಳನ್ನು ಒತ್ತಾಯಿಸಲಾಯಿತು.
ರೈತ ಸಂಘದ ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್ ಮಾತನಾಡಿ, ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿರುವುದು ರೈತ ಸಂಕುಲವನ್ನು ನಾಶ ಮಾಡಿ ಕಾರ್ಪೊರೇಟ್ ಕಂಪನಿಗಳ ಪರವಾಗಿ ಸರ್ಕಾರಗಳಿರುವುದು ಎನ್ನುವುದನ್ನು ಸಾಬೀತುಪಡಿಸುವುದಕ್ಕೆ ಹೊರತು ರೈತರ ಪರವಾಗಿಲ್ಲ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯಿಂದಾಗಿ ಕೃಷಿ ಜಮೀನಿನ ಮೇಲೆ ಕಪ್ಪು ಹಣ ಹೂಡಿಕೆಯಾಗಲಿದೆ ಎಂದು ಆರೋಪಿಸಿದರು.
ರೈತ ಸಂಘದ ಗೌರವಾಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್ ಮಾತನಾಡಿ, ಸರ್ಕಾರಗಳು ರೈತ ವಿರೋಧಿ, ದಲಿತ ವಿರೋಧಿ, ಜನವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಯ್ದೆಗಳ ತಿದ್ದುಪಡಿ ಸುಗ್ರೀವಾಜ್ಞೆ ವಾಪಸ್ಸು ಪಡೆಯದಿದ್ದರೆ ಸೋಮವಾರ ಬಂದ್ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಉಪ ತಹಶೀಲ್ದಾರ್ ಮುಕ್ತಾಂ ಭರವರು ಮನವಿ ಸ್ವೀಕರಿಸಿದರು. ಪ್ರತಿಭನೆಯಲ್ಲಿ ಧನುಷ್, ಸುದರ್ಶನ್, ಸತೀಶ್, ಮಿಥುನ್, ಅಮರೇಶ್, ಪ್ರಕಾಶ್, ಶಿವು, ಮುನೇಗೌಡ, ಶ್ರೀನಿವಾಸ್, ವೆಂಕಟೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ