ಟಾಟಾ ಕೋವಿಡ್‌ ಆಸ್ಪತ್ರೆ ತೆರೆಯಲು ಪಿಣರಾಯಿ ಸರಕಾರ ವಿಫಲ: ಕೆ. ಶ್ರೀಕಾಂತ್‌


Team Udayavani, Sep 26, 2020, 10:25 PM IST

ಟಾಟಾ ಕೋವಿಡ್‌ ಆಸ್ಪತ್ರೆ ತೆರೆಯಲು ಪಿಣರಾಯಿ ಸರಕಾರ ವಿಫಲ: ಕೆ. ಶ್ರೀಕಾಂತ್‌

ಕಾಸರಗೋಡು: ಕೋವಿಡ್‌ ಮಹಾಮಾರಿ ರೋಗ ಹರಡುವ ಆರಂಭ ಹಂತದಲ್ಲಿಯೇ ಟಾಟಾ ಗ್ರೂಪ್‌ ಚಟ್ಟಂಚಾಲ್‌ ತೆಕ್ಕಿಲ್‌ನಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಕೋವಿಡ್‌ ಆಸ್ಪತ್ರೆ ರೆಕಾರ್ಡ್‌ ವೇಗದಲ್ಲಿ ನಿರ್ಮಿಸಿ ರಾಜ್ಯ ಸರಕಾರಕ್ಕೆ ಹಸ್ತಾಂತರಿಸಿದರೂ ಇನ್ನೂ ಚಿಕಿತ್ಸೆ ಆರಂಭಿಸಲು ಸಾಧ್ಯವಾಗದಿರುವುದು ಪಿಣರಾಯಿ ಸರಕಾರದ ವಿಫಲತೆಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್‌ ಆರೋಪಿಸಿದರು.

ಟಾಟಾ ಕೋವಿಡ್‌ ಆಸ್ಪತ್ರೆ ಕೂಡಲೇ ಚಟುವಟಿಕೆ ಆರಂಭಿಸಬೇಕೆಂದು ಒತ್ತಾಯಿಸಿ ಬಿಜೆಪಿ ಉದುಮ ಮಂಡಲ ಸಮಿತಿ ಆಯೋಜಿಸಿದ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆ ಕಾಸರಗೋಡು ಜಿಲ್ಲೆಯನ್ನು ಹಿಂದಿನಿಂದಲೇ ಕಡೆಗಣಿಸುತ್ತಿದೆ. ಅದರ ಮುಂದುವರಿಕೆಯಾಗಿದೆ ನೇಮಕಗೊಂಡ ಡಾಕ್ಟರ್‌ಗಳನ್ನು, ಜ್ಯೂನಿಯರ್‌ ಡಾಕ್ಟರ್‌ಗಳನ್ನು ವರ್ಗಾವಣೆ ಮಾಡಿದ್ದು ಎಂದು ಅವರು ಹೇಳಿದರು.
ಉಕ್ಕಿನಡ್ಕ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆ ಪೂರ್ಣ ರೂಪದಲ್ಲಿ ಆರಂಭಿಸಬೇಕೆಂದೂ, ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ಗಿಂತ ಮೊದಲಿನಂತೆಯೇ ಇತರ ಚಿಕಿತ್ಸಾ ಸೌಕರ್ಯಗಳನ್ನು ಏರ್ಪಡಿಸಬೇಕೆಂದು ಶ್ರೀಕಾಂತ್‌ ಒತ್ತಾಯಿಸಿದರು.

ಎಡರಂಗ ಸರಕಾರ ನೂತನ ಉದ್ಯೋಗ ಸೃಷ್ಟಿಸಿದೆ ಎಂಬ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್‌ ಅವರ ಹೇಳಿಕೆ ಸುಳ್ಳಾಗಿದೆ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿನ ಹುದ್ದೆಗಳಲ್ಲಿ ಹೆಚ್ಚಿನ ಹುದ್ದೆಗಳು ಖಾಲಿಯಿದೆ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳ ವೆಂಟಿಲೇಟರ್‌ಗಳು, ಐಸಿಯುಗಳು ಚಟುವಟಿಕೆ ರಹಿತವಾಗಿದೆ. ಕೋವಿಡ್‌ ಸಾವು, ಹರಡುವಿಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಚಿಕಿತ್ಸಾ ವಲಯದಲ್ಲಿ ತಲೆದೋರುವ ನೌಕರರ ಕೊರತೆಯನ್ನು ಹಾಗೂ ಮೂಲ ಸೌಕರ್ಯಗಳ ಕೊರತೆಯನ್ನು ಪರಿಹರಿಸಬೇಕು ಕೆ.ಶ್ರೀಕಾಂತ್‌ ಒತ್ತಾಯಿಸಿದರು.

ಬಿಜೆಪಿ ಉದುಮ ಮಂಡಲ ಅಧ್ಯಕ್ಷ ಕೆ.ಟಿ.ಪುರುಷೋತ್ತಮನ್‌ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ವೇಲಾಯುಧನ್‌, ಜಿಲ್ಲಾ ಉಪಾಧ್ಯಕ್ಷ ನ್ಯಾಯವಾದಿ ಎ.ಸದಾನಂದ ರೈ, ಜಿಲ್ಲಾ ಕಾರ್ಯದರ್ಶಿ ಮನುಲಾಲ್‌ ಮೇಲತ್ತ್, ಜಿಲ್ಲಾ ಸೆಲ್‌ ಕೋರ್ಡಿನೇಟರ್‌ ಎನ್‌.ಬಾಬುರಾಜ್‌, ಕೃಷಿಕ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಕುಮಾರ್‌, ಯುವಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯನ್‌ ಮಧೂರು ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ಉದುಮ ಮಂಡಲ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣನ್‌ ನಂಬ್ಯಾರ್‌ ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಕೈಂತಾರ್‌ ವಂದಿಸಿದರು.

ಬಿಜೆಪಿ ನೇತಾರರಾದ ಸಿ. ಚಂದ್ರನ್‌, ಬಿ. ಜನಾರ್ದನನ್‌ ನಾಯರ್‌ ಕುತ್ತಿಕೋಲ್‌, ನ್ಯಾಯವಾದಿ ಬಿ.ರವೀಂದ್ರನ್‌, ಸಿ. ಕುಂಞಿಕಣ್ಣನ್‌, ತಂಬಾನ್‌, ಸದಾಶಿವನ್‌ ಮಣಿಯಂಗಾನಂ, ಕೆ. ಕಾತ್ಯಾìಯಿನಿ, ಮಹೇಶ್‌, ಗೋಪಾಲ್‌, ರಂಜಿತ್‌ ಕೆ.ಆರ್‌.ಗಂಗಾಧ‌ರನ್‌ ತಚ್ಚಂಗಾಡ್‌, ಎ.ಸಿಂಧು, ಕೆ.ಧರ್ಮಾವತಿ ಮೊದಲಾದವರು ನೇತೃತ್ವ ನೀಡಿದರು.

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.