ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌


Team Udayavani, Sep 27, 2020, 12:22 AM IST

ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌

ಅಬುಧಾಬಿ: ಸರ್ವಾಂಗೀಣ ಆಟ ಪ್ರದರ್ಶಿಸಿದ ಕೋಲ್ಕತಾ ನೈಟ್‌ರೈಡರ್ 2020ನೇ ಸಾಲಿನ ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಶನಿವಾರದ ಮುಖಾಮುಖೀಯಲ್ಲಿ ಸನ್‌ರೈಸರ್ ಹೈದರಾಬಾದ್‌ಗೆ 7 ವಿಕೆಟ್‌ಗಳ ಸೋಲುಣಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಹೈದರಾಬಾದ್‌ 4 ವಿಕೆಟಿಗೆ ಕೇವಲ 142 ರನ್‌ ಗಳಿಸಿದರೆ, ಕೆಕೆಆರ್‌ 18 ಓವರ್‌ಗಳಲ್ಲಿ 3 ವಿಕೆಟಿಗೆ 145 ರನ್‌ ಬಾರಿಸಿತು. ವಾರ್ನರ್‌ ಪಡೆ ಸತತ ಎರಡೂ ಪಂದ್ಯಗಳಲ್ಲಿ ಮುಗ್ಗರಿಸಿತು.

ಚೇಸಿಂಗ್‌ ವೇಳೆ ಆರಂಭಕಾರ ಶುಭಮನ್‌ ಗಿಲ್‌ ಮತ್ತು ಇಯಾನ್‌ ಮಾರ್ಗನ್‌ ಮುರಿಯದ 4ನೇ ವಿಕೆಟಿಗೆ 92 ರನ್‌ ಪೇರಿಸಿದರು. ಗಿಲ್‌ 70 (62 ಎಸೆತ, 5 ಬೌಂಡರಿ, 2 ಸಿಕ್ಸರ್‌) ಮತ್ತು ಮಾರ್ಗನ್‌ 42 ರನ್‌ (29 ಎಸೆತ, 3 ಬೌಂಡರಿ, 2 ಸಿಕ್ಸರ್‌) ರನ್‌ ಬಾರಿಸಿ ಅಜೇಯರಾಗಿ ಉಳಿದರು.

ಕೆಕೆಆರ್‌ ಬಿಗಿ ದಾಳಿ
ಡೇವಿಡ್‌ ವಾರ್ನರ್‌ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಳ್ಳುವ ನಿರ್ಧಾರಕ್ಕೆ ಬಂದರು. ಆದರೆ ಜಾನಿ ಬೇರ್‌ಸ್ಟೊ ಐದೇ ರನ್ನಿಗೆ ನಿರ್ಗಮಿಸಿದ್ದು ತಂಡಕ್ಕೆ ದೊಡ್ಡ ಆಘಾತವಿಕ್ಕಿತು. ಅವರನ್ನು ಬೌಲ್ಡ್‌ ಮಾಡುವ ಮೂಲಕ ಪ್ಯಾಟ್‌ ಕಮಿನ್ಸ್‌ ಕಳೆದ ಪಂದ್ಯದ ವೈಫ‌ಲ್ಯವನ್ನು ಬದಿಗೊತ್ತಿದರು. ಅವರು ಮೊದಲ ಸ್ಪೆಲ್‌ನ 3 ಓವರ್‌ಗಳಲ್ಲಿ ನೀಡಿದ್ದು ಬರೀ 11 ರನ್‌.

ಇನ್ನೊಂದು ಬದಿಯಲ್ಲಿ ನಾಯಕ ವಾರ್ನರ್‌ ಕ್ರೀಸ್‌ ಆಕ್ರಮಿಸಿಕೊಳ್ಳುವ ಸೂಚನೆ ನೀಡಿದರೂ ಅವರಿಗೆ ಲೆಗ್‌ಬ್ರೇಕ್‌ ಬೌಲರ್‌ ವರುಣ್‌ ಚಕ್ರವರ್ತಿ ಎಸೆತವೊಂದು ವಂಚಿಸಿತು. 36 ರನ್‌ ಮಾಡಿದ ವಾರ್ನರ್‌ ಕಾಟ್‌ ಆ್ಯಂಡ್‌ ಬೌಲ್ಟ್ ಆಗಿ ವಾಪಸಾದರು. 30 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ, ಒಂದು ಸಿಕ್ಸರ್‌ ಒಳಗೊಂಡಿತ್ತು.

ನಿಧಾನ ಗತಿಯ ಟ್ರ್ಯಾಕ್‌ ಆದ ಕಾರಣ ಮುನ್ನುಗ್ಗಿ ಬಾರಿಸುವುದು ಭಾರೀ ಸವಾಲಾಗಿತ್ತು. ಕಮಲೇಶ್‌ ನಾಗರಕೋಟಿ ಅವರಂತೂ 140 ಕಿ.ಮೀ.ಗೆ ಕಡಿಮೆ ಇಲ್ಲದಂತೆ ಎಸೆತಗಳನ್ನಿಕ್ಕುತ್ತಿದ್ದರು. ಹಾಗೆಯೇ 6 ಮಂದಿ ಸ್ಪೆಷಲಿಸ್ಟ್‌ ಬೌಲರ್‌ಗಳ ದಾಳಿಯನ್ನು ನಿಭಾಯಿಸಿ ನಿಲ್ಲುವುದು ಸುಲಭವಾಗಿರಲಿಲ್ಲ. ಬರೀ ಒಂಟಿ-ಅವಳಿ ರನ್ನುಗಳೇ ಬರುತ್ತಿದ್ದವು.

ಪಾಂಡೆ ಅರ್ಧ ಶತಕ
ವನ್‌ಡೌನ್‌ನಲ್ಲಿ ಬಂದ ಮನೀಷ್‌ 35 ಎಸೆತಗಳಿಂದ ಅರ್ಧ ಶತಕ ಪೂರ್ತಿಗೊಳಿಸಿದರು. ರಸೆಲ್‌ಗೆ ರಿಟರ್ನ್ ಕ್ಯಾಚ್‌ ನೀಡಿದ ಪಾಂಡೆ 38 ಎಸೆತಗಳಿಂದ 51 ರನ್‌ ಮಾಡಿ ತಂಡದ ಟಾಪ್‌ ಸ್ಕೋರರ್‌ ಎನಿಸಿದರು. ಇದರಲ್ಲಿ 3 ಫೋರ್‌, 2 ಸಿಕ್ಸರ್‌ ಸೇರಿತ್ತು.
ಇನ್ನೊಂದು ತುದಿಯಲ್ಲಿದ್ದ ವೃದ್ಧಿಮಾನ್‌ ಸಾಹಾ ಮಾತ್ರ ಚಡಪಡಿಸುತ್ತಲೇ ಉಳಿದರು. ಅವರು 30 ರನ್ನಿಗೆ 31 ಎಸೆತ ತೆಗೆದುಕೊಂಡರು (1 ಬೌಂಡರಿ, 1 ಸಿಕ್ಸರ್‌). ಪಾಂಡೆ-ಸಾಹಾ ಜೋಡಿಯಿಂದ 3ನೇ ವಿಕೆಟಿಗೆ 51 ಎಸೆತಗಳಿಂದ 62 ರನ್‌ ಒಟ್ಟುಗೂಡಿತು.

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.