ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? : ಪ್ರತಾಪ್ ಸಿಂಹ
Team Udayavani, Sep 27, 2020, 1:39 PM IST
ಮೈಸೂರು : ರೈತ ಪರ ಕಾಯ್ದೆ ಜಾರಿ ಮಾಡಿದ್ರೆ ರೈತರಿಗೆ ಆಗುವ ಅನುಕೂಲದ ಬಗ್ಗೆ ನಾವು ಯೋಚನೆ ಮಾಡ್ತಿವಿ. ಬಂದ್ ಮಾಡುವವರು ಬಂದ್ ನ ಲಾಭದ ಬಗ್ಗೆ ಯೋಚನೆ ಮಾಡುತ್ತಾರೆ ಹಾಗಾಗಿ ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? ರೈತನಿಗೆ ಮತ್ತು ಗ್ರಾಹಕನಿಗೆ ಲಾಭವಿಲ್ಲದ ದಳ್ಳಾಳಿಗೆ ಲಾಭವಿರುವ ಕಾಯ್ದೆ ತಿದ್ದುಪಡಿ ಮಾಡಿದ್ದು ತಪ್ಪಾ? ಎಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ರಾಜ್ಯಾದ್ಯಂತ ಸೋಮವಾರ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮಾತನಾಡಿದ ಸಂಸದ ಎಪಿಎಂಸಿ ಚುನಾವಣೆಗೆ ಲಕ್ಷಾಂತರ ಖರ್ಚು ಮಾಡಿ ಏಕೆ ನಡೆಸುತ್ತಾರೆ. ಲಾಭವಿಲ್ಲದೆ ಈ ರೀತಿ ಚುನಾವಣೆ ನಡೆಸಲು ಸಾಧ್ಯವೇ ? ರೈತರಿಂದಲೇ ಸೆಸ್ ಸುಲೀಗೆ ಮಾಡಿ ಲಾಭ ಮಾಡುತ್ತಿರುವವರು ದಳ್ಳಾಳಿಗಳು ಎಂದು ಹೇಳಿದರು.
ಸೂಪರ್ ಮಾರ್ಕೆಟ್ ಒಳಗೆ ಬಿಟ್ಟುಕೊಂಡಿದ್ದು ಯಾರು. ವಿರೋಧ ಮಾಡುವುದಿದ್ದರೇ ಸೂಪರ್ ಮಾರ್ಕೆಟ್ಗಳನ್ನೆ ವಿರೋಧ ಮಾಡಬೇಕಿತ್ತು.
ಇದನ್ನೂ ಓದಿ:ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ
ಈ ಬಂದ್ ನಲ್ಲಿ ರೈತರು ಭಾಗಿಯಾಗ್ತಿಲ್ಲ, ಆದ್ರೆ ರೈತರ ಹೆಸರಿನ ಸಂಘಟನೆಗಳು ಭಾಗಿಯಾಗ್ತಿವೆ. ಈ ಬಂದ್ನಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಕರ್ನಾಟಕ ಬಂದ್ ನಡೆಸುವ ಸಂಘಟನೆಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ.
ಸಂಸದ ತೇಜಸ್ವಿಸೂರ್ಯ ಬಿಜೆಪಿ ರಾಷ್ಟ್ರಿಯ ಯುವಮೋರ್ಚ ಅಧ್ಯಕ್ಷರಾಗಿ ಆಯ್ಕೆಯಾದ ವಿಚಾರಾದ ಬಗ್ಗೆ ಮಾತನಾಡಿದ ಸಂಸದ ಇದು ಕರ್ನಾಟಕ್ಕ ಸಿಕ್ಕ ಅತಿದೊಡ್ಡ ಮನ್ನಣೆಯಾಗಿದೆ. ಬಿಜೆಪಿ ಕರ್ನಾಟಕದ ವಿಚಾರದಲ್ಲಿ ಹೆಚ್ಚು ಪ್ರೀತಿ ಹೊಂದಿದೆ ಅದಕ್ಕಾಗಿ ರಾಷ್ಟ್ರೀಯ ಸಂಘಟನೆಯಲ್ಲಿ ಮೂವರಿಗೆ ಅವಕಾಶ ಸಿಕ್ಕಿದೆ. ಇದು ಕರ್ನಾಟಕದಲ್ಲಿ ಬಿಜೆಪಿ ಶಕ್ತಿಯನ್ನ ಬಿಂಬಿಸುತ್ತದೆ ಎಂದ ಸಂಸದ ಸಿ.ಟಿ.ರವಿ ಹಾಗೂ ರಾಜೀವ್ ಚಂದ್ರಶೇಖರ ಹಾಗೂ ತೇಜಸ್ವಿಸೂರ್ಯ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್