ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ


Team Udayavani, Sep 27, 2020, 2:12 PM IST

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ

ವಿಟ್ಲ: ಕರೋಪಾಡಿ ಗ್ರಾಮದ ತೆಂಕಬೈಲು ನಿವಾಸಿ, ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.27ರಂದು ನಿಧನ ಹೊಂದಿದರು. ಅವರು ಪುತ್ರ-ಹವ್ಯಾಸಿ ಭಾಗವತ-ಶಿಕ್ಷಕ ಮುರಳೀಕೃಷ್ಣ ಶಾಸ್ತ್ರಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ತನ್ನದೇ ಶೈಲಿಯ ಹಾಡುಗಾರಿಕೆಯಿಂದ ಕಲಾಭಿಮಾನಿಗಳ ಮನಗೆದ್ದಿದ್ದ ಅವರು ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಟ್ಠಲ ಶಾಸ್ತ್ರಿ, ಸಂಪಾಜೆ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ ಪ್ರಶಸ್ತಿಗಳಲ್ಲದೆ ಹಲವು ಪುರಸ್ಕಾರ, ಸಮ್ಮಾನಗಳಿಗೆ ಭಾಜನರಾಗಿದ್ದರು.

1944ರಲ್ಲಿ ಪ್ರಸಿದ್ಧ ಚಕ್ರಕೋಡಿ ಮನೆತನದ ತೆಂಕಬೈಲು ಕೃಷ್ಣ ಶಾಸ್ತ್ರಿ ಸಾವಿತ್ರಿಯಮ್ಮ ದಂಪತಿಯ ಪುತ್ರರಾಗಿ ಜನಿಸಿದ ತಿರುಮಲೇಶ್ವರ ಶಾಸ್ತ್ರಿಯವರು ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ತೆಂಕಬೈಲು ಎಂಬಲ್ಲಿ ವಾಸಿಸುತ್ತಿದ್ದರು.

ಇದನ್ನೂ ಓದಿ: ಆಧ್ಯಾತ್ಮ ಮತ್ತು ಪ್ರಕೃತಿಪ್ರಿಯರನ್ನು ಕೈ ಬೀಸಿ ಕರೆಯುತ್ತಿದೆ ಶೀರೂರು ಮಠ !

ಅವರು ಪೆರ್ಲದ ಶ್ರೀ ಪಡ್ರೆ ಚಂದು ಯಕ್ಷಗಾನ ತರಬೇತಿ ಕೇಂದ್ರದ ಹಿಮ್ಮೇಳ ಅಧ್ಯಾಪಕರಾಗಿ ಹಲವಾರು ಶಿಷ್ಯರನ್ನು ಹೊಂದಿದ್ದರು. ಹವ್ಯಾಸಿ ಭಾಗವತರಾಗಿಯೂ, ಕೆಲ ವರ್ಷ ವೃತ್ತಿ ಮೇಳಗಳಲ್ಲಿ ಭಾಗವತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೈರಂಗಳ, ಬಪ್ಪನಾಡು, ಮಲ್ಲ, ಮಧೂರು, ಇರಾ, ಕುಂಟಾರು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ.

ಸಂಬಂಧಿಕರಾದ ರಾಮ ಭಟ್, ಸುಳ್ಯ ಸುಬ್ರಾಯ ಭಟ್, ನಾರಾಯಣ ಭಟ್ ಅವರ ಪ್ರೋತ್ಸಾಹದಿಂದ ಹಿಮ್ಮೇಳ ಭಾಗವತಿಕೆಯಲ್ಲಿ ಆಸಕ್ತಿ ಬೆಳೆಸಿಕೊಂಡ ಅವರು, ಚೆಂಡೆ, ಮದ್ದಳೆ, ಕೊಳಲು ನುಡಿಸುವುದರಲ್ಲೂ ನಿಷ್ಣಾತರು. ಮಾಂಬಾಡಿ ನಾರಾಯಣ ಭಾಗವತರಿಂದ ಭಾಗವತಿಕೆಯ ಕಲೆಯನ್ನು ಕಲಿತುಕೊಂಡರೆ, ಬಜಕ್ಕಳ ಗಣಪತಿ ಭಟ್ಟರಿಂದ ಶಾಸ್ತ್ರೀಯ ಸಂಗೀತವನ್ನು ಅಭ್ಯಸಿಸಿದರು. ಹವ್ಯಾಸಿ ಭಾಗವತರಾಗಿಯೇ ಜನಪ್ರಿಯರಾಗಿದ್ದ ಇವರು, ಅಗರಿ ಶೈಲಿಯಿಂದ ಪ್ರಭಾವಿತರಾಗಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಹಲವಾರು ಹವ್ಯಾಸಿ ಆಟ, ಕೂಟಗಳಲ್ಲಿ ಭಾಗವತಿಕೆ ಮಾಡುತ್ತಲೇ ತೆಂಕಬೈಲು ಶೈಲಿಯಲ್ಲಿ ಪ್ರಭುತ್ವ ಸಾಧಿಸಿದ್ದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.