ನಾ| ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ
Team Udayavani, Sep 27, 2020, 4:15 PM IST
ಕಲಬುರಗಿ: ಸಾಮಾಜಿಕ ನ್ಯಾಯದಿಂದ ವಂಚಿತವಾದ ಮಾದಿಗ ಸಮಾಜಕ್ಕೆ ನ್ಯಾಯ ಒದಗಿಸಲು ನ್ಯಾ| ಎ.ಜಿ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಜನ ಜಾಗೃತಿ ಸಂಘರ್ಷ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ಮಾಡಲಾಯಿತು.
ನ್ಯಾ| ಎ.ಜಿ. ಸದಾಶಿವ ಆಯೋಗದ ವರದಿ ಜಾರಿ ಹಲವು ವರ್ಷಗಳ ಬೇಡಿಕೆಯಾಗಿದೆ. ಬಿಜೆಪಿ ಸರ್ಕಾರ ಯಾರ ಒತ್ತಡ ಹಾಗೂ ಪ್ರಭಾವಕ್ಕೆ ಒಳಗಾಗದೇ ಸಚಿವ ಸಂಪುಟದಲ್ಲಿ ವರದಿ ಮಂಡಿಸಬೇಕು. ಅದನ್ನು ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಪ್ರತಿಭಟನಾನಿತರರು ಆಗ್ರಹಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಶಿವಶರಣ ಮಾದರ ಚನ್ನಯ್ಯ ಅಧ್ಯಯನ ಪೀಠದ ಕಟ್ಟಡ ನಿರ್ಮಾಣಕ್ಕೆ ಐದು ಕೋಟಿ ರೂ. ಅನುದಾನ ಮಂಜೂರಾತಿಗೆ ಆದೇಶ ಹೊರಡಿಸಬೇಕು. ತಮಟೆ ಬಾರಿಸುವ ಸಮುದಾಯದ ಜನರಿಗೆ ಮಾಸಿಕ ವೇತನ ಜಾರಿ ಮಾಡಬೇಕು. ರಸ್ತೆ ಬದಿಯಲ್ಲಿ ಹಳೆ ಪಾದರಕ್ಷೆ ಹೋಲಿದು ಜೀವನ ಸಾಗಿಸುತ್ತಿರುವವರ ಸಮೀಕ್ಷೆ ಮಾಡಬೇಕು. ವಸತಿ ಯೋಜನೆಯಡಿ ನಿಜವಾದ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಡಬೇಕು. ಚರ್ಮ ಕುಟೀರ್ ಗಳ ಯಾವುದೇ ಲೋಪಗಳು ಆಗದಂತೆ ತಡೆಯಬೇಕು. ಸರ್ಕಾರಿ ಯೋಜನೆಗಳ ಬಗ್ಗೆ ಪ್ರಚಾರ ಮಾಡದ ಜಿಲ್ಲಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಬೇಕು ಹಾಗೂ ವಸತಿ ರಹಿತರ ಸಮೀಕ್ಷೆ ನಡೆಸಬೇಕೆಂದು ಡಿಸಿ ಮೂಲಕ ಸಿಎಂಗೆ ಮನವಿ ಮಾಡಲಾಯಿತು.
ರುಕ್ಕಪ್ಪ ಕಾಂಬಳೆ, ರಾಮಾ ಪೂಜಾರಿ, ಅಮೀರಸಾಬ ನದಾಫ್, ಜೈರಾಜ ಕಣಗಿಕರ, ವಿಜಯಕುಮಾರ ಪೂಜಾರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್