ನಾಳೆ ಜಿಲ್ಲೆ ಸಂಪೂರ್ಣ ಬಂದ್‌


Team Udayavani, Sep 27, 2020, 6:20 PM IST

ನಾಳೆ ಜಿಲ್ಲೆ ಸಂಪೂರ್ಣ ಬಂದ್‌

ಬಳ್ಳಾರಿ: ಕೇಂದ್ರದ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತ ವಿರೋಧಿ ವಿವಿಧ ಕಾಯ್ದೆಗಳ ತಿದ್ದುಪಡಿಗಳನ್ನು ವಿರೋಧಿಸಿ ನಾನಾ ಪ್ರಗತಿಪರ ಸಂಘಟನೆಗಳು, ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಸೆ.28 ರಂದು ಸೋಮವಾರ ಅಖೀಲ ಭಾರತ ರೈತ ಸಮನ್ವಯ ಸಮಿತಿ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳುತ್ತಿರುವ ಕರ್ನಾಟಕ ಬಂದ್‌ ಬಳ್ಳಾರಿ ಜಿಲ್ಲೆಯಲ್ಲೂ ಆಚರಿಸಲಾಗುವುದು ಎಂದು ಸಮಿತಿಯ ಮುಖಂಡರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಕೆಪಿಆರ್‌ ಎಸ್‌ ಜಿಲ್ಲಾಧ್ಯಕ್ಷ ವಿ.ಎಸ್‌. ಶಿವಶಂಕರ್‌, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೋವಿಡ್‌ ಸೋಂಕು, ಲಾಕ್‌ಡೌನ್‌ ನೆಪವೊಡ್ಡಿ ಕೃಷಿ ಮಸೂದೆ, ಎಪಿಎಂಸಿ, ವಿದ್ಯುತ್ಛಕ್ತಿ, ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಿದೆ. ಈ ತಿದ್ದುಪಡಿ ಕಾಯ್ದೆಗಳಿಂದ ಕಾರ್ಪೋರೇಟ್‌ ಕಂಪನಿಗಳಿಗೆ ಅನುಕೂಲ ಕಲ್ಪಿಸಲಿವೆ.

ಕೇಂದ್ರ ಸರ್ಕಾರ ಮಾರುಕಟ್ಟೆಯನ್ನು ರೈತರ ಬಾಗಿಲಿಗೆ ಕೊಂಡೊಯ್ಯುವುದು ಎಂದು ಹೇಳುತ್ತಿದೆ. ಆದರೆ ರೈತರು ತಾವು ಬೆಳೆದ ಉತ್ಪನ್ನವನ್ನು ಎಪಿಎಂಸಿಗೆ ತರುವ ಮುನ್ನವೇ ಕೃಷಿ ಮುಂಗಡ ಒಪ್ಪಂದವಾಗಿದೆ. ಇದಕ್ಕೂ ಮುನ್ನ ಎಪಿಎಂಸಿಯಿಂದ ಹೊರಗೆ ಖರೀದಿಸಿದರೆ ಜೈಲು ಶಿಕ್ಷೆ ವಿಧಿಸಲಾಗುತ್ತಿತ್ತು. ಆದರೆ, ಇದೀಗ ನೇರವಾಗಿ ರೈತರ ಬಳಿಗೆ ಹೋಗಿ ಖರೀದಿಸಲು ಕಾರ್ಪೋರೇಟ್‌ ಕಂಪನಿಗಳಿಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಇದರಿಂದ ಎಪಿಎಂಸಿಗೆ ಲಭಿಸುತ್ತಿದ್ದ ಶೇ. 2ರಷ್ಟು ತೆರಿಗೆ ಹಣವೂ ಕಡಿತವಾಗಲಿದೆ. ಇದೊಂದು ಅವೈಜ್ಞಾನಿಕ ಕಾಯ್ದೆಯಾಗಿದ್ದು, ಸಣ್ಣ ವ್ಯಾಪಾರಿಗಳಿಗೂ ಮಾರಕವಾಗಿದೆ. ಹಿಂದುತ್ವದ ಹೆಸರಲ್ಲಿ ವಿದೇಶಿ ಕಂಪನಿಗಳಿಗೆ ಮಾರಾಟ ಮಾಡುವುದಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವೂ ದಿ. ಮಾಜಿ ಸಿಎಂ ದೇವರಾಜ ಅರಸು ಅವಧಿ ಯಲ್ಲಿ ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಗೆ ಇದೀಗ ಪುನಃ ತಿದ್ದುಪಡಿ ಮಾಡಿ ಜಾರಿಗೆ ತಂದಿದೆ. ಈ ಮೊದಲು ರೈತರಲ್ಲದವರಿಗೆ ಕೃಷಿ ಜಮೀನು ಖರೀದಿಗೆ ಅವಕಾಶ ಇರಲಿಲ್ಲ. ಆದರೆ, ಇದೀಗ 110 ಯುನಿಟ್‌ (1 ಯುನಿಟ್‌ 4.80 ಎಕರೆ) ಎಕರೆ ಜಮೀನನ್ನು ಒಬ್ಬರು ಖರೀದಿಸಲು ಅವಕಾಶ ಕಲ್ಪಿಸಿದೆ. ಈ ಕಾಯ್ದೆಗಳನ್ನು ವಿರೋಧಿ ಸಿ ಈಗಾಗಲೇ ಪಂಜಾಬ್‌, ಹರ್ಯಾಣ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ದೆಹಲಿಯಲ್ಲಿ 250 ರೈತ ಸಂಘಟನೆಗಳು ಹೋರಾಟ ನಡೆಸುತ್ತಿವೆ ಎಂದು ತಿಳಿಸಿದರು.

ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ಮಾತನಾಡಿ, ಈ ಕುರಿತು ಬೆಂಗಳೂರಿನಲ್ಲಿ ಹಲವಾರು ಸಂಘಟನೆಗಳು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರೂ ಫಲಕಾರಿಯಾಗಿಲ್ಲ. ಹೀಗಾಗಿ ಸೆ. 28ರಂದು ಸಂಪೂರ್ಣ ಬಂದ್‌ ಆಚರಿಸಲಾಗುವುದು ಎಂದವರು ತಿಳಿಸಿದರು. ಕರವೇ ಜಿಲ್ಲಾಧ್ಯಕ್ಷ ಚಾನಾಳ್‌ ಶೇಖರ್‌ ಮಾತನಾಡಿ, ಸೆ. 28ರಂದು ನಡೆಯುವ ರೈತರ ಬಂದ್‌ಗೆ ಕರವೇ ಸಂಘಟನೆ ಬೆಂಬಲ ಸೂಚಿಸುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಸಂಗನಕಲ್ಲು ಕೃಷ್ಣಾ, ರಂಜಾನ್‌ಸಾಬ್‌ ಇತರರು ಮಾತನಾಡಿದರು. ಇ. ಹನುಮಂತಪ್ಪ, ಪಾಲಿಕೆ ಮಾಜಿ ಸದಸ್ಯೆ ಪರ್ವಿನ್‌ಬಾಬು, ಕಾಂಗ್ರೆಸ್‌ ಮುಖಂಡ ಹುಮಾಯೂನ್‌ಖಾನ್‌, ಸಿಪಿಎಂನ ಜೆ.ಸತ್ಯಬಾಬು, ಗುರುಸಿದ್ದಮೂರ್ತಿ ಇದ್ದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.