“ಭಾರತವು ವಿಶ್ವದ ಜ್ಞಾನದ ಕೇಂದ್ರವಾಗಬೇಕು’
Team Udayavani, Sep 27, 2020, 7:44 PM IST
ಸಿದ್ದಾಪುರ, ಸೆ. 26: ಭಾರತೀಯ ಶಿಕ್ಷಣ, ಸಂಸ್ಕಾರ ರಾಷ್ಟ್ರ ನಿಷ್ಠೆಯನ್ನು ಬೆಳೆಸುತ್ತದೆ. ಭಾರತವು ವ್ಯಾಪಾರೀಕರಣದ ಮೇಲೆ ನಿಲ್ಲದೆ ಜ್ಞಾನ ಆಧಾರದ ಮೇಲೆ ನಿಂತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾಭಾರತಿ ಸಂಸ್ಥೆಯು ಭಾರತೀಯ ಶಿಕ್ಷಣವನ್ನು ನೀಡುವ ಕೆಲಸ ಮಾಡುತ್ತಿದೆ. ಜಗತ್ತಿನಲ್ಲಿ ಪರಿವರ್ತನೆಯ ಯುಗ ಆರಂಭಗೊಂಡಿದೆ. ಜಗತ್ತಿನ ಚಿತ್ತ ಭಾರತದತ್ತ ಸಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತೀಯ ಚಿಂತನೆ ಯುವಕರಲ್ಲಿ ಹರಿಯ ಬಿಡಬೇಕು. ಭಾರತವು ವಿಶ್ವದ ಜ್ಞಾನದ ಕೇಂದ್ರವಾಗಬೇಕು ಎಂದು ವಿದ್ಯಾಭಾರತಿ ಕರ್ನಾಟಕದ ಪ್ರಾಂತ್ಯದ ಕಾರ್ಯದರ್ಶಿ ವಸಂತ ಮಾಧವ ಕಲ್ಲಡ್ಕ ಅವರು ಹೇಳಿದರು.
ಅವರು ಸಿದ್ದಾಪುರ ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾಭಾರತಿ ಕರ್ನಾಟಕದ ವತಿಯಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.
ವಿದ್ಯಾಭಾರತಿಯ ಜಿಲ್ಲಾಧ್ಯಕ್ಷ ಟಿ. ಜಿ. ಪಾಂಡುರಂಗ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಿದ್ದಾಪುರ ಸರಸ್ವತಿ ವಿದ್ಯಾಲಯದ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕೃಷ್ಣವೇಣಿ ಸ್ವಾಗತಿಸಿದರು. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ ಹೈಕಾಡಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಶಿಕ್ಷಕಿಯರಾದ ಸರೋಜಾ ಮತ್ತು ಪೂರ್ಣಿಮಾ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಪ್ರಶಾಂತ ಪಿ. ಐರಬೈಲು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು