ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮನೆಗೆ ಕೆಪಿಸಿಸಿ ಅಧ್ಯಕ್ಷ ಭೇಟಿ-ಯೋಗಕ್ಷೇಮ ವಿಚಾರಣೆ
Team Udayavani, Sep 27, 2020, 8:45 PM IST
ಚಿಕ್ಕಬಳ್ಳಾಪುರ : ಕೋವಿಡ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ.ಮುನಿಯಪ್ಪ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಕ್ಷೇತ್ರದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜನರಲ್ಲಿ ಜಾಗೃತಿ ಮೂಡಿಸಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕವನ್ನು ಹೊಂದಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದ ಶಾಸಕ ವಿ.ಮುನಿಯಪ್ಪ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತೆಗಲಿ ಆಸ್ಪತ್ರೆಗೆ ದಾಖಲಾಗಿದ್ದರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಮನೆಯಲ್ಲಿರುವ ಶಾಸಕ ವಿ.ಮುನಿಯಪ್ಪ ಅವರ ಸ್ವಗೃಹಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಶಾಸಕ ವಿ.ಮುನಿಯಪ್ಪ ಅವರ ಆರೋಗ್ಯವನ್ನು ವಿಚಾರಿಸಿ ಶೀಘ್ರದಲ್ಲಿ ಸಂಪೂರ್ಣವಾಗಿ ಗುಣಮುಖರಾಗಿ ಕ್ಷೇತ್ರದ ಜನರ ಸೇವೆಯಲ್ಲಿ ಮತ್ತೊಮ್ಮೆ ಸಕ್ರೀಯವಾಗಿ ತೊಡಗಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಶುಭ ಹಾರೈಸಿದರು.
ಇದೇ ವೇಳೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಸಂಬಂಧಪಟ್ಟಂತೆ ಶಾಸಕರು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿದರು ತಾವು ಮೊದಲು ಆರೋಗ್ಯವನ್ನು ಸುಧಾರಿಸಿಕೊಳ್ಳಿ ಕ್ಷೇತ್ರದ ಅಭಿವೃಧ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಶಶಿಧರ್ ಮುನಿಯಪ್ಪ, ಶಿಡ್ಲಘಟ್ಟ ಶಾಸಕರ ಆಪ್ತ ಕಾರ್ಯದರ್ಶಿ ನಾರಾಯಣಗೌಡ, ಶಾಸಕರ ಪತ್ನಿ ರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು