ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ
Team Udayavani, Sep 28, 2020, 1:13 PM IST
ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ರಾಜ್ಯಾದ್ಯಂತ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ತಮ್ಮ ಉತ್ಪನ್ನಗಳು ಎಲ್ಲಿ ಬೇಕಾದರೂ ಮಾರಾಟ್ ಮಾಡಬಹುದು. ನಾವು ಎಪಿಎಂಸಿ ಮುಚ್ಚುತ್ತಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಇದನ್ನೂ ಓದಿ:ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ
ನೀರಾವರಿ ಭೂಮಿಯನ್ನು ಖರೀದಿಸಿದವರು ಅದರಲ್ಲಿ ನೀರಾವರಿ ಕೃಷಿಯನ್ನೇ ಮಾಡಬೇಕು. ಇತರ ಚಟುವಟಿಕೆಗಳಿಗೆ ಉಪಯೋಗಿಸಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡದ ಭೂಮಿಯನ್ನು ಖರೀದಿಸಲು ಅವಕಾಶವಿಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನಾನುಕೂಲವಾಗದು ಎಂದರು.
ಕೃಷಿ ಜಮೀನನ್ನು ಕೈಗಾರಿಕೆಗಳಿಗೆ ಮಾರಾಟ ಮಾಡುವುದಿಲ್ಲ. ಆದರೆ ಅಭಿವೃದ್ದಿಗೆ ಕೈಗಾರಿಕೆಗಳ ಅಗತ್ಯವೂ ಇದೆ. ಯುವಜನರಿಗೆ ಉದ್ಯೋಗ ಸಿಗುತ್ತದೆ. ಬಂಜರು ಭೂಮಿಯನ್ನು ಮಾತ್ರ ಕೈಗಾರಿಕೆಗಳಿಗೆ ನೀಡಲಾಗುವುದು ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ರೈತರ ಅನುಕೂಲಕ್ಕಾಗಿ ಎಪಿಎಂಸಿ ಕಾಯ್ದೆ ಜಾರಿಗೆ ತಂದಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದು. ಮುಂದೆ ಶೇ. 85 ರಷ್ಟು ರೈತರು ತಿದ್ದುಪಡಿ ಕಾಯ್ದೆ ಒಪ್ಪಿಕೊಳ್ಳಲಿದ್ದಾರೆ. ನಾನೂ ಪ್ರವಾಸ ಕೈಗೊಂಡು ಜನರ ಮನವೊಲಿಸುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ