ಕೊನೆಗೂ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಎರಡು ಆಸೆಗಳು ಈಡೇರಲೇ ಇಲ್ಲ!
ಆ ಮನೆಯನ್ನು ಅವರು ವೇದ ಶಾಲೆ ನಡೆಸಲು ದಾನವಾಗಿ ನೀಡಿದ್ದರು.
Team Udayavani, Sep 28, 2020, 2:09 PM IST
ಹೈದರಬಾದ್:ಅಭಿಮಾನಿಗಳಿಂದ ಗಾನ ಗಂಧರ್ವ, ಗಾನ ಗಾರುಡಿಗ ಎಂದೆಲ್ಲಾ ಬಿರುದು ಪಡೆದಿದ್ದ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ 2020ರ ಸೆಪ್ಟೆಂಬರ್ 25ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಆದರೆ ಎಸ್ ಪಿಬಿಗೆ ಕೊನೆಗೂ ತನ್ನ ಆಸೆ ಈಡೇರಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬುದು ಬಹಿರಂಗಗೊಂಡಿದೆ.
ಬಾಲು ಎಂದೇ ಚಿರಪರಿಚಿತರಾಗಿದ್ದ ಎಸ್ ಪಿಬಿಗೆ ಪೂರ್ವಜರ ಮನೆಯಾದ ನಲ್ಲೂರಿನಲ್ಲಿ ತಂದೆ ಸಾಂಬಮೂರ್ತಿ ಹಾಗೂ ತಾಯಿ ಶಕುಂತಲಮ್ಮ ಅವರ ಪ್ರತಿಮೆಯನ್ನು ಸ್ಥಾಪಿಸುವ ಇಚ್ಛೆ ಹೊಂದಿದ್ದರು. ಆ ಮನೆಯನ್ನು ಅವರು ವೇದ ಶಾಲೆ ನಡೆಸಲು ದಾನವಾಗಿ ನೀಡಿದ್ದರು.
ಅಷ್ಟೇ ಅಲ್ಲ ತನ್ನ ಸ್ವಂತ ಪ್ರತಿಮೆಯನ್ನು ಮನೆಯಲ್ಲಿ ಸ್ಥಾಪಿಸಬೇಕೆಂಬ ಆಸೆ ಹೊಂದಿದ್ದರು. ಅದಕ್ಕಾಗಿ ಎಸ್ ಪಿಬಿ ಖ್ಯಾತ ಶಿಲ್ಪಿ ರಾಜ್ ಕುಮಾರ್ ಅವರಿಗೆ ಪ್ರತಿಮೆ ಕೆತ್ತನೆ ಮಾಡಿಕೊಡುವಂತೆ ಹೇಳಿದ್ದರು. ಆದರೆ ಪೋಷಕರ ಹಾಗೂ ತನ್ನ ಪ್ರತಿಮೆಯನ್ನು ಇರಿಸಬೇಕೆಂಬ ಆವರ ಆಸೆ ಕೊನೆಗೂ ಈಡೇರಿಲ್ಲ. ಆ ಪ್ರತಿಮೆಗಳು ಅಂತಿಮ ರೂಪ ಪಡೆಯುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದುರಂತ ಎಂದು ವರದಿ ತಿಳಿಸಿದೆ.
ತಮ್ಮ ಪೂರ್ವಜರ ಮನೆಯಲ್ಲಿ ತಂದೆ-ತಾಯಿಯ ಪ್ರತಿಮೆಗಳನ್ನು ಸ್ಥಾಪಿಸುವುದನ್ನು ಕಣ್ಣಾರೆ ನೋಡಬೇಕೆಂಬ ಬಾಲಸುಬ್ರಹ್ಮಣ್ಯಂ ಅವರ ಆಸೆ ಕೈಗೂಡಲಿಲ್ಲ. ಅವರಿಗೆ ಆಗಸ್ಟ್ 5ರಂದು ಕೋವಿಡ್ 19 ಸೋಂಕು ಇದ್ದಿರುವುದು ದೃಢಪಟ್ಟ ನಂತರ ಆಸ್ಪತ್ರೆಯಲ್ಲಿಯೇ ದೀರ್ಘಾವಧಿ ಚಿಕಿತ್ಸೆ ಪಡೆಯುತ್ತಿದ್ದರೂ. ಆದರೂ ಚಿಕಿತ್ಸೆ, ಸಾವಿರಾರು ಜನರ ಹಾರೈಕೆ ಫಲಿಸದೇ ಅವರು ಇಹಲೋಕ ತ್ಯಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ