ಸಂಗೀತ, ನೃತ್ಯ ಪರೀಕ್ಷೆಗೆ ಕೂಡಿ ಬರದ ಕಾಲ!

ರಾಜ್ಯದಲ್ಲಿ 65 ಕೇಂದ್ರಗಳು, 13 ಸಾವಿರ ವಿದ್ಯಾರ್ಥಿಗಳು

Team Udayavani, Sep 29, 2020, 5:32 AM IST

ಸಂಗೀತ, ನೃತ್ಯ ಪರೀಕ್ಷೆಗೆ ಕೂಡಿ ಬರದ ಕಾಲ!

ಸಾಂದರ್ಭಿಕ ಚಿತ್ರ

ಕುಂದಾಪುರ: ಪ್ರತಿವರ್ಷ ಮೇ ಎರಡನೇ ವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ವಿಶೇಷ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಗಳು ಕೋವಿಡ್ ಲಾಕ್‌ಡೌನ್‌ ಕಾರಣದಿಂದ ಮುಂದೂ ಡಲ್ಪಟ್ಟಿದ್ದು ದಿನ ನಿಗದಿಗೆ ಇನ್ನೂ ಕಾಲ ಕೂಡಿಬಂದಿಲ್ಲ. ಮಾ. 26ರ ವರೆಗೆ ದಂಡರಹಿತವಾಗಿ, ಮಾ. 31ರ ವರೆಗೆ ದಂಡಸಹಿತ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದ್ದು ಇದರಲ್ಲಿ ಬದಲಾವಣೆ ಮಾಡಿಲ್ಲ. ಆದ್ದರಿಂದ ಆಗ ಅರ್ಜಿ ಸಲ್ಲಿಸಿ ಪರೀಕ್ಷೆಗೆ ತಯಾರಿ ನಡೆಸಿದವರು ಇನ್ನೂ ದಿನಗಣನೆ ಮಾಡುತ್ತಿದ್ದಾರೆ.

ಮಕ್ಕಳಲ್ಲಿ ಆತಂಕ
ರಾಜ್ಯದ 65 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 13 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 20-25 ದಿನಗಳ ಕಾಲ ಪರೀಕ್ಷೆ ನಡೆಯುತ್ತದೆ. ಪಿಯುಸಿ, ಎಸೆಸೆಲ್ಸಿ, ನೀಟ್‌ ಮೊದಲಾದ ಪರೀಕ್ಷೆಗಳು ನಡೆದ ಕಾರಣ ಮತ್ತು ನವೆಂಬರ್‌ 1ರಿಂದ ಪದವಿ ಕಾಲೇಜುಗಳು ಆರಂಭ ವಾಗುವ ಹಿನ್ನೆಲೆಯಲ್ಲಿ ಸಂಗೀತ, ನೃತ್ಯ ಪರೀಕ್ಷೆಯನ್ನು ಶೀಘ್ರ ನಡೆಸುವಂತಾಗಲಿ ಎಂಬುದು ಪರೀಕ್ಷಾರ್ಥಿಗಳ ಆಶಯ. ಕೆಲವೆಡೆ ಭರತನಾಟ್ಯ, ಸಂಗೀತ ತರಗತಿಗಳು ಪುನರಾರಂಭಗೊಂಡಿದ್ದು ಪರೀಕ್ಷೆಗೆ ಪೋಷಕರು ಹಾಗೂ ಶಿಕ್ಷಕರು ಮಕ್ಕಳನ್ನು ಸಿದ್ಧಗೊಳಿಸುತ್ತಿದ್ದಾರೆ. ಪರೀಕ್ಷೆ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿಯಿಲ್ಲದ ಕಾರಣ ನೃತ್ಯ, ಸಂಗೀತ ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರಿಗೆ ಆತಂಕ ಉಂಟಾಗಿದೆ.

ಮೊಬೈಲ್‌ಗೆ ಎಸ್‌ಎಂಎಸ್‌
ಪರೀಕ್ಷಾ ಸಿದ್ಧತೆಗಳು ಆರಂಭವಾದಾಗ ಪರೀಕ್ಷಾರ್ಥಿ ಗಳ ಮೊಬೈಲ್‌ಗೆ ಪರೀಕ್ಷಾ ಮಂಡಳಿಯಿಂದ ಎಸ್‌ಎಂಎಸ್‌ ಬರಲಿದೆ. ಲಭ್ಯ ಮೂಲಗಳ ಮಾಹಿತಿ ಪ್ರಕಾರ ನವೆಂಬರ್‌ ನಿಂದ ಡಿಸೆಂಬರ್‌ ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಚಿವರು ಹಾಗೂ ಇಲಾಖಾ ಮಟ್ಟದಲ್ಲಿ ಅಂತಿಮ ಹಂತದ ಚರ್ಚೆ ನಡೆಯುತ್ತಿದೆ. ಇನ್ನೊಂದು ವಾರ ದಲ್ಲಿ ಪರೀಕ್ಷಾ ದಿನಗಳು ನಿಗದಿಯಾಗಿ ಘೋಷಣೆಯಾಗುವ ಸಾಧ್ಯತೆಯಿದೆ.

ಅರ್ಹತೆ
10 ವರ್ಷ ತುಂಬಿದವರು ಕಿರಿಯ(ಜೂನಿಯರ್‌) 17 ತುಂಬಿದವರು ಅಥವಾ ಕಿರಿಯ ಪರೀಕ್ಷೆ ತೇರ್ಗಡೆಯಾಗಿ ಮೂರು ವರ್ಷ ಆದವರು ಸೀನಿಯರ್‌ ಪರೀಕ್ಷೆ ಬರೆಯ ಬಹುದು ಅಥವಾ ಪಿಯುಸಿ ಯಲ್ಲಿ ಐಚ್ಛಿಕ ಸಂಗೀತ, ನೃತ್ಯ, ತಾಳವಾದ್ಯ ಪಠ್ಯವನ್ನು ಅಭ್ಯಸಿಸಿರ ಬೇಕು. ಅಂತಹವರಿಗೆ ಜೂನಿಯರ್‌ ಪರೀಕ್ಷೆ ಅಗತ್ಯವಿಲ್ಲ. ನೇರ ಸೀನಿಯರ್‌ ಪರೀಕ್ಷೆಗೆ ಹಾಜರಾಗ ಬಹುದು. ವಿದ್ವತ್‌ ಪೂರ್ವ ಪರೀಕ್ಷೆಗೆ 19 ವರ್ಷ ತುಂಬಿರ ಬೇಕು ಅಥವಾ ಸೀನಿಯರ್‌ ಮುಗಿಸಿ 3 ವರ್ಷಗಳಾಗಿರಬೇಕು. ಪದವಿ ತರಗತಿಯಲ್ಲಿ ಐಚ್ಛಿಕ ವಿಷಯ ವಾಗಿ ಇವುಗಳನ್ನು ಪಡೆದರೂ ನೇರ ಪರೀಕ್ಷೆಗೆ ಭಾಗಿ ಯಾಗಲು ಅವಕಾಶ ಇದೆ.

ಪ್ರಾಚೀನ ಪರೀಕ್ಷೆ
ಸಂಗೀತ, ನೃತ್ಯ, ತಾಳವಾದ್ಯ ಕಲೆಯ ಅಭಿವೃದ್ಧಿಯ ಜತೆಗೆ ಅದರ ಶಿಕ್ಷಕರಾಗಿ ಸರಕಾರಿ, ಖಾಸಗಿ ವಲಯದಲ್ಲಿ ನೇಮಕಾತಿ ಹೊಂದಲು ಈ ಪರೀಕ್ಷೆಗಳು ಸಹಕಾರಿ. 1929ರಿಂದ ಈ ಪರೀಕ್ಷೆಗಳು ನಡೆಯುತ್ತಿದ್ದು ಭರತನಾಟ್ಯ, ಸಂಗೀತ, ಮೃದಂಗ ಮೊದಲಾದವುಗಳಲ್ಲಿ ವಿದ್ವತ್‌ ಪದವಿಗಳಿಕೆಗೆ ಈ ಪರೀಕ್ಷೆ ಅನಿವಾರ್ಯ.

ಸಂಗೀತ, ತಾಳವಾದ್ಯ, ನೃತ್ಯ ಪರೀಕ್ಷೆಗಳು ಈ ವರ್ಷ ನಡೆಯ ಲಿದ್ದು ಕೋವಿಡ್‌- 19 ಕಾರಣದಿಂದ ಮುಂದೂಡಲ್ಪಟ್ಟಿತ್ತು. ಪರಿಸ್ಥಿತಿಯನ್ನು ನೋಡಿಕೊಂಡು ಪರೀಕ್ಷೆ ನಡೆಯಬೇಕಿದ್ದು ಸಚಿವರ ಸೂಚನೆಯಂತೆ ಪರೀಕ್ಷಾ ದಿನಾಂಕ ವನ್ನು ಶೀಘ್ರವೇ ಘೋಷಿಸಲಾಗುವುದು.
– ಪ್ರಸನ್ನ ಕುಮಾರ್‌ ಎಂ.ಎಸ್‌. ನಿರ್ದೇಶಕರು,  ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಇತರ ಪರೀಕ್ಷೆಗಳು)

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.