ಕ್ಯಾಟ್‌ ಕ್ಯೂ ವೈರಸ್‌ ಪ್ರವೇಶ


Team Udayavani, Sep 29, 2020, 6:35 AM IST

ಕ್ಯಾಟ್‌ ಕ್ಯೂ ವೈರಸ್‌ ಪ್ರವೇಶ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ವೈರಸ್‌ ಪ್ರಕರಣಗಳ ಸಂಖ್ಯೆ 60 ಲಕ್ಷ ದಾಟಿರುವಂತೆಯೇ ಮತ್ತೂಂದು ಆಘಾತಕಾರಿ ವಿಚಾರ ಹೊರಬಿದ್ದಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ವಿಜ್ಞಾನಿಗಳು ನೀಡಿದ ಮಾಹಿತಿ ಪ್ರಕಾರ, ಚೀನ ದಿಂದ “ಕ್ಯಾಟ್‌ ಕ್ಯೂ ವೈರಸ್‌ (Cat Que Virus-CQV)’ ಭಾರತ ಪ್ರವೇಶಿಸಿದೆ. ಅದೂ ಕರ್ನಾಟಕದಲ್ಲಿ ನಡೆಸಲಾಗಿರುವ ಎರಡು ಮಾದರಿ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಉಣ್ಣೆ, ಸೊಳ್ಳೆ ಮೊದಲಾದ ಕೀಟಗಳಿಂದ ಹರಡುವ ರೋಗ ಇದಾಗಿದೆ. ಇದು ಹಂದಿಗಳಲ್ಲಿ, ಕೆಲವು ಜಾತಿಯ ಸೊಳ್ಳೆಗಳಲ್ಲಿ ಕಂಡುಬರುತ್ತವೆ. ಈಗಾಗಲೇ ಕ್ಯಾಟ್‌ ಕ್ಯೂ ವೈರಸ್‌ ವಿಯೆಟ್ನಾಂ ಮತ್ತು ಚೀನ ದ ಕೆಲವು ಭಾಗಗಳಲ್ಲಿ ಕಂಡು ಬಂದಿದೆ.

ಪುಣೆಯಲ್ಲಿರುವ ರಾಷ್ಟ್ರೀ ಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ (ಎನ್‌ಐವಿ)ಯ ವಿಜ್ಞಾನಿಗಳು ನಡೆಸಿದ ಸಂಶೋಧನೆ ಪ್ರಕಾರ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಮಾನವರ ರಕ್ತದ ಮಾದರಿಗಳ ಪರೀಕ್ಷೆ ಪೈಕಿ ಎರಡರಲ್ಲಿ ಹೊಸ ಸೋಂಕು ದೃಢಪಟ್ಟಿದೆ.

ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ನಡೆಸಲಾಗಿರುವ ಪರೀಕ್ಷೆಯ ಪ್ರಕಾರ, ಕರ್ನಾಟಕದ ಇಬ್ಬರಿಗೆ ಒಂದು ಹಂತದಲ್ಲಿ ಕ್ಯಾಟ್‌ ಕ್ಯೂ ವೈರಸ್‌ ತಗಲಿರುವ ಸಾಧ್ಯತೆ ಇದೆ. ನಂತರದ ದಿನಗಳಲ್ಲಿ ಕ್ಯಾಟ್‌ ಕ್ಯೂ ವೈರಸ್‌ಗೆ ಪ್ರತಿಕಾಯ (CQV IgG antibodies) ಪತ್ತೆಯಾಗಿದೆ ಎಂದು ಅವರು ಕಂಡುಕೊಂಡಿದ್ದಾರೆ.

“ಲೈವ್‌ ಮಿಂಟ್‌’ನಲ್ಲಿ ಪ್ರಕಟಗೊಂಡ ವರದಿ ಪ್ರಕಾರ, ಸಸ್ತನಿ ವರ್ಗಕ್ಕೆ ಸೇರಿದ ಪರಾವಲಂಬಿಯೇ ಅದನ್ನು ಪ್ರಧಾನವಾಗಿ ರವಾನೆ ಮಾಡುತ್ತದೆ. ಹೀಗಾಗಿ ಇದು ದೇಶದ ಆರೋಗ್ಯ ವ್ಯವಸ್ಥೆಗೆ ಸವಾಲಾಗಿ ಕಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಐಸಿಎಂಆರ್‌ ವಿಜ್ಞಾನಿಗಳು ಹೇಳಿದ್ದಾರೆ. ದೇಶದಲ್ಲಿರುವ ಸೊಳ್ಳೆಯ ವರ್ಗಗಳು ಸಿಕ್ಯೂವಿಗೆ ಬೇಗ ತುತ್ತಾಗುತ್ತವೆ ಎಂದೂ ಉಲ್ಲೇಖೀಸಲಾಗಿದೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

60 ಲಕ್ಷ ದಾಟಿದ ಕೇಸುಗಳು: ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಯಿಂದ ಸೋಮವಾರ ಬೆಳಗ್ಗೆ 8 ಗಂಟೆವರೆಗೆ 82,170 ಹೊಸ ಕೇಸುಗಳು ಪತ್ತೆಯಾ ಗಿದ್ದು, 1,039 ಮಂದಿ ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ.  ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ದಾಟಿದೆ. ರವಿವಾರ ಒಂದೇ ದಿನ 7.09 ಲಕ್ಷ ಸ್ಯಾಂಪಲ್‌ಗ‌ಳ ಪರೀಕ್ಷೆ ನಡೆಸಲಾಗಿದೆ.

ಮುಂದಿನ ವರ್ಷ ಲಸಿಕೆ
ದೇಶದಲ್ಲಿ ಕೊರೊನಾಕ್ಕೆ ಲಸಿಕೆ 2021ರ ಮೊದಲ ತ್ತೈಮಾಸಿಕದಲ್ಲಿ ಲಭಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌ ತಿಳಿಸಿದ್ದಾರೆ. ಇದೇ ವೇಳೆ ಸೋಂಕು ಮತ್ತು ಅದಕ್ಕೆ ಸಂಬಂಧಿಸಿದ ಲಸಿಕೆಗಳ ಸಂಶೋಧನೆ ಬಗ್ಗೆ ಮಾಹಿತಿ ನೀಡುವ ವೆಬ್‌ಸೈಟ್‌ https://vaccine.icmr.org.in/ ಅನ್ನು ಸಚಿವರು ಇದೇ ಸಂದರ್ಭದಲ್ಲಿ ಅನಾವರಣ ಗೊಳಿಸಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.